Monday, April 7, 2025

ರಾಷ್ಟ್ರೀಯ

ರಾಷ್ಟ್ರೀಯ

ಪ್ರಧಾನಿಗೆ ಕೊಲೆ ಬೆದರಿಕೆ : ಮೋದಿಯವರ ಭದ್ರತೆ ಹೆಚ್ಚಿಸಿದ ಎನ್ ಐಎ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕೊಲೆ ಬೆದರಿಕೆ ಬಗ್ಗೆ ಇಮೇಲ್ ಬಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ)ಗೆ ಇಮೇಲ್ ಬಂದಿದ್ದು, ಇದಾದ ಬಳಿಕ ಕೇಂದ್ರ ಗುಪ್ತಚರ ಇಲಾಖೆ ಮತ್ತು ರಕ್ಷಣಾ ಗುಪ್ತಚರ ಇಲಾಖೆಗಳ ಹಿರಿಯ ಪ್ರತಿನಿಧಿಗಳನ್ನು ಹೊಂದಿರುವ ಬಹು ಸಂಸ್ಥೆ ಸಮನ್ವಯ ಕೇಂದ್ರ(ಎಂಎಸಿ)ವನ್ನು ಸಂಪರ್ಕಿಸಿ ಇಮೇಲ್ ಎಲ್ಲಿಂದ ಬಂದಿರುವುದು, ಕಳುಹಿಸಿದವರು ಯಾರು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದೆ. ಕಳೆದ ಆಗಸ್ಟ್...
ರಾಷ್ಟ್ರೀಯ

ಮೋದಿ ವೈಯಕ್ತಿಕ ವೆಬ್‍ಸೈಟ್‍ ಹ್ಯಾಕ್, ತೀವ್ರಗೊಂಡ ತನಿಖೆ – ಕಹಳೆ ನ್ಯೂಸ್

ನವದೆಹಲಿ, ಸೆ.3-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವೈಯಕ್ತಿಕ ವೆಬ್‍ಸೈಟ್‍ಗೆ ಲಿಂಕ್ ಆಗಿರುವ ಟ್ವಿಟರ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಈ ಕುಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಮಂತ್ರಿ ಅವರ ಕಾರ್ಯಾಲಯ ಮತ್ತು ಕೇಂದ್ರ ಗೃಹ ಸಚಿವಾಲಯ ತೀವ್ರ ತನಿಖೆ ನಡೆಸುತ್ತಿದೆ. ಚೀನಾದ ಪಬ್‍ಜಿ ವಿಡಿಯೋಗೇಮ್ ಸೇರಿದಂತೆ 120 ಮೊಬೈಲ್ ಆಪ್‍ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿ ಚೀನಾಗೆ ದೊಡ್ಡ ಶಾಕ್ ನೀಡಿದ ಬೆನ್ನಲ್ಲೇ ಪ್ರಧಾನಿಯವರ ವೆಬ್‍ಸೈಟ್ ಹ್ಯಾಕ್ ಆಗಿರುವುದು ಆತಂಕದ ಸಂಗತಿಯಾಗಿದೆ. ಪ್ರಧಾನಿ...
ಬೆಂಗಳೂರು

ಡ್ರಗ್ಸ್ ಕೇಸ್: ತಡರಾತ್ರಿ ಕಾರ್ಯಾಚರಣೆ – ರಾಗಿಣಿ ಆಯ್ತು, ಮತ್ತೊಬ್ಬ ಖ್ಯಾತ ನಟಿ ಸಂಜನಾ ಆಪ್ತ ಕೂಡ ಸಿಸಿಬಿ ವಶಕ್ಕೆ- ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಆಪ್ತನನ್ನು ವಶಕ್ಕೆ ಪಡೆದ ಬೆನ್ನಲ್ಲೇ ನಟಿ ಸಂಜನಾ ಆಪ್ತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾರ್ ಸಮೇತ ಮಧ್ಯರಾತ್ರಿ 3 ಗಂಟೆಗೆ ರಾಹುಲ್ ನನ್ನು ವಶಕ್ಕೆ ಪಡೆಯಲಾಗಿದೆ. ಸೆಲೆಬ್ರಿಟಿಗಳ ಪಾರ್ಟಿಗಳಿಗೆ ರಾಹುಲ್ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ....
ರಾಷ್ಟ್ರೀಯಸುದ್ದಿ

ಲಿಯೊ ಪಾರ್ಗಿಲ್ ಪರ್ವತ ಏರಿ ಭಾರತದ ಬಾವುಟ ಹಾರಿಸಿದ ಐಟಿಬಿಪಿ ಪರ್ವತಾರೋಹಿಗಳು..! – ಕಹಳೆ ನ್ಯೂಸ್

ಶಿಮ್ಲಾ,ಸೆ.2- ಅಂತಾರಾಷ್ಟ್ರೀಯ ಗಡಿಯಲ್ಲಿರುವ ಸಮುದ್ರ ಮಟ್ಟದಿಂದ 22,222 ಅಡಿ ಎತ್ತರದಲ್ಲಿರುವ ಲಿಯೊ ಪಾರ್ಗಿಲ್ ಪರ್ವತವನ್ನು ಐಟಿಬಿಪಿ ಪರ್ವತಾರೋಹಿಗಳು ಏರಿ ಭಾರತದ ಬಾವುಟ ಹಾರಿಸಿ ದೇಶದ ಕೀರ್ತಿ ಮೆರೆದಿದ್ದಾರೆ. 16 ಮಂದಿ ಪರ್ವತಾರೋಹಿಗಳ ತಂಡದಲ್ಲಿ 12 ಮಂದಿ ಪರ್ವತವನ್ನು ಏರಿದ್ದಾರೆ. ತಂಡದ ನಾಯಕತ್ವವನ್ನು ಉಪ ಕಮಾಂಡರ್ ಕುಲ್ದೀಪ್ ಸಿಂಗ್ ಮತ್ತು ಡೆಪ್ಯುಟಿ ಕಮಾಂಡೆಂಟ್ ಧರ್ಮೇಂದ್ರ ವಹಿಸಿದ್ದರು. ಇವರ ಜೊತೆ ಹೆಡ್ ಕಾನ್ಸ್ಟೇಬಲ್ ಪ್ರದೀಪ್ ನೆಗಿ ಎರಡನೇ ಬಾರಿ ಶಿಖರ ಏರಿದ್ದು ಇವರು...
ಕ್ರೈಮ್ಬೆಂಗಳೂರು

