Monday, February 3, 2025

ಸುದ್ದಿ

ಮೈಸೂರುರಾಜ್ಯಸುದ್ದಿ

ಮೈಸೂರು ದಸರಾ : ಅರಮನೆಯಲ್ಲಿ ಕಿತ್ತಾಡಿಕೊಂಡ ಆನೆಗಳು, ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು..! – ಕಹಳೆ ನ್ಯೂಸ್

ಮೈಸೂರು : ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ ದಸರಾ ಆನೆಗಳು ಕೆಲ ಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ರಾತ್ರಿ ವೇಳೆ ನಡೆದಿದ್ದು ಗಜಪಡೆಯ ಆನೆಗಳ ಕಿತ್ತಾಟದಿಂದ (Elephants Fight) ಪ್ರವಾಸಿಗರು ಆತಂಕಕ್ಕೆ ಒಳಗಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಒಂದಕೊಂದು ಕಿತ್ತಾಡಿಕೊಂಡು ಆನೆಗಳು ಚೆಲ್ಲಾಪಿಲ್ಲಿಯಾಗಿ ಓಡಾಡಿವೆ. ಅರಮನೆ ಅಂಗಳ ಬಿಟ್ಟು ಎರಡು ಆನೆಗಳು ರಸ್ತೆಗೆ ನುಗ್ಗಿವೆ. ಹೀಗಾಗಿ ಆನೆ ನಿಯಂತ್ರಿಸಲು ಸ್ವತಃ ಮಾವುತನೇ ವಿಫಲನಾಗಿ ಆನೆ ಬಿಟ್ಟು ಕೆಳಗೆ ಇಳಿದಿದ್ದಾನೆ. ಆಹಾರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಮಹಾವಿದ್ಯಾಲಯದಲ್ಲಿ ‘ಸಾಹಿತ್ಯ ಮತ್ತು ಪತ್ರಿಕೋದ್ಯಮ’ ವಿಷಯದ ಕುರಿತು ನಡೆದ ಉಪನ್ಯಾಸ ಕಾರ್ಯಕ್ರಮ : ಪತ್ರಿಕಾ ಬರವಣಿಗೆಯೂ ಸಾಹಿತ್ಯದ ಒಂದು ಪ್ರಕಾರ : ರಾಕೇಶ ಕುಮಾರ್ ಕಮ್ಮಜೆ – ಕಹಳೆ ನ್ಯೂಸ್

