Tuesday, April 1, 2025

ರಾಜ್ಯ

ಬೆಂಗಳೂರುಮಂಡ್ಯರಾಜಕೀಯರಾಜ್ಯಸಿನಿಮಾಸುದ್ದಿ

ನಾನೀಗ #ಕೋವಿಡ್19 ನೆಗೆಟಿವ್ – ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖ ಎಂದ ಸಂಸದೆ ಸುಮಲತಾ..! – ಕಹಳೆ ನ್ಯೂಸ್

ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಾವು ಕೊರೋನಾ ಸೋಂಕಿನಿಂದ ಮುಕ್ತವಾಗಿರುವುದನ್ನು ಸುಮಲತಾ ಅಂಬರೀಶ್ ಸಾಮಾಜಿಕ ತಾಣದಲ್ಲಿ ಹೇಳಿಕೊಂಡಿದ್ದಾರೆ. "ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ...
ಬೆಂಗಳೂರುರಾಜಕೀಯರಾಜ್ಯ

Breaking News : ಮತ್ತೆ ಸಿಬಿಐ ಸಂಕಷ್ಟಕ್ಕೆ ಸಿಲುಕಿದ ಕೆಪಿಸಿಸಿ ಬಾಸ್ ಡಿಕೆಶಿ..! ; ಶಿವಕುಮಾರ್ ಮತ್ತೆ ಜೈಲುವಾಸ ಪಕ್ಕಾ..? – ಕಹಳೆ ನ್ಯೂಸ್

ಬೆಂಗಳೂರು,ಜು.22- ಹಣಕಾಸು ಅಕ್ರಮ ಪ್ರಕರಣದಲ್ಲಿ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ದಾಳಿಗೆ ಒಳಗಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಮತ್ತೆ ಸಿಬಿಐ ಸಂಕಷ್ಟ ಎದುರಾಗಿದೆ. ಏಕೆಂದರೆ ತಮ್ಮ ವಿರುದ್ಧ ರಾಜ್ಯಸರ್ಕಾರ ಸಿಬಿಐ ತನಿಖೆ ನಡೆಸಲು ಆದೇಶಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್‍ನ ಏಕಸದಸ್ಯ ಪೀಠ ವಜಾಗೊಳಿಸಿದೆ. ಇದರಿಂದ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಯಾವುದೇ ಸಂದರ್ಭದಲ್ಲಿ ಪುನಃ ದೂರು ದಾಖಲಿಸಿ ವಿಚಾರಣೆಗೊಳಪಡಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಡಿ.ಕೆ.ಶಿವಕುಮಾರ್ ಆಪ್ತ ಶಿವಣ್ಣ ಎಂಬುವರು ಸರ್ಕಾರ ಸಿಬಿಐ...
ರಾಜಕೀಯರಾಜ್ಯಸುದ್ದಿ

” ಸಂಘದ ಶಿಸ್ತಿನ ಸ್ವಯಂ ಸೇವಕ – ನಿಷ್ಠಾವಂತ ನಾಯಕ ” – ಮೇಲ್ಮನೆಗೆ ನಾಮನಿರ್ದೇಶನಗೊಂಡ ಐವರ ಪೈಕಿ ಯಾರಿವರು ಬುಡಕಟ್ಟು ಜನಾಂಗದ ಶಾಂತಾರಾಮ ಸಿದ್ದಿ ಗೊತ್ತಾ..? – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಮೇಲ್ಮನೆಗೆ ಆಫ್ರಿಕನ್ ಬುಡಕಟ್ಟಿನ ಸಿದ್ದಿ ಜನಾಂಗದ ಶಾಂತಾರಾಮ ಸಿದ್ದಿ ಸೇರಿದಂತೆ ಒಟ್ಟು ಐವರನ್ನು ನಾಮನಿರ್ದೇಶನ ಮಾಡಲಾಗಿದೆ. ವಿಧಾನಪರಿಷತ್ ಗೆ ಎಚ್.ವಿಶ್ವನಾಥ್, ಸಿಪಿ ಯೋಗೇಶ್ವರ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಪ್ರೊ.ತಳವಾರ ಸಾಬಣ್ಣ, ಶಾಂತಾರಾಮ್ ಸಿದ್ದಿ ಅವರನ್ನು ಆಯ್ಕೆ ಮಾಡಲಾಗಿದೆ. ಐವರು ಜನರಲ್ಲಿ ಈ ಬಾರಿ ವಿಶೇಷವಾಗಿ ಗಮನಸೆಳೆದ ವ್ಯಕ್ತಿ ಶಾಂತಾರಾಮ ಸಿದ್ದಿ. ಯಾಕೆಂದರೆ ಇವರು ಉತ್ತರಕನ್ನಡ ಜಿಲ್ಲೆಯ ಶಿರಸಿ-ಯಲ್ಲಾಪುರದ ಹಿತ್ನಳ್ಳಿಯವರು. ಇವರ ಕಲ್ಲು-ಮುಳ್ಳಿನ ಬದುಕಿನ...
ರಾಜಕೀಯರಾಜ್ಯ

