Friday, March 28, 2025

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯ

ಪ್ರತೀ ರವಿವಾರ ಸಂಜೆ ವಿಧಾನಸೌಧ ಆವರಣ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ -ಕಹಳೆ ನ್ಯೂಸ್

ಬೆಂಗಳೂರು: ಹಲವು ವರ್ಷಗಳಿಂದ ದೂರದಿಂದ ವಿಧಾನಸೌಧವನ್ನು ಕಣ್ತುಂಬಿಕೊಳ್ಳುತ್ತಿದ್ದ ನಾಡಿನ ಜನರಿಗೆ ಸಿಹಿ ಸುದ್ದಿ ನೀಡಲು ವಿಧಾನಸಭೆ ಕಾರ್ಯಾಲಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಪ್ರತೀ ರವಿವಾರ ಸಂಜೆ 4ರಿಂದ 7ರ ವರೆಗೆ ವಿಧಾನಸೌಧ ಆವರಣದೊಳಗೆ ಸಾರ್ವಜನಿಕರು ಮುಕ್ತವಾಗಿ ಪ್ರವೇಶಿಸುವ ಅವಕಾಶ ನೀಡಲು ಚಿಂತನೆ ನಡೆಸಿದೆ. ವಿಧಾನಸೌಧದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಆಯೋಜಿಸಿದ್ದ ಪುಸ್ತಕ ಮೇಳ ಯಶಸ್ವಿಯಾದ ಬೆನ್ನಲ್ಲೇ ಪ್ರೇರಣೆ ಪಡೆದಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರು, ವಾರಾಂತ್ಯದಲ್ಲಿ ವಿಧಾನಸೌಧ- ವಿಕಾಸ ಸೌಧ...
ದೆಹಲಿರಾಜ್ಯಸುದ್ದಿ

ಉತ್ತರಾಖಂಡದ ಕೇದಾರನಾಥದಲ್ಲಿ 2 ರೋಪ್‌ ವೇ ನಿರ್ಮಾಣ-ಕಹಳೆ ನ್ಯೂಸ್

ಹೊಸದಿಲ್ಲಿ: ಕೇದಾರನಾಥ ಮತ್ತು ಹೇಮಕುಂಡ ಸಾಹಿಬ್‌ ಧರ್ಮಕ್ಷೇತ್ರಗಳಿಗೆ ಸರ್ವಋತು ಸಂಪರ್ಕ ಒದಗಿಸುವುದಕ್ಕಾಗಿ 2 ರೋಪ್‌ವೇಗಳನ್ನು ನಿರ್ಮಾಣ ಮಾಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಉತ್ತರಾಖಂಡದ ಸ್ವರ್ಣಪ್ರಯಾಗದಿಂದ ಕೇದಾರ ನಾಥಕ್ಕೆ 12.9 ಕಿ.ಮೀ. ಹಾಗೂ ಗೋವಿಂದಘಾಟ್‌ನಿಂದ ಹೇಮಕುಂಡ ಸಾಹಿಬ್‌ಗ 12.9 ಕಿ.ಮೀ. ರೋಪ್‌ವೇ ನಿರ್ಮಾಣಕ್ಕೆ 6811 ಕೋಟಿ ರೂ. ವೆಚ್ಚ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಬುಧವಾರ ಅನುಮೋದನೆ ನೀಡಿದೆ. ಈ ರೋಪ್‌ವೇಗಳು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ-ಕಹಳೆ ನ್ಯೂಸ್

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಇಂದು (ಮಾರ್ಚ್ 6) ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಉಪಸ್ಥಿತಿಯಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ದವು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದೇ ಶಿವಶ್ರೀ ಅವರನ್ನು ಮನೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಅರೆಸ್ಟ್ – ಕಹಳೆ ನ್ಯೂಸ್

ಕಲಬುರಗಿ: ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ (Milind College) ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ (Congress) ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಖರ್ಗೆ ಕುಟಂಬದ ಒಡೆತನದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ: ರಾಜ್ಯದ7 ಜಿಲ್ಲೆಗಳಲ್ಲಿ ದಾಳಿ-ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​...
ಜಿಲ್ಲೆರಾಜ್ಯಸುದ್ದಿ