ಪುತ್ತೂರು: ಸಾಹಿತ್ಯ ಮತ್ತು ಪತ್ರಿಕೋದ್ಯಮ ಭಿನ್ನ ಸಂಗತಿಗಳಲ್ಲ. ಸಾಹಿತ್ಯದಲ್ಲಿನ ವಿವಿಧ ಪ್ರಕಾರಗಳಂತೆ ಪತ್ರಿಕಾ ಸಾಹಿತ್ಯವೂ ಒಂದು ಪ್ರಕಾರ. ಆದರೆ ಪತ್ರಿಕಾ ಸಾಹಿತ್ಯ ಇತರ ಸಾಹಿತ್ಯಕ್ಕಿಂತ ವೇಗವಾಗಿ ಸೃಷ್ಟಿಯಾಗುವುದರಿಂದ ಅವಸರದ ಸಾಹಿತ್ಯ ಎಂದೂ ಕರೆಯುತ್ತಾರೆ. ಸಾಹಿತ್ಯದ ಆಸಕ್ತಿ ಇಲ್ಲದ ವ್ಯಕ್ತಿ ಪತ್ರಕರ್ತನಾಗಿ ಯಶಸ್ಸು ಪಡೆಯುವುದಕ್ಕೆ ಸಾಧ್ಯವಿಲ್ಲ ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ಅವರು ಕಾಲೇಜಿನ ಕನ್ನಡ ವಿಭಾಗದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ ಕಾಲೇಜಿನಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ವಾಲಿಬಾಲ್ ಪಂದ್ಯಾಟದ ಸಮಾರೋಪ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : “ಶಿಕ್ಷಣ ಮತ್ತು ಕ್ರೀಡೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ದೈಹಿಕ ಶಿಕ್ಷಣವು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ. ದೈಹಿಕ ಶಿಕ್ಷಣವು ಕಲಿಕಾ ಪ್ರಗತಿಗೆ ಪೂರಕವಾದ ವ್ಯವಸ್ಥೆಯನ್ನು ಮಾಡಿಕೊಡುತ್ತದೆ. ಕ್ರೀಡೆಯಲ್ಲಿ ಬರೀ ಸೋಲು ಗೆಲುವು ಮಾತ್ರವಲ್ಲದೆ ಪರಸ್ಪರರನ್ನು ಅರಿತು, ಕಲೆತು, ಹೊಂದಾಣಿಕೆ ಮಾಡಿಕೊಳ್ಳುವ ಪರಸ್ಪರ ಪ್ರೀತಿ, ವಿಶ್ವಾಸದ ಭಾವವನ್ನು ಭಾವೈಕ್ಯತೆಯನ್ನು ಕ್ರೀಡೆಗಳು ಕಲಿಸುತ್ತವೆ. ಹಾಗಾಗಿ ಇನ್ನೂ ಹಲವು ಯೋಜನೆಗಳ ಮೂಲಕ ಸರಕಾರ ಇದಕ್ಕೆ ಪ್ರೋತ್ಸಾಹ ನೀಡಬೇಕು. ”ಎಂದು ಪುತ್ತೂರು ನಗರಸಭೆಯ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ಇದರ ಝೋನಲ್ ಲೆವೆಲ್ ಖೋ-ಖೋ ಪಂದ್ಯಾಟವು ಆಂಧ್ರಪ್ರದೇಶದ ವಿಜ್ಞಾನ ವಿಹಾರ ಆಂಗ್ಲ ಮಾಧ್ಯಮ ಪ್ರೌಢಶಾಲೆ ನುಟಾಕ್ಕಿ ಇವರ ಸಹಯೋಗದಲ್ಲಿ, ಕೆ.ಎಲ್. ಯುನಿವರ್ಸಿಟಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 14 ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣ ವರ್ಗದ ಬಾಲಕಿಯರ ತಂಡ ಭಾಗವಹಿಸಿರುತ್ತದೆ, ಬಾಲಕಿಯರ ತಂಡದಲ್ಲಿರುವ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಆಶಾ,ಸಮೀಕ್ಷಾ,ಹರ್ಷಿತಾ, ಅನನ್ಯ, ದ್ವಿತೀಯ ವಿಜ್ಞಾನ ವಿಭಾಗದ ತನ್ಮಯಿ ಬಿ. ಸುವರ್ಣ, ಮೋಕ್ಷಿತಾ,ತೃಷಾ, ಪ್ರಥಮ ವಾಣಿಜ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಅಂದರ್ – ಬಹಾರ್ (ಉಲಾಯಿ –ಪಿದಾಯಿ) ಆಟ ಆಡುತ್ತಿದ್ದ ವೇಳೆ ಪುಂಜಾಲಕಟ್ಟೆ ಎಸ್.ಐ.ನಂದಕುಮಾರ್ ನೇತೃತ್ವದ ತಂಡದಿಂದ ದಾಳಿ : 23 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬಂಟ್ವಾಳ: ಅಂದರ್ - ಬಹಾರ್ ಪಿದಾಯಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಪುಂಜಾಲಕಟ್ಟೆ ಎಸ್.ಐ.ನಂದಕುಮಾರ್ ನೇತೃತ್ವದ ತಂಡ 23 ಮಂದಿಯನ್ನು ಬಂಧಿಸಿ ,ಆಟದಲ್ಲಿ ಉಪಯೋಗಿಸಿದ ಹಣ ಸಹಿತ ಇತರ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ಮಡಂತ್ಯಾರು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದ ಹಿಂಭಾಗದಲ್ಲಿರುವ ಶೆಡ್‍ನೊಳಗೆ ಸುಮಾರು 15-20 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಮಂಗಳೂರಿನಲ್ಲಿ ಮಿಸ್ಟರ್, ಮಿಸ್ , ಟೀನ್, ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ – ಕಹಳೆ ನ್ಯೂಸ್

ಮಂಗಳೂರು, 20:ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್‌ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು ಇಲ್ಲಿದೆ ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ:ರಂಜಿತ್ ಗಾಣಿಗ ಮೊದಲನೇ ರನ್ನರ್-ಅಪ್,  ಕೌಸ್ತುಭ ಶೆಟ್ಟಿ ಎರಡನೇ ರನ್ನರ್-ಅಪ್, ಕಾರ್ತಿಕ್ ವೈ.ಬಿ...
ಕ್ರೈಮ್ದೆಹಲಿರಾಜಕೀಯಸುದ್ದಿ

ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ – ಕಹಳೆ ನ್ಯೂಸ್

ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಆಶಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಅಖಿಲ ಕರ್ನಾಟಕ ಜನಜಾಗತಿ ವೇದಿಕೆ ವಿಟ್ಲ ವಲಯ ಅಧ್ಯಕ್ಷ ಶ್ರೀ ಕೃಷ್ಣಯ್ಯ ಬಳ್ಳಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ಷಣಿಕ ಸುಖಗೋಸ್ಕರ ಕೆಟ್ಟ ದುರಭ್ಯಾಸಗಳಿಗೆ ದಾಸರಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಮನವಿ...
1 150 151 152 153 154 2,763
Page 152 of 2763