ಹೈ ಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ ; ಸೆಕ್ಸ್ ದಂಧೆ ನಡೆಸುತ್ತಿದ್ದ ಐವರು ಯುವತಿಯರು, ಗ್ರಾಹಕರು ಪೊಲೀಸ್ ವಶಕ್ಕೆ- ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯ ಸದಾಶಿವನಗರದಲ್ಲಿ ನಡೆಯುತ್ತಿದ್ದ ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸಮ್ಮರ್ ಸ್ಪಾ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಯುವತಿಯರು ಮತ್ತು ಮಾಲೀಕನನ್ನ ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ನಿಂದ ಸ್ಪಾಗಳನ್ನನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದ್ರೂ ಸ್ಪಾಗಳ ಹೆಸರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರಿಂದ ದಾಳಿ ನಡೆದಿದೆ. ಈ...
ರಾಷ್ಟ್ರೀಯ

ಸರ್ಕಾರಿ, ಮಿಲಿಟರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂತ್ಯ ಸಂಸ್ಕಾರ – ಕಹಳೆ ನ್ಯೂಸ್

ನವದೆಹಲಿ: ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಲ್ಲಿನ ಲೋದಿ ರಸ್ತೆಯಲ್ಲಿರುವ ಚಿತಾಗಾರಾದಲ್ಲಿ ನಡೆಯಿತು.ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು. ಪಿಪಿಇ ಕಿಟ್ ಧರಿಸಿದ ಕುಟುಂಬ ಸದಸ್ಯರು, ಸಂಬಂಧಿಕರು ಅಂತಿಮ ವಿಧಿ ವಿಧಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನು ಸಮರ್ಪಿಸಲಾಯಿತು. ಇದಕ್ಕೂ ಮುನ್ನ ರಾಜಾಜಿ ರಸ್ತೆಯಲ್ಲಿರುವ ಅವ ಮನೆಯಲ್ಲಿ ಪಾರ್ಥಿವ...
ರಾಷ್ಟ್ರೀಯ

ಚಿಕಿತ್ಸೆ ಬಗ್ಗೆ ವಾಟ್ಸ್‌ಆಯಪ್ ಸಂದೇಶ: ಸುಶಾಂತ್ ಸಾವಿನ ಪ್ರಕರಣಕ್ಕೆ ಹೊಸ ತಿರುವು – ಕಹಳೆ ನ್ಯೂಸ್

ಮುಂಬೈ: ತಾವು ಪಡೆಯುತ್ತಿರುವ ಚಿಕಿತ್ಸೆ ಹಾಗೂ ಔಷಧಕ್ಕೆ ಸಂಬಂಧಿಸಿದಂತೆ ನಟ ಸುಶಾಂತ್ ಸಿಂಗ್ ರಜಪೂತ್ ಅವರು ತಮ್ಮ ಸಹೋದರಿಗೆ ವಾಟ್ಸ್‌ಆಯಪ್ ನಲ್ಲಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಹೀಗಾಗಿ ಸುಶಾಂತ್ ಅವರ ಮಾನಸಿಕ ಆರೋಗ್ಯದ ಬಗ್ಗೆ ಕುಟುಂಬದವರಿಗೆ ಚೆನ್ನಾಗಿ ಗೊತ್ತಿತ್ತು ಎಂಬುದು ಬಯಲಾಗಿದೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ಸುಶಾಂತ್ ಮಾನಸಿಕ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂಬುದಾಗಿ ಅವರ...
ಬೆಂಗಳೂರು

‘ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನ’ – ಕಹಳೆ ನ್ಯೂಸ್

ಬೆಂಗಳೂರು: 'ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯಸರ್ಕಾರ ಬದ್ಧವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿಯೂ ರಾಜ್ಯವನ್ನು ಅಗ್ರಸ್ಥಾನಕ್ಕೆ ತರಲು ಎಲ್ಲರೂ ಶ್ರಮಿಸಬೇಕು' ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದರು. ಬೆಂಗಳೂರು ವಿಶ್ವವಿದ್ಯಾಲಯವು ಆಯೋಜಿಸಿದ್ದ ಐದು ದಿನಗಳ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರದ ಸಮಾರೋಪದಲ್ಲಿ ಮಾತನಾಡಿದ ಅವರು, 'ಅತ್ಯಾಧುನಿಕ ಆವಿಷ್ಕಾರ, ತಂತ್ರಜ್ಞಾನಗಳಿಗೆ ತಕ್ಕಂತೆ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿರುವ ಎನ್‌ಇಪಿ ರೂಪಿಸಲಾಗಿದೆ. ಈ ನೀತಿಯನ್ನು ಅನುಷ್ಠಾನಕ್ಕೆ ತರುವ ಮೊದಲ...
1 183 184 185 186 187 193
Page 185 of 193
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