Friday, September 20, 2024
ಸುದ್ದಿ

ಅಕ್ಟೋಬರ್ 14ಕ್ಕೆ ಮಂಗಳೂರು ದಸರಾಗೆ ಸಿಎಂ ಚಾಲನೆ – ಕಹಳೆ ನ್ಯೂಸ್

ಮಂಗಳೂರು: ಅಕ್ಟೋಬರ್ 14ಕ್ಕೆ ಮಂಗಳೂರು ದಸರಾಗೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ವೈಭವದ ಮಂಗಳೂರು ದಸರಾ ಮಹೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 14ರಂದು ಸಂಜೆ 6 ಗಂಟೆಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 10ರಂದು ಕುದ್ರೋಳಿ ಕ್ಷೇತ್ರದಲ್ಲಿ ಕಂಗೊಳಿಸುವ ದರ್ಬಾರು ಮಂಟಪದಲ್ಲಿ ಗಣಪತಿ, ನವದುರ್ಗೆಯರು, ಶಾರದಾ ಮಾತೆ ಪ್ರತಿಷ್ಠಾಪನೆಯ ಮೂಲಕ ನವರಾತ್ರಿ ಮಹೋತ್ಸವ ಆರಂಭವಾಗಲಿದೆ. ಕರ್ಣಾಟಕ ಬ್ಯಾಂಕ್‍ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ನವರಾತ್ರಿ ಮಹೋತ್ಸವಕ್ಕೆ ದೀಪ ಬೆಳಗಿಸಿ ಚಾಲನೆ ನೀಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಸರಾ ಮಹೋತ್ಸವ ಅಂಗವಾಗಿ ಪ್ರತಿನಿತ್ಯ ದೇಶದ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಗರದ ಪ್ರಮುಖ ರಾಜರಸ್ತೆಗಳಿಗೆ ವಿದ್ಯುದ್ದೀಪಾಲಂಕಾರ ನಡೆಯುತ್ತಿದೆ. ಇದು ಮಾತ್ರವಲ್ಲದೆ ಡಿವೈಡರ್‍ಗಳಿಗೆ ಬಣ್ಣ ಬಳಿಯುವ ಕೆಲಸವನ್ನು ಮನಪಾ ನಡೆಸುತ್ತಿದೆ. ಅಕ್ಟೋಬರ್ 19ರಂದು ಶೋಭಾಯಾತ್ರೆ ನಡೆಯಲಿದ್ದು, ಈ ಬಾರಿ 70ಕ್ಕೂ ಅಧಿಕ ಟ್ಯಾಬ್ಲೋಗಳು, 50ಕ್ಕೂ ಅಧಿಕ ಕಲಾತಂಡಗಳು ಭಾಗವಹಿಸಲಿವೆ.

ಜಾಹೀರಾತು