ಶಾಂತಾರಾಮ್ ಸಿದ್ದಿ, ಹೆಚ್.ವಿಶ್ವನಾಥ್, ಸಿ.ಪಿ.ಯೋಗೀಶ್ವರ್ ಸೇರಿ ವಿಧಾನಪರಿಷತ್ತಿಗೆ ಐವರ ನಾಮನಿರ್ದೇಶನ – ಕಹಳೆ ನ್ಯೂಸ್

ಬೆಂಗಳೂರು : ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವರಾದ ಹೆಚ್.ವಿಶ್ವನಾಥ್, ಸಿ.ಪಿ ಯೋಗೀಶ್ವರ್ ಸೇರಿದಂತೆ ಐದು ಮಂದಿಯನ್ನು ವಿಧಾನಪರಿಷತ್ ಗೆ ರಾಜ್ಯ ಸರ್ಕಾರ ನಾಮಕರಣ ಮಾಡಿದೆ. ಎಚ್.ವಿಶ್ವನಾಥ್, ಸಿಪಿ ಯೋಗೇಶ್ವರ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಪ್ರೊ.ತಳವಾರ ಸಾಬಣ್ಣ, ಶಾಂತಾರಾಮ್ ಸಿದ್ದಿ ಅವರನ್ನು ಆಯ್ಕೆ ಮಾಡಲಾಗಿದೆ. ವಿವಿಧ ಕ್ಷೇತ್ರಗಳಿಂದ ಐವರನ್ನು ನಾಮ ನಿರ್ದೇಶನ ಮಾಡುವಂತೆ ಯಡಿಯೂರಪಪ್ ಅವರ ಮನವಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.ಮುಖ್ಯಮಂತ್ರಿ...
ಕಾಸರಗೋಡುರಾಜ್ಯಸುದ್ದಿ

ಕರ್ನಾಟಕದ ಸರಕು ವಾಹನಕ್ಕೂ ಕಾಸರಗೋಡು ಪ್ರವೇಶವಿಲ್ಲ ; ಜಿಲ್ಲಾಧಿಕಾರಿ ಡಾ . ಸಜಿತ್ ಬಾಬು – ಕಹಳೆ ನ್ಯೂಸ್

ಕಾಸರಗೋಡು, ಜು 22 : ಕರ್ನಾಟಕದಿಂದ ತರಕಾರಿ, ಹಣ್ಣು ಹಂಪಲು ಮತ್ತು ಮೀನು ಹೇರಿಕೊಂಡು ಬರುವ ವಾಹನಗಳಲ್ಲಿನ ಸರಕುಗಳನ್ನು ಗಡಿ ಪ್ರದೇಶಗಳಲ್ಲಿ ಸಂಬಂಧಪಟ್ಟ ಇತರ ವಾಹನಗಳಿಗೆ ಹಸ್ತಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಡಾ . ಸಜಿತ್ ಬಾಬು ತಿಳಿಸಿದ್ದಾರೆ.   ಅಲ್ಲದೆ ಆರೋಗ್ಯ ಇಲಾಖೆಯ ನಿಬಂಧನೆಗಳನ್ನು ಪಾಲಿಸಬೇಕು ಮಾಸ್ಕ್ , ಗ್ಲೌಸ್, ಸಾನಿಟೈಸರ್ ಬಳಕೆ ಕಡ್ಡಾಯವಾಗಿ ಬಳಸಿ, ನಿಬಂಧನೆ ಪಾಲಿಸಿ ಸರಕನ್ನು ಹಸ್ತಾಂತರಿಸಬೇಕು . ಆದೇಶ ಉಲ್ಲಂಘಿಸಿದ್ದಲ್ಲಿ ಮೊಕದ್ದಮೆ ದಾಖಲಿಸಿ ,...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ ; ವಿದ್ಯಾರ್ಥಿಗಳಿಗೆ ಪ್ರತಿ ದಿನ 45 ನಿಮಿಷಗಳ 4 ತರಗತಿಗಳು – ಕಹಳೆ ನ್ಯೂಸ್