ಮಹಾಕುಂಭ ಮೇಳ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ಭೀಕರ ರಸ್ತೆ ಅಪಘಾತ; 03 ಮಂದಿ ಸಾವು, ಆರು ಜನ ಗಂಭೀರ-ಕಹಳೆ ನ್ಯೂಸ್

ಜೈಪುರ: ಲಾರಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 03 ಮಂದಿ ಮೃತಪಟ್ಟು, 06 ಮಂದಿ ಗಂಭೀರವಾಗು ಗಾಯಗೊಂಡಿರುವ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯ ಶಹಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಹಾಕುಂಭಮೇಳದಿಂದ ವಾಪಸ್ ಆಗುತ್ತಿದ್ದಾಗ ಕ್ರೂಸರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಭರತ್ (45), ಜಗದೀಶ್​ (40) ಹಾಗೂ ಅಮೃತ್ ಬಾಯಿ ಎಂದು ಗುರುತಿಸಲಾಗಿದೆ. ಅಪಘಾತದ ಕುರಿತು ಮಾಹಿತಿ ನೀಡಿರುವ ಸ್ಥಳೀಯ ಪೊಲೀಸ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇತಿಹಾಸದಲ್ಲಿ ಮೊದಲ ಬಾರಿಗೆ ಫೆ.27ರಿಂದ ವಿಧಾನಸೌಧದ ಆವರಣದಲ್ಲಿ 4 ದಿನಗಳ ಪುಸ್ತಕ ಮೇಳ ಆಯೋಜಿಸಿದ ಸ್ಪೀಕರ್ ಯು.ಟಿ.ಖಾದರ್ – ಕಹಳೆ ನ್ಯೂಸ್

ಬೆಂಗಳೂರು : ಇತಿಹಾಸದಲ್ಲಿ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ 4 ದಿನಗಳ ಪುಸ್ತಕ ಮೇಳ ನಡೆಯುತ್ತಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು. ಪುಸ್ತಕಮೇಳದ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದರು. ಫೆ.27, 28, ಮಾ.01 ಮತ್ತು 02 ರವರೆಗೆ ವಿಧಾನಸೌಧದಲ್ಲಿ ಪುಸ್ತಕಮೇಳ ನಡೆಯಲಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ. ಮಾ.2 ರಂದು ಸಾಧುಕೋಕಿಲ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಗಳು ನಡೆಯಲಿದೆ ಎಂದರು. ಲೇಖಕರು ಪುಸ್ತಕ ಬಿಡುಗಡೆ ಮಾಡುತ್ತಾರೆ....
ದೆಹಲಿರಾಜ್ಯಸುದ್ದಿ

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅಧಿಕಾರ ಸ್ವೀಕಾರ; ರಾಮ್​ಲೀಲಾ ಮೈದಾನದಲ್ಲಿ ಅದ್ಧೂರಿ ಪ್ರಮಾಣವಚನ ಕಾರ್ಯಕ್ರಮ-ಕಹಳೆ ನ್ಯೂಸ್

ನವದೆಹಲಿ: ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಇಂದು ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅಧಿಕಾರ ಸ್ವೀಕಾರ ಮಾಡಲಿದ್ದು, ಮಧ್ಯಾಹ್ನ 12 ಗಂಟೆಗೆ ಪ್ರಮಾಣ ವಚನ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ಕಳೆದ 2 ದಿನಗಳಿಂದ ದೆಹಲಿ ಬಿಜೆಪಿ ಘಟಕ ಕಾರ್ಯ ಕ್ರಮದ ಸಿದ್ದತೆ ಮಾಡಿಕೊಂಡಿದ್ದು, ಮೂರು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಒಂದು ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹಾಗೂ ಹೊಸ ಮುಖ್ಯಮಂತ್ರಿ ರೇಖಾ...
1 3 4 5 6 7 173
Page 5 of 173