Thursday, February 6, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಆಟೋ ಚಾಲಕನಿಗೆ ಚೂರಿ ಇರಿತ : ಆರೋಪಿ ಅರೆಸ್ಟ್-ಕಹಳೆ ನ್ಯೂಸ್

  ವಿಟ್ಲ : ಆಟೋ ಚಾಲಕನಿಗೆ ಯುವಕನೋರ್ವ ಚೂರಿಯಿಂದ ಇರಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಜಂಕ್ಷನ್ನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಡ್ಕಿದು ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ. ಆಟೋ ಚಾಲಕ ಶರೀಫ್ ಗಾಯಗೊಂಡವರಾಗಿದ್ದು, ಆತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಡಿ ನಿವಾಸಿ ರಾವೂಫ್ ಎಂಬವರ ಪುತ್ರ ಆಪೀ ಬಂಧಿತ ಆರೋಪಿ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕಿನ ಪೊಳಲಿ ಜ್ಞಾನ ವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಳ ತಾಲೂಕಿನ ಪೊಳಲಿ ವಲಯದ ಬೆಂಜನಪದವು ಬ್ರಹ್ಮರಕೊಟ್ಲು ಮೇರೇ ಮಜಲು, ಕೊಡಮನ್ ಕಾರ್ಯಕ್ಷೇತ್ರದ ಶ್ರೀ ದುರ್ಗಾ, ಸೌಭಾಗ್ಯ, ವ್ಯಾಘ್ರಶ್ವರಿ, ಅಮ್ಮ ಜ್ಞಾನವಿಕಾಸ ಕೇಂದ್ರ ವಾರ್ಷಿಕೋತ್ಸವ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಬೆಂಜನಪದವುನಲ್ಲಿ ಜರಗಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕಿನ ಅಧ್ಯಕ್ಷ ರೋನಾಲ್ಡ್ ಡಿ ಸೋಜ ಕಾರ್ಯಕ್ರಮ ಉದ್ಘಾಟಿಸಿ ಮಹಿಳೆಯರಿಗೆ ಜ್ಞಾನ ವಿಕಾಸ ಕೇಂದ್ರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜ್ರುಪಾದೆ ಬಲ್ನಾಡು ಇದರ 25ನೇ ವರ್ಷದ ಬೆಳ್ಳಿಹಬ್ಬ ವತಿಯಿಂದ ಮೊಸರು ಕುಡಿಕೆ ಉತ್ಸವ ಪ್ರಯುಕ್ತ ನಡೆದ ಚಪ್ಪರ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜ್ರುಪಾದೆ ಬಲ್ನಾಡು ಇದರ 25ನೇ ವರ್ಷದ ಬೆಳ್ಳಿಹಬ್ಬ ವತಿಯಿಂದ ಮೊಸರು ಕುಡಿಕೆ ಉತ್ಸವ ಪ್ರಯುಕ್ತ ದಂಡನಾಯಕ ಉಳ್ಳಾಲ್ತಿ ದೈವಸ್ಥಾನ ಬಲ್ನಾಡು ಇದರ ಪ್ರದಾನ ಅರ್ಚಕರಾದ ರವಿಚಂದ್ರ ನೆಲ್ಲಿತ್ತಾಯರು ಇವರ ನೇತೃತ್ವದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮ ನೇರವೇರಿತು. ಈ ಸಂದರ್ಭದಲ್ಲಿ ಬಾಲಸುಬ್ರಹ್ಮಣ್ಯ ಕೋಟ್ಯಾನ್ ಅಧ್ಯಕ್ಷರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ, ಬಾಬುಪೂಜಾರಿ ಕುಕ್ಕುತಡಿ ಗೌರವಾಧ್ಯಕ್ಷರು, ಜೊತೆ ಕಾರ್ಯದರ್ಶಿ ರೂಪೇಶ್ ಬಲ್ನಾಡು, ಕೋಶಾಧಿಕಾರಿ ಅಶೋಕ್...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮೈಸೂರಿನಲ್ಲಿ ನಡೆದ 81ಕೆ.ಜಿ ವಿಭಾಗದ ಸೀನಿಯರ್ ವೈಟ್ ಲಿಫ್ಟಿಂಗ್ ನಲ್ಲಿ ಪುತ್ತೂರಿನ ರಜತ್ ರೈಗೆ ಚಿನ್ನದ ಪದಕ – ಕಹಳೆ ನ್ಯೂಸ್

