Friday, September 20, 2024
ಸುದ್ದಿ

ಭಗವದ್ಗೀತೆಯನ್ನು ಸುಟ್ಟು ದಲಿತ ಸಂಘಟನೆಗಳಿಂದ ವಿಕೃತ ಪ್ರತಿಭಟನೆ ; ವ್ಯಾಪಕ ಖಂಡನೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಇತ್ತೀಚೆಗೆ ದೆಹಲಿಯಲ್ಲಿ ಸಂವಿಧಾನ ಪ್ರತಿಗಳನ್ನು ಸುಟ್ಟು ಹಾಕಿದ್ದಕ್ಕೆ ಪ್ರತಿಕಾರವಾಗಿ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡು ಬೀದಿಯಲ್ಲಿ ಭಗವದ್ಗೀತೆ ಪ್ರತಿಗಳನ್ನು ಸುಡುವ ಮೂಲಕ ದಲಿತ ಸಂಘಟನೆಗಳು ಆಕ್ರೋಶ ಹೊರಹಾಕಿವೆ.

ಪ್ರತಿಭಟನೆಯಲ್ಲಿ ಹುಬ್ಬಳ್ಳಿ-ಧಾರವಾಡ ಸಂವಿಧಾನ ಉಳಿಸಿ ಹೋರಾಟ ವೇದಿಕೆ ಹಾಗೂ ವಿವಿಧ ದಲಿತ ಸಂಘಟನೆಗಳು ಭಾಗವಹಿಸಿದ್ದವು. ಚೆನ್ನಮ್ಮ ವೃತ್ತದಲ್ಲಿ ಸೇರಿದ್ದ ಪ್ರತಿಭಟನಾಕಾರರು, ಭಗವದ್ಗೀತೆ ಪ್ರತಿಗಳಿಗೆ ಬೆಂಕಿ ಹಚ್ಚಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ನೆಹರೂ ಮೈದಾನದ ಬಳಿಯ ಅಂಬೇಡ್ಕರ್ ಭವನದಿಂದ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ, ಬಳಿಕ ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದರು. ಅಲ್ಲಿ ಕೆಲ ಹೊತ್ತು ದಲಿತ ಗೀತೆ ಹಾಡಿ, ಸಂವಿಧಾನ ಸುಟ್ಟು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತ ಉಂಟಾಗಿ, ಸವಾರರು ಹಾಗೂ ಚಾಲಕರು ಪರದಾಡುವಂತಾಯಿತು.

ದಲಿತ ಸಂಘಟನೆಗಳ ಈ ಕೃತ್ಯವನ್ನು ಹಿಂದೂಪರ ಸಂಘಟನೆಗಳು ವ್ಯಾಪಕವಾಗಿ ಖಂಡಿಸಿದೆ.