Recent Posts

Sunday, April 27, 2025

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನೇತ್ರಾವತಿ ಕಾಮಗಾರಿ, ಆದಷ್ಟು ಬೇಗ ಮುಗಿಸಿ ಕೊಡಲು ರಾ.ಹೆ. ಅಧಿಕಾರಿಗಳಿಗೆ ಸೂಚನೆ-ಕಹಳೆ ನ್ಯೂಸ್

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್.‌17ರ ನೇತ್ರಾವತಿಯ ಹಳೆಯ ಸೇತುವೆಯ ದುರಸ್ತಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆ ಸಭಾಧ್ಯಕ್ಷ ಯು.ಟಿ. ಖಾದರ್ ಎ.15ರ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ. ಸೇತುವೆಯ ಅಡಿ ಭಾಗದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ನುರಿತ ತಂಡದ 4-5 ಜನ ಮಾತ್ರ ನಿಂತು ಕೆಲಸ ಮಾಡುವ ಅವಕಾಶವಿದ್ದು,ಆದಾಗ್ಯೂ ಈ ತಿಂಗಳ 25ರ ಒಳಗಾಗಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಮುದ್ರದಲ್ಲಿ ಮುಳುಗಿ ಓರ್ವ ಸಾವು, ಇನ್ನೋರ್ವ ಯುವಕ ನಾಪತ್ತೆ -ಕಹಳೆ ನ್ಯೂಸ್

ಸುರತ್ಕಲ್‌: ಮದುವೆ ಸಂಭ್ರಮಕ್ಕೆ ಮುಂಬಯಿಯಿಂದ ಬಂದಿದ್ದ ಓರ್ವ ಬಾಲಕನ ಸಹಿತ ಇಬ್ಬರು ಸುರತ್ಕಲ್‌ ಬೀಚ್‌ನಲ್ಲಿ ಆಡುತ್ತಿದ್ದ ವೇಳೆ ಬೃಹತ್‌ ತೆರೆ ಅಪ್ಪಳಿಸಿ ನೀರು ಪಾಲಾಗಿದ್ದು ಓರ್ವ ಮೃತಪಟ್ಟು, ಇನ್ನೋರ್ವ ನಾಪತ್ತೆಯಾದ ದಾರುಣ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಮುಂಬಯಿಯ ವಿವೇಕ್‌ ಅವರ ಪುತ್ರ ಗ್ಯಾನ್‌ ಬಂಜನ್‌(18)ಎಂದು ಗುರುತಿಸಲಾಗಿದ್ದು, ಮುಂಬಯಿಯ ಉಮೇಶ್‌ ಅವರ ಪುತ್ರ ಅನೀಶ್‌ ಕುಲಾಲ್‌ (16) ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ರಾಜ್ಯ ತುರ್ತು ಸ್ಪಂದನ ತಂಡ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಮನೆ ಮೇಲ್ಛಾವಣಿ ಕುಸಿದು ಇಬ್ಬರಿಗೆ ಗಾಯ ಓರ್ವ ಅಪಾಯದಿಂದ ಪಾರು-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಮಣ್ಣಿನ ಗೋಡೆಯ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದು ಮನೆಯಲ್ಲಿದ್ದ ಮೂವರಲ್ಲಿ ಇಬ್ಬರು ಗಾಯಗೊಂಡ, ಓರ್ವರು ಅಪಾಯದಿಂದ ಪಾರಾದ ಘಟನೆ ಮಂಗಳವಾರ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿ ಸಂಭವಿಸಿದೆ. ನೆಟ್ಟಣದ ಕೃಷ್ಣ ಕುಟ್ಟಿ (65) ಹಾಗೂ ಅವರ ಮಗಳು ಶಾಂತಿ ಕೃಷ್ಣ (35) ಗಾಯಗೊಂಡಿದ್ದು, ಕೃಷ್ಣ ಕುಟ್ಟಿ ಅವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ. ಕೃಷ್ಣ ಕುಟ್ಟಿ ಅವರ ಮನೆಯವರು ಮಂಗಳವಾರ ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಆರೋಪಿಗಳ ಸಂಖ್ಯೆ 27ಕ್ಕೆ ಏರಿಕೆ-ಕಹಳೆ ನ್ಯೂಸ್

