Friday, September 20, 2024
ಸುದ್ದಿ

ಇಲಿ ಜ್ವರ, ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು – ಕಹಳೆ ನ್ಯೂಸ್

ಮಂಗಳೂರು: ತೀವ್ರ ಜ್ವರದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಮಜ್ಜಾರು ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ವಾರದ ಹಿಂದೆ ಜ್ವರ ಬಂದು ಗುಣಮುಖರಾಗಿದ್ದರು. ಆದರೆ ಮತ್ತೆ ಜ್ವರ ಉಲ್ಬಣಗೊಂಡಿದ್ದರಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಲಿ ಜ್ವರದಿಂದಾಗಿ ಮೃತಪಟ್ಟಿದ್ದಾರೆ ಎಂಬ ಶಂಕೆ ಇದೆ. ಮೃತರು ಬಿಜೆಪಿಯ ಕೋಡಿಂಬಾಳ ಬೂತ್ ಸಮಿತಿಯ ಅಧ್ಯಕ್ಷರಾಗಿದ್ದರು.

ಜಾಹೀರಾತು