Saturday, September 21, 2024
ಸುದ್ದಿ

ತುಳುನಾಡೋಚ್ಛಯ ಅಂಗವಾಗಿ ತುಳುನಾಡ ಬಾಲೆ ಬಂಗಾರ್- 2018, ಮಕ್ಕಳ ಫೋಟೋ ಸ್ಪರ್ಧೆ – ಕಹಳೆ ನ್ಯೂಸ್

ಮಂಜೇಶ್ವರ:- ತುಳುನಾಡ ಬಾಲೆ ಬಂಗಾರ್ ಸಮಿತಿ ತುಳುವೆರೆ ಆಯನೊ ಕೂಟ ಮಂಜೇಶ್ವರ ಇದರ ಆಶ್ರಯದಲ್ಲಿ ಬಸ್ರೂರಿನಲ್ಲಿ ನಡೆಯಲಿರುವ ತುಳುನಾಡೋಚ್ಛಯ-2018 ರ ಅಂಗವಾಗಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಾರ್ಕ್ @ ಅರ್ಪಿಸುವ ತುಳುನಾಡ ಬಾಲೆ ಬಂಗಾರ್- 2018 ಮುದ್ದು ಮಕ್ಕಳ ಫೋಟೋ ಸ್ಪರ್ಧೆ- ಸೀಸನ್ 3 ಕಾರ್ಯಕ್ರಮ ನಡೆಯಲಿದೆ. ಸ್ಪರ್ಧೆಯಲ್ಲಿ 4 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಭಾಗವಹಿಸಲು ಅವಕಾಶ, ಭಾಗವಹಿಸುವ ಮಕ್ಕಳ ಪೋಷಕರು ತಮ್ಮ ಮಕ್ಕಳ ಭಾವಚಿತ್ರವನ್ನು 6ಘಿ9 ಸೈಜ್ ನಲ್ಲಿ 1 ಭಾವಚಿತ್ರವನ್ನು ಮಾತ್ರ ಕಳುಹಿಸತಕ್ಕದ್ದು.

ಭಾವ ಚಿತ್ರದ ಹಿಂದೆ ಮಗುವಿನ ಹೆಸರು, ಹುಟ್ಟಿದ ದಿನ, ತಿಂಗಳು, ಇಸವಿ, ಪೋಷಕರ ಹೆಸರು, ವಿಳಾಸವನ್ನು ಸ್ಪಷ್ಟವಾಗಿ ಬರೆದಿರತಕ್ಕದ್ದು, ತುಳುನಾಡಿನ ಸಂಸ್ಕøತಿ, ಸಂಸ್ಕಾರಗಳನ್ನು ಬಿಂಬಿಸುವ ರೀತಿಯಲ್ಲಿನ ಫೋಟೋಗಳಿಗೆ ಪ್ರಾಮಖ್ಯತೆ, ಸ್ಪರ್ಧೆಯು ಕಾಸರಗೋಡು ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆ, ಕೊಡಗು ಜಿಲ್ಲೆ, ಉಡುಪಿ ಜಿಲ್ಲೆ, ಹಾಸನ ಜಿಲ್ಲೆ, ಚಿಕ್ಕಮಂಗಳೂರು ಜಿಲ್ಲೆಗೆ ಮಾತ್ರ ಸೀಮಿತ, ಫೋಟೋಗಳನ್ನು ಕೊರಿಯಾರ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಅಕ್ಟೋಬರ್ ತಿಂಗಳ 31ರ ಒಳಗೆ ತಲುಪುವಂತೆ ಕಳುಹಿಸಿತಕ್ಕದ್ದು.

ಜಾಹೀರಾತು
ಜಾಹೀರಾತು
ಜಾಹೀರಾತು

ನವೆಂಬರ್ 13ರಂದು ಹೊಸಂಗಡಿ ಹಿಲ್‍ಸೈಡ್ ಸಭಾಭವನದಲ್ಲಿ ಜರಗಲಿರುವ ತುಳುನಾಡ ಬಾಲೆ ಬಂಗಾರ್ -2018 ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳ ಪೋಷಕರು, ಶ್ರೀ ಸಂಕಬೈಲ್ ಸತೀಶ್ ಅಡಪ್ಪ, ಅಧ್ಯಕ್ಷರು ತುಳುನಾಡ ಬಾಲೆ ಬಂಗಾರ್ ಸಮಿತಿ ತುಳುವೆರೆ ಆಯನೊ ಕೂಟ ಮಂಜೇಶ್ವರ, ಅನುಗ್ರಹ ಇಂಡಸ್ಟ್ರೀಸ್ ಹೊಸಂಗಡಿ, ಮಂಜೇಶ್ವರ -671323, ಕಾಸರಗೋಡು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿಗೆ 9447491189, 9746117895, ಸಂಪರ್ಕಿಸಲು ಕೋರಲಾಗಿದೆ.

ಜಾಹೀರಾತು