Monday, February 10, 2025

ಸುದ್ದಿ

ಉಡುಪಿಸುದ್ದಿ

ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ರಕ್ಷಿತ್ ಶೆಟ್ಟಿ -ಕಹಳೆ ನ್ಯೂಸ್

ಉಡುಪಿ : ನಟ ರಕ್ಷಿತ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು, ನಟ ರಕ್ಷಿತ್ ಶೆಟ್ಟಿ ಕುಟುಂಬಸ್ಥರೊಂದಿಗೆ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು....
ಉಡುಪಿಬೈಂದೂರುಸುದ್ದಿ

ವಿಶೇಷ ಚೇತನ ಮಗವನ್ನು ಎತ್ತಿಕೊಂಡು ಹೊಳೆ ದಾಟಿದ ತಂದೆ; ವಿಡಿಯೋ ವೈರಲ್ ; ಶಾಶ್ವತ ವ್ಯವಸ್ಥೆ ರೂಪಿಸಲು ಯೋಜನೆ ಸಿದ್ಧಪಡಿಸಲಾಗುವುದು: ಶಾಸಕ ಗಂಟಿಹೊಳೆ –ಕಹಳೆ ನ್ಯೂಸ್

ಉಡುಪಿ : ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿ ಎಂಬಲ್ಲಿ ಸೇತುವೆ ಇಲ್ಲದ ಕಾರಣ ಶಾಲೆಗೆ ಹೋಗುವ ಮಕ್ಕಳನ್ನು ಪೋಷಕರೇ ಎತ್ತಿಕೊಂಡು ಹೊಳೆ ದಾಟಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದೇ ರೀತಿ ತಂದೆಯೊಬ್ಬರು ತನ್ನ ವಿಶೇಷ ಚೇತನ ಮಗುವನ್ನು ಹೆಗಲ ಮೇಲೆ ಕೂರಿಸಿ ಹೊಳೆ ದಾಟುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಬೈಂದೂರು ತಾಲೂಕಿನಲ್ಲಿ ಜನರು ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾಕಷ್ಟು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಖ್ಯಮಂತ್ರಿ‌ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ : ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬೆಂಗಳೂರಿನಲ್ಲಿ ಸಿ ಎಂ‌ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು. ಸುಮಾರು‌ ಅರ್ಧ ಗಂಟೆಗಳ ಕಾಲ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು...
ಬೈಂದೂರುಸುದ್ದಿ

ರಾಹುಲ್ ಗಾಂಧಿ ವಿರುದ್ಧ ಬೈಂದೂರು ಯುವಮೋರ್ಚಾ ಬೃಹತ್ ಪ್ರತಿಭಟನೆ : ಹಿಂದು ಹಿಂಸವಾದಿ ಹೇಳಿಕೆ ಖಂಡನೆ, ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹ-ಕಹಳೆ ನ್ಯೂಸ್

ತ್ರಾಸಿ : ಹಿಂದುಗಳು ಹಿಂಸವಾದಿಗಳು, ಅಸತ್ಯ ನುಡಿಯುತ್ತಾರೆ ಎಂಬಿತ್ಯಾದಿ ಹಿಂದೂ ವಿರೋಧಿ ಹೇಳಿಕೆ ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯು ಸಂಸತ್ ಭವನದಲ್ಲಿ ಮಾಡಿರುವ ಭಾಷಣ ಖಂಡಿಸಿ, ರಾಜೀನಾಮೆಗೆ ಆಗ್ರಹಿಸಿ ಬೈಂದೂರು ಮಂಡಲ ಯುವಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ತ್ರಾಸಿಯ ಹೆದ್ದಾರಿ ಸಮೀಪ ನಡೆಯಿತು. ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಹಿಂದೂ ಧರ್ಮ ಎಂದರೆ ಹಿಂಸಾವಾದಿಗಳು, ಹಿಂದುಗಳೆಂದರೆ ಅಸತ್ಯ ನುಡಿಯುವವರು, ಹಿಂದುಗಳೆಂದರೆ ಅಸತ್ಯ ಹಿಂದುಗಳೆಂದರೆ ದೊಂಬಿ...
ಉಡುಪಿಬೈಂದೂರುಸುದ್ದಿ

ಆಸ್ಪತ್ರೆ ಕಟ್ಟಡ, ಮೂಲಸೌಕರ್ಯ, ಜಾಗದ ಕೊರತೆ ನೀಗಿಸಲು ಶಾಸಕ ಗುರುರಾಜ್ ಗಂಟಿಹೊಳೆ ಅಧಿಕಾರಿಗಳಿಗೆ ಸೂಚನೆ-ಕಹಳೆ ನ್ಯೂಸ್

  ಬೈಂದೂರು: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲೆಡೆ ಅಗತ್ಯ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ ಸಾರ್ವಜನಿಕವಾಗಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ನಿರ್ದೇಶನ ನೀಡಿದರು. ಉಪ್ಪುಂದದ ಕಾರ್ಯಕರ್ತ ಕಛೇರಿಯಲ್ಲಿ ಆರೋಗ್ಯ & ಆಯುಷ್ ಇಲಾಖೆ ವೈದ್ಯಾಧಿಕಾರಿಗಳು, ಕಂದಾಯ & ಸರ್ವೇ ಇಲಾಖೆ ಹಾಗೂ ಬಿಎಸ್ಎನ್ಎಲ್ ಮತ್ತು ಕೆಪಿಸಿಎಲ್ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ...
ಉಡುಪಿಸುದ್ದಿ

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಡಾ. ಸುಧಾ ಕಾಮತ್ ರವರಿಗೆ ಬಿಸಿ ರಾಯ್ ಪುರಸ್ಕಾರ -ಕಹಳೆ ನ್ಯೂಸ್

ಉಡುಪಿ : ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಕಾಮತ್ ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ ಕೊಡ ಮಾಡಲ್ಪಡುವ 2024ರ ಡಾ. ಬಿ ಸಿ ರಾಯ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ವೈದ್ಯರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಡಾ.ಎಚ್ ಕೆ ಪಾಟೀಲ್, ಭಾ ವೈ ಸಂಘದ ರಾಜ್ಯಾಧ್ಯಕ್ಷ ಡಾ. ಶ್ರೀನಿವಾಸ ಹಾಗೂ ಗೌರವ ಕಾರ್ಯದರ್ಶಿ ಡಾ...
ಉಡುಪಿಸಂತಾಪಸುದ್ದಿ

ಉಡುಪಿ : ಹೃದಯಾಘಾತದಿಂದ ಮೃತಪಟ್ಟ 10ನೇ ತರಗತಿಯ ವಿದ್ಯಾರ್ಥಿನಿ- ಕಹಳೆ ನ್ಯೂಸ್

ಉಡುಪಿ : 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಪಳ್ಳಿ ದಾದಬೆಟ್ಟು ಎಂಬಲ್ಲಿ ಸಂಭವಿಸಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ ಭಾಗ್ಯಶ್ರೀ (16) ಮೃತ ದುರ್ದೈವಿ. ಈಕೆ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದಾ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು, ಕಾರ್ಮಿಕರು ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಮಂಗಳೂರಿನ ಬಲ್ಮಠದಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಅವಶೇಷಗಳ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದರು. ಅವರಲ್ಲಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಕಾರ್ಮಿಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ, ಎಸ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ. ಘಟನಾ ಸ್ಥಳಕ್ಕೆ...
1 249 250 251 252 253 2,772
Page 251 of 2772