ಬೆಂಗಳೂರು, ಜು 22 : ಜು.23ರ ಗುರುವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌‌‌ ಮುಖಾಂತರ ಪ್ರೀ ರೆಕಾರ್ಡೆಡ್‌‌‌‌ ವಿಡಿಯೋ ತರಗಳು ಪ್ರಾರಂಭವಾಗಲಿವೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಪಾಠವನ್ನು ಕೇಳಲು ಸ್ಮಾರ್ಟ್‌ಫೋನ್‌‌‌, ಲ್ಯಾಪ್‌ಟಾಪ್‌‌‌‌ ಅಥವಾ ಇಂಟರ್‌ನೆಟ್‌‌ ಇರದೇ ಇದ್ದಲ್ಲಿ, ಕಾಲೇಜು ಆರಂಭವಾದ ಸಂದರ್ಭ ಇದೇ ಪಾಠಗಳನ್ನು ಉಪನ್ಯಾಸಕರು ಮತ್ತೊಮ್ಮೆ ಬೋಧನೆ ಮಾಡಲಿದ್ದಾರೆ ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕಂಗವಲ್ಲಿ ಹೇಳಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಸದ್ಯಕ್ಕೆ ಕಾಲೇಜು ಪ್ರಾರಂಭವಾಗುವ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು. 30, 31ರಂದು ಸಿಇಟಿ ಪರೀಕ್ಷೆ ; ಪಿಜಿಸಿಇಟಿ, ಡಿಪ್ಲೊಮಾ ಸಿಇಟಿ ಪರೀಕ್ಷೆ ಮುಂದೂಡಿಕೆ – ಕಹಳೆ ನ್ಯೂಸ್

ಬೆಂಗಳೂರು, ಜು 22 : ಸಿಇಟಿ ಪರೀಕ್ಷೆಯ ಜು 30, 31ರಂದು ನಡೆಯಲಿದ್ದು, 497 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಡಿಸಿಎಂ ಅಶ್ವತ್ಥ್‌‌ ನಾರಾಯಣ ಹೇಳಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯ ಎರಡು ದಿನಗಳ ಮೊದಲೇ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌‌ ಮಾಡಲಾಗುತ್ತದೆ. ಅಲ್ಲದೇ, ಮುಂಜಾಗ್ರತಾ ಕ್ರಮವಾಗಿ ಥರ್ಮಲ್‌ ಸ್ಕ್ರೀನಿಂಗ್‌‌‌‌‌‌‌‌‌‌‌‌‌, ಮಾಸ್ಕ್‌‌‌‌ ಸೇರಿದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಪರೀಕ್ಷೆಯು ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ನಡೆಯಲಿದ್ದು, ಎಸ್‌‌‌ಒಪಿ ತಂಡಗಳನ್ನು ಈಗಾಗಾಲೇ ರಚನೆ ಮಾಡಲಾಗಿದೆ....
ಕ್ರೈಮ್ರಾಜ್ಯ

ರಾತ್ರಿ ಸರಸದ ವೇಳೆಯಲ್ಲೇ ಸಿಕ್ಕಿಬಿದ್ದ ಮಹಿಳೆ: ಮಗ, ತಂದೆಯಿಂದಲೇ ಘೋರ ಕೃತ್ಯ- ಕಹಳೆ ನ್ಯೂಸ್

ಅಕ್ರಮ ಸಂಬಂಧ ಆರೋಪದ ಹಿನ್ನೆಯಲ್ಲಿ ಇಬ್ಬರನ್ನು ಹತ್ಯೆ ಮಾಡಿದ ಘಟನೆ ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ನಲ್ಲಿ ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದು, ಕೊಡಲಿಯಿಂದ ಕೊಚ್ಚಿ ಯುವಕ ಹಾಗೂ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಮಹಿಳೆಯ ಮಗ, ತಂದೆ ಸೇರಿ ಕೊಲೆ ಮಾಡಿದ್ದಾರೆ. ಇಬ್ಬರು ಕೊಲೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಹಿಳೆಯ ಪತಿ ಮೃತಪಟ್ಟಿದ್ದು, ನಂತರದಲ್ಲಿ ಆಕೆ ಯುವಕನೊಂದಿಗೆ...
1 170 171 172 173 174
Page 172 of 174
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