Friday, September 20, 2024
ಸುದ್ದಿ

ಎ ಟಿ ಎಂ ಕಳ್ಳತನ ಮಾಡಲು ಪ್ರಯತ್ನಿಸಿದ ಆರೋಪಿಯ ಬಂಧನ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯಲ್ಲಿನ ಸಿಂಡಿಕೇಟ್ ಬ್ಯಾಂಕ್ ಎ. ಟಿ. ಎಂ ಅನ್ನು ಕಳ್ಳತನ ಮಾಡಲು ಪ್ರಯತ್ನಿಸಿದ ಆರೋಪಿಯನ್ನು ಸಿಸಿಟಿವಿ ಫುಟೇಜ್ ಆಧಾರದ ಮೇಲೆ ಆರೋಪಿ ಮಹಮ್ಮದ್ ಆಸೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಕಕ್ಕೆಜಾಡು ನಿವಾಸಿ ಎಂದು ಶಂಕಿಸಲಾಗಿಸದೆ. ಈತ ಇದಕ್ಕಿಂತ ಮುಂಚೆ ಚಾರ್ಮಾಡಿ ಮಸೀದಿಯಲ್ಲಿ ಕಾಣೆಕೆ ಹುಂಡಿ ಒಡೆದು 2000 ನಗದು ಕಳ್ಳತನ ಮಾಡಿದ್ದನು.

ಜಾಹೀರಾತು
ಜಾಹೀರಾತು
ಜಾಹೀರಾತು

ದಸ್ತಗಿರಿ ಮಾಡುವ ವೇಳೆ ಈ ಕಳ್ಳತನವನ್ನು ಒಪ್ಪಿಕೊಂಡಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು