Tuesday, February 4, 2025

ಸುದ್ದಿ

ತುಮಕೂರುಸುದ್ದಿ

ತುಮಕೂರಿನಲ್ಲಿ ಭೀಕರ ಕಾರು ಅಪಘಾತ: ಆರು ಮಂದಿ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ತುಮಕೂರು: ಗೌರಿ ಗಣೇಶ ಹಬ್ಬದ ಸಂಭ್ರಮ ಮುಗಿಸಿ ತಮ್ಮ ಸ್ವಗ್ರಾಮದಿಂದ ಬೆಂಗಳೂರಿಗೆ ಹೊರಟ ಕುಟುಂಬ ಭೀಕರ ಅಪಘಾತದಲ್ಲಿ ಮಾರ್ಗ ಮಧ್ಯದಲ್ಲೇ ಉಸಿರು ಚೆಲ್ಲಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಬಾಲಕಿ ಸೇರಿ ಆರು ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಜನಾರ್ದನ ರೆಡ್ಡಿ(60), ಸಿಂಧೂ (33), ವೇದಾಸ್ ರೆಡ್ಡಿ(12), ಆನಂದ್(30), ಕಾರೇನಹಳ್ಳಿ ಗ್ರಾಮದ ನಾಗರಾಜ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜನಜಾಗೃತಿ ವೇದಿಕೆ ಬಂಟ್ವಾಳ ವತಿಯಿಂದ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ಜನಜಾಗೃತಿ ಸದಸ್ಯರು ಹಾಗೂ ಬಂಟ್ವಾಳ ತಾಲೂಕಿನ ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷರಾದ ಮಾಧವ ವಲವೂರು ರವರು ಅನಾರೋಗ್ಯದಿಂದ ಇದ್ದು ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಸದಸ್ಯರು ಶ್ರೀಯುತರ ಮನೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ರೂಪಾಯಿ 15,000 ಸಹಾಯಧನವನ್ನು ವಿತರಿಸಿದ್ದರು. ಈ ಸಂದರ್ಭ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೊನಾಲ್ಡ್ ಡಿಸೋಜ, ಗ್ರಾಮಾಭಿವೃಡಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ನಡೆದ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಜಕ್ರಿಬೆಟ್ಟುವಿನಲ್ಲಿ ಸೆ.7ರಿಂದ ಸೆ.11 ರವರೆಗೆ ನಡೆಯಲಿರುವ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ ದೊರಕಿತು. ಬೆಳಗ್ಗೆ ಬಂಟ್ವಾಳ ಶ್ರೀ ಸೀತಾರಾಮ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಆಗಮಿಸಿದ ಶ್ರೀ ಗಣೇಶ ಮೂರ್ತಿಯ ಪ್ರತಿಷ್ಟಾಪನೆ ನಡೆಯಿತು. ಬಳಿಕ ಕಾರ್ಯಕ್ರಮಗಳನ್ನು ಡಾ‌.ಶಿವಪ್ರಸಾದ್ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಿತಿ ಗೌರವಾಧ್ಯಕ್ಷ , ಮಾಜಿ ಸಚಿವ ಬಿ.ರಮಾನಾಥ ರೈ ಅವರು ಅಧ್ಯಕ್ಷತೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಡಿಬಾಗಿಲು ಸಂಗಮ ಯುವಕ ಮಂಡಲ ವತಿಯಿಂದ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಹಾಗೂ ಸಾಧಕರಿಗೆ ಅಭಿನಂದನ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲು ಸಂಗಮ ಯುವಕ ಮಂಡಲ ವಿದ್ಯಾಗಿರಿ ಪಡಿಬಾಗಿಲು ವತಿಯಿಂದ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಹಾಗೂ ಸಾಧಕರಿಗೆ ಅಭಿನಂದನ ಕಾರ್ಯಕ್ರಮ ಜರಗಿತು . ಕಾರ್ಯಕ್ರಮದ ಉದ್ಘಾಟನೆಯನ್ನು ಕಾನ ಸುಂದರ ಭಟ್ ನೆರವೇರಿಸಿದರು. ಈ ಸಂದರ್ಭ ದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೆಲಿಂಜ ಶಾಲಾ ಶಿಕ್ಷಕ ಬಿ. ತಿಮ್ಮಪ್ಪ ನಾಯ್ಕ ,ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮೀ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ – ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ ಮೂರು ಜಿಲ್ಲೆಗಳಲ್ಲಿ ಜನಸಂಖ್ಯೆಯನ್ನೂ ಮೀರಿದ ಆಧಾರ್‌ ಕಾರ್ಡ್‌ಗಳ ಸಂಖ್ಯೆ ; ಸಿಎಂ ಹಿಮಂತ ಬಿಸ್ವಾ ಶರ್ಮಾ ಮಹತ್ವದ ಘೋಷಣೆ – ಕಹಳೆ ನ್ಯೂಸ್

ಗುವಾಹಟಿ: 2014 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ ಭಾಗವಾಗಲು ಅರ್ಜಿ ಸಲ್ಲಿಸದ ಜನರಿಗೆ ಆಧಾರ್ ಕಾರ್ಡ್‌ಗಳನ್ನು ನೀಡದಿರುವ ಸರ್ಕಾರದ ನಿರ್ಧಾರವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ. ಧುಬ್ರಿ, ಬಾರ್ಪೇಟಾ, ಮೊರಿಗಾಂವ್‌ ಜಿಲ್ಲೆಗಳಲ್ಲಿ ಒಟ್ಟು ಆಧಾರ್‌ ಕಾರ್ಡ್‌ಗಳ ಸಂಖ್ಯೆ ಅಲ್ಲಿನ ಜನಸಂಖ್ಯೆಯನ್ನೂ ಮೀರಿದೆ. ಈ ಮೂರು ಜಿಲ್ಲೆಗಳಲ್ಲಿ ಮುಸ್ಲಿಂ ಬಹುಸಂಖ್ಯಾತರು, ಯೋಜಿತ ಜನಸಂಖ್ಯೆಯ ಅಂಕಿಅಂಶಗಳಿಗೆ ವಿರುದ್ಧವಾಗಿ ನೀಡಲಾದ ಆಧಾರ್ ಕಾರ್ಡ್‌ಗಳ ಶೇಕಡಾವಾರು ಪ್ರಮಾಣವು ಕ್ರಮವಾಗಿ ಧುಬ್ರಿ, ಬಾರ್ಪೇಟಾ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಬ ಗ್ರಾಮದ ಕೆಲಿಂಜ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 48ನೇ ವರ್ಷದ ಗಣೇಶೋತ್ಸವ -ಕಹಳೆ ನ್ಯೂಸ್

ಬಂಟ್ವಾಳ : ಹಬ್ಬ ಆಚರಣೆಗಳು ನಮ್ಮ ಮೂಲ ಸಂಸ್ಕೃತಿ ಉಳಿಸುವ ದೃಷ್ಟಿಕೋನದಲ್ಲಿ ಆಗಬೇಕು. ಮಕ್ಕಳನ್ನು ಪ್ರಾಥಮಿಕ ಹಂತದಲ್ಲಿ ಹಬ್ಬ ಆಚರಣೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ನಮ್ಮ ಆಚಾರ,ಸಂಸ್ಕಾರ ಸಂಸ್ಕೃತಿಯನ್ನು ತಿಳಿವಂತೆ ಮಾಡಬೇಕು ಎಂದು ಶಿಕ್ಷಕಿ ಸಂಪನ್ಮೂಲ ವ್ಯಕ್ತಿ ರೇಣುಕಾ ಕಣಿಯೂರ್ ಹೇಳಿದರು. ಅವರು ಶನಿವಾರ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಕೆಲಿಂಜ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ ನಡೆದ 48ನೇ ವರ್ಷದ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

“ಸರಕಾರಿ ಶಾಲೆಗೆ ನನ್ನ ಕೈ ಕಾಣಿಕೆ” ಎಂಬ ವಿನೂತನ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಉನ್ನತ ಕೆಲಸಗಳು ಸಣ್ಣ ಸಣ್ಣ ದೇಣಿಗೆಗಳಿಂದಲೇ ಆರಂಭವಾಗುತ್ತವೆ ಹತ್ತು ಹಲವು ಕೈಗಳು ಜೊತೆಯಾಗಿ ಸೇರಿದಾಗ ಯಾವ ಅಭಿವೃದ್ಧಿ ಕೆಲಸವು ನಿರಾಯಾಸವಾಗಿ ನಡೆಯಲು ಸಾಧ್ಯವಾ ಗುತ್ತದೆ.ಎಂದು ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಶ್ರೀಯುತ ಹಾಜಬ್ಬ ಹೇಳಿದರು. ಅವರು ಚಂದ್ರಿಕಾ ವೆಜಿಟೇಬಲ್ಸ್ ಮೇಲ್ಕಾರ್ ಇಲ್ಲಿ "ಸರಕಾರಿ ಶಾಲೆಗೆ ನನ್ನ ಕೈ ಕಾಣಿಕೆ" ಎಂಬ ವಿನೂತನ ಕಾರ್ಯಕ್ರಮದಲ್ಲಿ . ದೇಣಿಗೆಯಾಗಿ ತಮ್ಮ ಕಿರು ಕಾಣಿಕೆಯನ್ನು ನೀಡಿ ಮಾತನಾಡಿದರು. ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನವ ದಂಪತಿಗಳು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತ-ಕಹಳೆ ನ್ಯೂಸ್

ಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ...
1 169 170 171 172 173 2,766
Page 171 of 2766