Friday, September 20, 2024
ಸುದ್ದಿ

ಜನಾರ್ಧನ ಪೂಜಾರಿ ವಿರುದ್ಧದ ಚುನಾವಣಾ ಕೇಸನ್ನು ರದ್ದು ಮಾಡಿದ ಹೈಕೋರ್ಟ್ – ಕಹಳೆ ನ್ಯೂಸ್

ಮಂಗಳೂರು: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ಸಿಗ ಜನಾರ್ಧನ ಪೂಜಾರಿ ವಿರುದ್ಧದ ಚುನಾವಣಾ ಕೇಸನ್ನ ಹೈಕೋರ್ಟ್ ರದ್ದುಗೊಳಿಸಿದೆ. 2014 ರ ಲೋಕಸಭಾ ಚುನಾವಣೆಯಲ್ಲಿ ಜನಾರ್ಧನ ಪೂಜಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಇದೇ ವೇಳೆ ಪೂಜಾರಿಯವ್ರು ನಾಮಪತ್ರ ಸಲ್ಲಿಸಿದ ನಂತರ ಚುನಾವಣಾ ಆಯೋಗದ ಅನುಮತಿ ಇಲ್ದೇ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ಮಂಗಳೂರಿನ ಎರಡನೇ ಹೆಚ್ಚುವರಿ ಜೆ ಎಂ ಎಫ್ ಸಿ ನ್ಯಾಯಾಲಯ ಪೂಜಾರಿ ಅವ್ರಿಗೆ ಸಮನ್ಸ್ ಜಾರಿ ಮಾಡಿತ್ತು. ಈ ಸಮನ್ಸ್ ಹಾಗೂ ಪ್ರಕರಣವನ್ನ ರದ್ದುಗೊಳಿಸುವಂತೆ ಕೋರಿ ಪೂಜಾರಿಯವ್ರು ಹೈಕೋರ್ಟ್ ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನ ಪುರಸ್ಕರಿಸಿದ ಹೈಕೋರ್ಟ್ , ಪೂಜಾರಿ ವಿರುದ್ಧದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನ ರದ್ದುಗೊಳಿಸಿದೆ.

ಜಾಹೀರಾತು