Friday, September 20, 2024
ಸುದ್ದಿ

Big Breaking : ಮೂಡಬಿದಿರೆಯ ಪ್ರಶಾಂತ್ ಪೂಜಾರಿ ಹತ್ಯೆ ನಡೆಸಿದ ಆರೋಪಿ ಮೇಲೆ ತಲವಾರು ದಾಳಿ – ಕಹಳೆ ನ್ಯೂಸ್

ಮಂಗಳೂರು, ಸೆ 24 : ಮೂಡಬಿದಿರೆಯಲ್ಲಿ ಹೂವಿನ ವ್ಯಾಪಾರಿಯಾಗಿದ್ದ ಪ್ರಶಾಂತ್ ಪೂಜಾರಿ ಕೊಲೆ ಆರೋಪಿ ಮೇಲೆ ತಲವಾರು ದಾಳಿ ನಡೆದಿದೆ. ಇಂದು ಮುಂಜಾನೆ 5:30ರ ಸುಮಾರಿಗೆ ಮೂಡಬಿದಿರೆಯ ಗಂಟಲ್ ಕಟ್ಟೆ ಎಂಬಲ್ಲಿ ಘಟನೆ.

ಮೂಡಬಿದಿರೆ ನಿವಾಸಿ ಇಂತಿಯಾಜ್ ದಾಳಿಗೊಳಗಾದ ವ್ಯಕ್ತಿ. ಬೈಕ್ ನಲ್ಲಿ ಬಂದ ತಂಡದಿಂದ ತಲವಾರು ದಾಳಿ ನಡೆದಿದೆ. ದಾಳಿ ವೇಳೆ ತಪ್ಪಿಸಿಕೊಂಡ ಇಂತಿಯಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಮೂಡಬಿದಿರೆ ಠಾಣಾ ಪೋಲಿಸ್ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು