Thursday, March 27, 2025

ಕ್ರೈಮ್

ಕ್ರೈಮ್ಬೆಂಗಳೂರುಸುದ್ದಿ

ಕುಡಿತ ಬಿಡುವಂತೆ ಬುದ್ಧಿವಾದ ಹೇಳಿದ ಅಪ್ಪನ ಕೊಂದು ಪರಾರಿಯಾಗಿದ್ದವನ ಸೆರೆ -ಕಹಳೆ ನ್ಯೂಸ್

ಬೆಂಗಳೂರು: ಮದ್ಯ ಸೇವಿಸದಂತೆ ಬುದ್ಧಿವಾದ ಹೇಳಿದ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹತ್ಯೆಗೈದಿದ್ದ ಪುತ್ರನನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರ 4ನೇ ಬ್ಲಾಕ್‌ ನಿವಾಸಿ ರಘು (29) ಬಂಧಿತ ಆರೋಪಿ. ಈತ ಜ.10ರಂದು ತಂದೆ ಜಿ.ರಾಮಚಂದ್ರ (59) ಅವರ ಜೊತೆ ಜಗಳ ತೆಗೆದು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು...
ಕ್ರೈಮ್ಬೆಂಗಳೂರುಸುದ್ದಿ

ಮಾಲು ಸಮೇತ ಆಫ್ರಿಕಾ ಮೂಲದ ‘ಡ್ರಗ್ ಪೆಡ್ಲರ್’ ಅರೆಸ್ಟ್.!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಆಫ್ರಿಕಾ ಮೂಲದ 'ಡ್ರಗ್ಸ್ ಪೆಡ್ಲರ್' ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆAಗಳೂರಿನ ಉತ್ತರ ತಾಲೂಕಿನ ಚಿಕ್ಕಬಾಣಾವರದ ವಿನಾಯಕ ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸರು ಆರೋಪಿ ಕ್ರಿಸ್ಟೋಫರ್ ಎಂಬಾತನನ್ನು ಬಂಧಿಸಿ ಆತನಿಂದ 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಗಾಂಜಾ ಹಾಗೂ 166 ಗ್ರಾಂ ಎಂಡಿಎAಎA ಡ್ರಗ್ಸ್ ಸೀಜ್ ಮಾಡಿದ್ದಾರೆ. ಈ ಸಂಬAಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೋಟೆಕಾರ್ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ-ಕಹಳೆ ನ್ಯೂಸ್

ಮಂಗಳೂರು: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ...
ಕ್ರೈಮ್ಸಿನಿಮಾಸುದ್ದಿ

ಚಾಕು ಇರಿತಕ್ಕೊಳಗಾದ ನಟ ಸೈಫ್ ಅಲಿ ಖಾನ್‌ ಗಂಭೀರ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ –ಕಹಳೆ ನ್ಯೂಸ್

ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು ಮಿಂಚಿನ ಕಾರ್ಯಾಚಾರಣೆ ನಡೆಸಿ ಮೂವರು ಶಂಕಿತರನ್ನು ಬಂಧಿಸಿದ್ದಾರೆ.ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಕೆಲವೇ ಹೊತ್ತಿನಲ್ಲಿ ನಟನ ನಿವಾಸಕ್ಕೆ ಆಗಮಿಸಿದ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು. ಸೈಫ್ ಅಲಿ ಖಾನ್ ಮೇಲೆ ದಾಳಿ...
ಕ್ರೈಮ್ಸುದ್ದಿಹುಬ್ಬಳ್ಳಿ

ಪ್ರೇಯಸಿಯೊಂದಿಗಿನ ಮನಸ್ತಾಪದಿಂದಾಗಿ ಯುವತಿಯ ಖಾಸಗಿ ವಿಡಿಯೋ ವೈರಲ್ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ – ಕಹಳೆ ನ್ಯೂಸ್

ಹುಬ್ಬಳ್ಳಿ : ತನ್ನ ಪ್ರೇಯಸಿಯೊಂದಿಗೆ ಮನಸ್ತಾಪ ಉಂಟಾಗಿ ಯುವಕನೊಬ್ಬ ಆಕೆಯ ಖಾಸಗಿ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಂದೇಶ ಉಣಕಲ್ ಎಂದು ತಿಳಿದುಬಂದಿದ್ದು ಈತ ತನ್ನ ಪ್ರೇಯಸಿಯೊಂದಿಗೆ ಮನಸ್ತಾಪ ಮಾಡಿಕೊಂಡಿದ್ದಾನೆ. ಮನೆಯಿಂದ ನಾಪತ್ತೆಯಾಗಿದ್ದು ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಸಂದೇಶ, ಮೋಟಾರ್ ಬೈಕ್ ಶೋ ರೂಮ್ ನಲ್ಲಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಚಾಮರಾಜಪೇಟೆಯಲ್ಲಿ ಕಾಮಧೇನುವಿನ ಕೆಚ್ಚಲು ಕೊಯ್ದ ದುರುಳರು ; ಹಸುಗಳನ್ನು ಹೋರಾಟಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಕೆಚ್ಚಲು ಕತ್ತರಿಸಿದ್ರಾ!? – ಕಹಳೆ ನ್ಯೂಸ್

ಬೆಂಗಳೂರು: ಪ್ರತಿಭಟನೆಗೆ ಹಸುಗಳನ್ನು ಕರೆದುಕೊಂಡು ಹೋಗಿದ್ದಕ್ಕೆ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ಹೌದು. 6 ತಿಂಗಳ ಹಿಂದೆ ಚಾಮರಾಜಪೇಟೆಯ ಪಶು ಆಸ್ಪತ್ರೆ ಎತ್ತಂಗಡಿಗೆ ಪ್ಲ್ಯಾನ್ ನಡೆದಿತ್ತು. ಪ್ರತಿಭಟನೆಯ ವೇಳೆ ಈ ಹಸುಗಳನ್ನು ಮಾಲೀಕರು ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು.   ಕೆಲ ದಿನಗಳ ಹಿಂದೆ ಹಸುವಿನ ಗುದಾದ್ವಾರಕ್ಕೆ ಪೈಪ್ ಇಟ್ಟು ವಿಕೃತಿ ಮೆರೆದಿದ್ದರು. ಈಗ ಶನಿವಾರ ಕೆಚ್ಚಲುಗೆ ಚಾಕು ಹಾಕಿ ಇರಿದಿದ್ದಾರೆ. ಪಶು ಆಸ್ಪತ್ರೆ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮವಾಗಿ ಮಂಗಳೂರು ಹೊರವಲಯದ‌ ಸುರತ್ಕಲ್ ನ ಮುಕ್ಕದ‌ಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಅರೆಸ್ಟ್‌ – ಕಹಳೆ ನ್ಯೂಸ್

ಮಂಗಳೂರು, ಜ.10 : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನುರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಮಂಗಳೂರು ಹೊರವಲಯದ‌ ಮುಕ್ಕ ಎಂಬಲ್ಲಿ ದಾಳಿ ‌ನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂಬಾತನ್ನು ಬಂಧಿಸಿದ್ದಾರೆ. ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ ಅನರುಲ್ ಶೇಖ್ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯವನು. ಮೂರು ವರ್ಷಗಳ ಹಿಂದೆ ಇಂಡೋ- ಬಾಂಗ್ಲಾ ಅಂತಾರಾಷ್ಟ್ರೀಯ ಗಡಿರೇಖೆ ಲಾಲ್...
ಕ್ರೈಮ್ಚಿಕ್ಕಮಂಗಳೂರುಬೆಂಗಳೂರುರಾಜ್ಯಸುದ್ದಿ

ಕಾಡಿನ ರಹಸ್ಯ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿದ್ದಾರೆ ನಕ್ಸಲರು..! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಶರಣಾದ ನಕ್ಸಲರು ಇನ್ನೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು  ಕಾಡಿನ ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಾವೊಬ್ಬ ನಕ್ಸಲರು ಕೂಡ ಆಯುಧಗಳನ್ನು ಪೊಲೀಸರಿಗೆ ನೀಡಿಲ್ಲ. ಮುಂದಿನ ವಾರ ಪೊಲೀಸರು ನಕ್ಸಲರ ವಶಕ್ಕೆ ಪಡೆಯಲಿದ್ದು ಬಳಿಕ ಅಡಗಿಸಿಟ್ಟ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಪೊಲೀಸರು 6 ಮಂದಿ ನಕ್ಸಲರನ್ನು ರಾಷ್ಟ್ರೀಯ ತನಿಖಾ ದಳದ (NIA) ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ....
1 2 3 4 5 113
Page 3 of 113
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