Friday, September 20, 2024
ಸುದ್ದಿ

Big Breaking : ಗೌರಿ ಲಂಕೇಶ್ ಹತ್ಯೆ ಪ್ರಕರಣ, ಕೊಕ್ಕಡ ಮೂಲದ ಇನ್ನೋರ್ವ ವಶಕ್ಕೆ? – ಕಹಳೆ ನ್ಯೂಸ್

ಕಡಬ, ಜು 30 :  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೆಲ್ಯಾಡಿ ಸಮೀಪದ ಕೊಕ್ಕಡ ಮೂಲದ ಓರ್ವನನ್ನು ಭಾನುವಾರದಂದು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದ್ದು, ಆದರೆ ಪೊಲೀಸರು ಇದನ್ನು ಧೃಡಪಡಿಸಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಕ್ಕಡ ನಿವಾಸಿಯೋರ್ವನನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಕಳೆದ ಹಲವು ದಿನಗಳಿಂದ ಈತನನ್ನು ಹುಡುಕುತ್ತಿದ್ದ ಪೊಲೀಸರು ಭಾನುವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಪೊಲೀಸರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಇದ್ದು, ಒಂದು ಮೂಲದ ಪ್ರಕಾರ ಈತನನ್ನು ವಿಚಾರಣೆ ನಡೆಸಿ ಬಿಡಲಾಗಿದೆ ಎನ್ನಲಾಗುತ್ತಿದೆ. ಈತನನ್ನು ಬಿಡಲಾಗಿದೆಯೋ ಅಥವಾ ಗುಪ್ತ ಜಾಗದಲ್ಲಿಟ್ಟು ವಿಚಾರಣೆ ನಡೆಸಲಾಗುತ್ತಿದೆಯೋ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ವಶಕ್ಕೆ ಒಪ್ಪಿಸಲಾಗಿದೆಯೋ ಎಂಬ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ. ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆಯಲಾಗಿದೆಯೇ? ಅಥವಾ ಬೇರೆ ಯಾವುದೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದೆಯೇ? ಎಂಬುದು ಧೃಡಪಡಿಸಿಲ್ಲ.

ಜಾಹೀರಾತು