Friday, September 20, 2024
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಬಂಟ್ವಾಳದ ಹಿಂದೂ ಸಂಘಟನೆಯ ಕಾರ್ಯಕರ್ತ ನಿತಿನ್ ಪೂಜಾರಿ ಅನಾರೋಗ್ಯದಿಂದ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ, ಮೇ 15 : ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(೩೦) ಮೃತಪಟ್ಟ ಯುವಕ.‌ ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು. ಬಜರಂಗ ದಳ ಸೇರಿದಂತೆ ಇತರ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು