Saturday, March 29, 2025

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳಿಂದ ಗೊಂದಲದ ಗೂಡಾದ ಇಲಾಖೆಗಳು- ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು: ಬಗೆಹರಿಯದ ಇ-ಖಾತಾ ಸಮಸ್ಯೆ:- ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ಯಾವುದೇ ಪೂರ್ವಸಿದ್ಧತೆ ಇಲ್ಲದೇ ದಿನಬೆಳಗಾಗುವುದರೊಳಗೆ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ ಮಾಡಿದ ನಂತರ ಮಂಗಳೂರು ನಗರ ವ್ಯಾಪ್ತಿಯಲ್ಲಿ ಉಂಟಾಗಿರುವ ಅವ್ಯವಸ್ಥೆಯ ಆಗರದಿಂದಾಗಿ ಸಾರ್ವಜನಿಕರು ದಿನನಿತ್ಯ ಕಚೇರಿಗಳಿಗೆ ಅಲೆದಾಡುವಂತಾಗಿದ್ದು ಈಗಾಗಲೇ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಕಂದಾಯ ಸಚಿವರನ್ನು ಭೇಟಿಯಾದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಜನಸಾಮಾನ್ಯರಿಗೆ ತೊಂದರೆಯಾಗುವ ಇಂತಹ ನಿಯಮಗಳನ್ನು ಏಕಾಏಕಿ ಇಡೀ ರಾಜ್ಯದ ತುಂಬೆಲ್ಲಾ ತರುವ ಮೊದಲು ಯಾವುದಾದರೂ ಒಂದೆರಡು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ಸೈಂಟ್ ವಿಕ್ಟರ್ಸ್ ಪ್ರೌಢಶಾಲೆಯಲ್ಲಿ ಎಸೆಸ್ಸೆಲ್ಲಿ, ವಠಾರದಲ್ಲಿ ಫಿಲ್ಮ್ ಶೂಟಿಂಗ್ ಇವರಿಗೆ ಯಾವುದೇ ಕಾನೂನು ಇಲ್ವೆ?, ಮಕ್ಕಳ ಭವಿಷ್ಯದಲ್ಲಿ ಶಾಲಾ ಆಡಳಿತ ಸಮಿತಿಯ ಚೆಲ್ಲಾಟ.-ಕಹಳೆ ನ್ಯೂಸ್

ಪುತ್ತೂರು: ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾಗಿರುವ ಸೈಂಟ್ ವಿಕ್ಟರ್ಸ್ ಪ್ರೌಢ ಶಾಲೆಯ ಆವರಣದಲ್ಲಿ ಕನ್ನಡ ಸಿನಿಮಾವೊಂದಕ್ಕೆ ಶೂಟಿಂಗ್ ಗೆ ಅವಕಾಶ ಕೊಟ್ಟು ಶಾಲಾ ಆಡಳಿತ ಮಂಡಳಿ ಎಡವಟ್ಟು ಮಾಡಿಕೊಂಡಿದೆ. ಇಲ್ಲಿ ನಟ ಆರ್ಯನ್ ಅಭಿನಯದ `ಲವ್ ಟು ಲಸ್ಸಿ' ಎಂಬ ಕನ್ನಡ ಚಲನಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಇದಕ್ಕೆ ಕಳೆದ ಒಂದೂವರೆ ತಿಂಗಳ ಹಿಂದೆಯೇ ಶಾಲಾ ಸಂಚಾಲಕರಿಂದ ಅನುಮತಿ ಪಡೆಯಲಾಗಿತ್ತು. ಆದ್ರೆ ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ...
ದೆಹಲಿಸುದ್ದಿ

ಮರಗಳನ್ನು ಕಡಿಯುವುದು ಮನುಷ್ಯನನ್ನು ಕೊಲ್ಲುವುದಕ್ಕಿಂತ ದೊಡ್ಡ ಅಪರಾಧ : ಸುಪ್ರೀಂಕೋರ್ಟ್-ಕಹಳೆ ನ್ಯೂಸ್

ನವದೆಹಲಿ : ಮಂಗಳವಾರದ ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು ವ್ಯಕ್ತಿಯನ್ನು ಕೊಲ್ಲುವುದಕ್ಕಿಂತ ಗಂಭೀರ ಅಪರಾಧ ಎಂದು ಹೇಳಿದೆ. ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಯಾವುದೇ ದಯೆ ಇರುವುದಿಲ್ಲ ಎಂದು ಹೇಳಿದ ನ್ಯಾಯಾಲಯ, ಅಕ್ರಮವಾಗಿ ಕಡಿದ ಪ್ರತಿ ಮರಕ್ಕೂ 1 ಲಕ್ಷ ರೂ.ದಂಡ ವಿಧಿಸಿದೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರ ಪೀಠವು ಅನುಮತಿಯಿಲ್ಲದೆ ಮರಗಳನ್ನು ಕಡಿಯುವವರ ವಿರುದ್ಧ ಕಠಿಣ...
ಕುಂದಾಪುರಜಿಲ್ಲೆಸುದ್ದಿ

ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಸರಕಾರದ ಡಿ.ಕೆ ಶಿವಕುಮಾರ್ ವಿರುದ್ಧ-: ಶಾಸಕ ಕಿರಣ್ ಕೊಡ್ಗಿ ಆಕ್ರೋಶ -ಕಹಳೆ ನ್ಯೂಸ್

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಇವರ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಸಂವಿಧಾನ ತಿದ್ದುಪಡಿ ಮಾಡುತ್ತಿವೆ ಎಂಬ ಹೇಳಿಕೆಯ ವಿರುದ್ಧ ಬ್ರಹತ್ ಪ್ರತಿಭಟನೆಯಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಮಾತಾನಾಡಿದ ಅವರು ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ ಕಾಂಗ್ರೆಸ್ ಸರಕಾರ, ಮುಸಲ್ಮಾನರಿಗೆ ಶೇಕಡ 4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿರುವುದಲ್ಲದೆ. ಮುಸ್ಲಿಮರಿಗಾಗಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ-ಕಹಳೆ ನ್ಯೂಸ್

ಪದ್ಮುಂಜ : ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಶ್ರೀಯುತ ನಾರಾಯಣಗೌಡ ಮುಚ್ಚುರು ಉದ್ಘಾಟಿಸಿ,ಮಕ್ಕಳಿಗೆ ಶುಭವನ್ನು ಹಾರೈಸಿದರು. ಅಧ್ಯಕ್ಷತೆಯನ್ನು ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ಸೀತಾರಾಮ ಮಡಿವಾಳ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಘವ ಗೇರುಕಟ್ಟೆ, ಯಕ್ಷಗಾನ ಅಕಾಡೆಮಿ ಸದಸ್ಯರು ಹಾಗೂ ಭರತನಾಟ್ಯ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಡಿಂಪಲ್ ಇವರು ಉಪಸ್ಥಿತರಿದ್ದರು. ಹಾಗೆಯೇ ಕಿರಣ್ ಪುಷ್ಪಗಿರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸಾಕ್ಷಿ ನಾಶ ಮಾಡಿದ ಆರೋಪದಡಿ ರಜತ್‌, ವಿನಯ್‌ ಲಾಕ್‌: ರಾತ್ರಿಯೇ ಜೈಲಿಗೆ ಶಿಫ್ಟ್‌-ಕಹಳೆ ನ್ಯೂಸ್

ಬೆಂಗಳೂರು:ಮಾಜಿ ಬಿಗ್‌ ಬಾಸ್‌ ಸ್ಪರ್ಧಿಗಳಾದ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ಗೆ ರೀಲ್ಸ್‌ ಕಂಟಕ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಲಾಂಗ್‌ ಹಿಡಿದು ರೀಲ್ಸ್ ಮಾಡಿದ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ ಸದ್ಯ ಜೈಲು ಪಾಲಾಗಿದ್ದಾರೆ. ಪೊಲೀಸರ ತನಿಖೆ ವೇಳೆ ಲಾಂಗ್ ಬದಲಿಸಿದ ಆರೋಪದ ಅಂದರೆ ಸಾಕ್ಷಿ ನಾಶ ಮಾಡಿದ ಆರೋಪದಡಿ ಇಬ್ಬರನ್ನು ಮತ್ತೆ ಬಂಧಿಸಲಾಗಿದೆ. ರೀಲ್ಸ್ಗಾಗಿ ಮಚ್ಚು ಹಿಡಿದು ವಿಡಿಯೋ ಮಾಡಿ ಸಂಕಷ್ಟಕ್ಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಗೀತಾ ಶಿವ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್‌ ಹೀರೋ ಶಿವ ರಾಜ್‌ಕುಮಾರ್‌ ಅವರ ಪತ್ನಿ ಗೀತಾ ಶಿವ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಣ್ಣ ಆರೋಗ್ಯದಲ್ಲಿ ಚೇತರಿಕೆ ಬಳಿಕ ಮತ್ತೆ ಅವರ ಸಿನಿಮಾ ಕೆಲಸಗಳಲ್ಲಿ ಜೊತೆಯಾಗಿದ್ದ ಗೀತಕ್ಕ ದಿಢೀರ್‌ ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಗೀತಾ ಶಿವ ರಾಜ್‌ಕುಮಾರ್‌ ಅವರಿಗೆ ಸರ್ಜರಿಯಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ. ಸದಾ ಆಯಕ್ಟೀವ್‌ ಆಗಿರುತ್ತಿದ್ದ ಗೀತಕ್ಕ ಅವರಿಗೆ ದಿಢೀರ್‌ ಏನಾಯ್ತು? ಸರ್ಜರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಿಂದ ಮತ್ತೆ ನೆರೆ ರಾಜ್ಯಕ್ಕೆ ನೀರು: ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ಕಿಡಿ-ಕಹಳೆ ನ್ಯೂಸ್

ಬೆಂಗಳೂರು : ಕುಡಿಯುವ ನೀರಿನ ಉದ್ದೇಶಕ್ಕಾಗಿ ತೆಲಂಗಾಣಕ್ಕೆ 1.5 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ರಾಜ್ಯ ಸರ್ಕಾರ ನಾರಾಯಣಪುರದ ಬಸವಸಾಗರ ಜಲಾಶಯದಿಂದ ರಾತ್ರೋ ರಾತ್ರಿ 10 ಟಿಎಂಸಿ ನೀರು ಹರಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ರೈತರ ಬೆಳೆಗಳಿಗೆ ನೀರು ಸಿಗುತ್ತಿಲ್ಲ. ಈ ಬಗ್ಗೆ ಕೇಳಿದರೆ ಸರ್ಕಾರದ ಮೌಖಿಕ ಆದೇಶದಿಂದಾಗಿ ನೀರು ಹರಿಸಲಾಗಿದೆ ಎಂದು ಅಧಿಕಾರಿಗಳು ಉತ್ತರ ನೀಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ನಾಯಕರು ಆರೋಪಿಸಿದ್ದಾರೆ....
1 3 4 5 6 7 2,825
Page 5 of 2825
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