ಸುಳ್ಯ : ಬಿಜೆಪಿ ನಾಯಕ, ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇನ್ನೂ ನಾಲ್ವರು ಆರೋಪಿಗಳ ವಿರುದ್ಧ ಆರೋಪಪಟ್ಟಿ ದಾಖಲಿಸಿದೆ. ಇವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ಇದು ಈ ಪ್ರಕರಣದಲ್ಲಿ ಎನ್‌ಐಎ ಸಲ್ಲಿಸಿರುವ ದ್ವಿತೀಯ ಪೂರಕ ಆರೋಪ ಪಟ್ಟಿ ಆಗಿದ್ದು, ಇದರಲ್ಲಿ ಅಬ್ದುಲ್‌ ನಾಸಿರ್‌, ನೌಶಾದ್‌, ಅಬ್ದುಲ್‌ ರಹಮಾನ್‌ ಮತ್ತು ಅತೀಕ್‌ ಅಹ್ಮದ್‌ ಎಂಬವರನ್ನು ಹೆಸರಿಸಲಾಗಿದೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

6 ಕೋಟಿ ವೆಚ್ಚದಲ್ಲಿ ದಕ್ಷಿಣ ಕನ್ನಡದ ಎರಡು ಪ್ರಮುಖ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು. ಸಿಆರ್ಐಎಫ್ ಅನುದಾನದಡಿ ಪುತ್ತೂರು ತಾಲೂಕಿನ ಪರ್ಲಡ್ಕ ಮಾರ್ಗವಾಗಿ ಹಾದು ಹೋಗುವ ಸುಬ್ರಹ್ಮಣ್ಯ-ಮಂಜೇಶ್ವರ ರಸ್ತೆಯನ್ನು ಸುಮಾರು 3.12 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 100ನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಅಖಿಲ ಭಾರತೀಯ ಶೆಕ್ಷಣಿಕ ಮಹಾಸಂಘದ ABRMS ರಾಷ್ಟ್ರೀಯ ಸಹಸಂಘಟನಾ ಕಾರ್ಯದರ್ಶಿ ಗುಂಟ ಲಕ್ಷ್ಮಣ್ ಜೀ ಭೇಟಿ-ಕಹಳೆ ನ್ಯೂಸ್

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಅಖಿಲ ಭಾರತೀಯ ಶೆಕ್ಷಣಿಕ ಮಹಾಸಂಘದ ರಾಷ್ಟೀಯ ಸಹಸಂಘಟನಾ ಕಾರ್ಯದರ್ಶಿ ಗುಂಟ ಲಕ್ಷ್ಮಣ್ ಜೀ ಭೇಟಿ ನೀಡಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ. ಇವರನ್ನು ಸ್ವಾಗತಿಸಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿನ್ನಲೆ ಹಾಗೂ ಅದರ ಕಾರ್ಯಚಟುವಟಿಕೆಗಳ ಬಗ್ಗೆ  ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಸಹಕಾರ್ಯದರ್ಶಿ ಮಾಧವ ಎಂ. ಕೆ., ಮಂಗಳೂರು ವಿಶ್ವವಿದ್ಯಾಲಯದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ಘಟಕದಿಂದ ಕಡೇಶಿವಾಲಯ ದೇವಸ್ಥಾನದಲ್ಲಿ ಸ್ವಚ್ಛತೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಕಡೇಶಿವಾಲಯ, ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ, ಕಡೇಶಿವಾಲಯ ಚಿಂತಾಮಣಿ ಶ್ರೀಲಕ್ಷ್ಮೀ ನರಸಿಂಹಸ್ವಾಮಿ. ದೇವಸ್ಥಾನದಲ್ಲಿ ಜಾತ್ರೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 13 - 4 - 2025 ನೇ ಆದಿತ್ಯವಾರ ಸ್ವಚ್ಛತಾ ಕಾರ್ಯಕ್ರಮ ಸೇವೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರು, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು...
ಬೆಂಗಳೂರುಸುದ್ದಿ

ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯಗೆ ತಾತ್ಕಾಲಿಕ ರಿಲೀಫ್: ಬಿ-ರಿಪೋರ್ಟ್ ಬಗ್ಗೆ ಆದೇಶ ಸದ್ಯಕ್ಕಿಲ್ಲವೆಂದ ಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು: ಮುಡಾ ಹಗರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದಂತ ಬಿ-ರಿಪೋರ್ಟ್ ಪ್ರಶ್ನಿಸಿದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಲೋಕಾಯುಕ್ತದಿಂದ ಸಲ್ಲಿಸಿರುವಂತ ಬಿ-ರಿಪೋರ್ಟ್ ಬಗ್ಗೆ ಆದೇಶವನ್ನು ಸದ್ಯಕ್ಕೆ ನೀಡುವುದಿಲ್ಲ. ತನಿಖೆ ಮುಂದುವರೆಯಲಿ ಎಂಬುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ಮುಡಾ ಕೇಸಲ್ಲಿ ತಾತ್ಕಾಲಿಕ ರಿಲೀಫ್ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ನ್ಯಾಯಾಲಯಕ್ಕೆ...
1 10 11 12 13 14 2,859
Page 12 of 2859
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