ಪುತ್ತೂರು: ಮೈಸೂರಿನಲ್ಲಿ ನಡೆದ ಸೀನಿಯರ್ ವೈಟ್ ಲಿಫ್ಟಿಂಗ್ ನ 81ಕೆ.ಜಿ ವಿಭಾಗದಲ್ಲಿ ಪುತ್ತೂರಿನ ರಜತ್ ರೈ ಚಿನ್ನದ ಪದಕ ಪಡೆದಿದ್ದು, ಒಟ್ಟು 298 ಕೆ.ಜಿ ಭಾರ ಎತ್ತುವ ಮೂಲಕ ಹೊಸ ರಾಜ್ಯ ಕೂಟ ದಾಖಲೆಯನ್ನು ಮಾಡಿದ್ದಾರೆ. ಕಳೆದ 2ವರ್ಷಗಳಲ್ಲಿ ಚಿನ್ನದ ಪದಕ ಪಡೆದಿರುವ ರಜತ್‌ ರೈ 3ನೇ ವರ್ಷದಲ್ಲಿಯೂ ಚಿನ್ನದ ಪದಕ ಪಡೆಯುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ರಜತ್‌ ರೈ ಹಿಮಾಚಲ್ ಪ್ರದೇಶದಲ್ಲಿ ಮಂಬರುವ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮಚಂದ್ರ ವಿದ್ಯಾಲಯದ ನೂತನ ಹಿರಿಯ ವಿದ್ಯಾರ್ಥಿ ಸಂಘ ರಚನೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ಶ್ರೀ ರಾಮಚಂದ್ರ ವಿದ್ಯಾಲಯದ ನೂತನ ಹಿರಿಯ ವಿದ್ಯಾರ್ಥಿ ಸಂಘ 78ನೇ ಸ್ವಾತಂತ್ರತ್ರೋತ್ಸವದಂದು ವಿದ್ಯಾಸಂಸ್ಥೆಯ ಸುವರ್ಣ ವೇದಿಕೆಯಲ್ಲಿ ನಾಮ ನಿರ್ದೇಶನದ ಮೂಲಕ ಸರ್ವನುಮತದಿಂದ ಪದಾಧಿಕಾರಿಗಳನ್ನ ಪ್ರಾಚಾರ್ಯರ ಹಾಗೂ ಮುಖ್ಯಗುರುಗಳ ಮಾರ್ಗದರ್ಶನದಲ್ಲಿ ಆಯ್ಕೆಮಾಡಲಾಯಿತು.         ಅಧ್ಯಕ್ಷ ಮ್ಯಾಕ್ಸಿಮ್ ಲೋಬೊ                         ಕಾರ್ಯದರ್ಶಿ ಸನತ್ ಆಳ್ವ             ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ 1994-95 ನೇ ಸಾಲಿನ ಎಸ್ ಎಸ್ ಎಲ್ ಸಿ ಕ್ಲಾಸ್ ಮೇಟ್ಸ್ ತಂಡದ ವತಿಯಿಂದ 2 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ 1994-95 ನೇ ಸಾಲಿನ ಎಸ್ ಎಸ್ ಎಲ್ ಸಿ ಕ್ಲಾಸ್ ಮೇಟ್ಸ್ ತಂಡದ ವತಿಯಿಂದ 2 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ಬಿಸಿರೋಡಿನ ಹೋಟೆಲ್ ರಂಗೋಲಿಯಲ್ಲಿ ನಡೆಯಿತು. ತುಳುನಾಡಿನ ಬಗೆ ಬಗೆ ಯ ತಿಂಡಿ ತಿನಿಸುಗಳನ್ನು ತಂದು ಸವಿದರು. ತಂಡದ ಮುಂದಾಳತ್ವವನ್ನು ಪ್ರಜ್ಞಾ, ಶುಕರಾಜ್ ಎಸ್ ಕೊಟ್ಟಾರಿ, ಗಂಗಾಧರ್ ಗೌಡ ಮಾಣಿ ವಹಿಸಿದ್ದರು. ತಂಡದ ಸದಸ್ಯರಾದ ಶುಕರಾಜ್ ಎಸ್ ಕೊಟ್ಟಾರಿ ವಕೀಲರು ಮಂಗಳೂರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲ್ಲಡ್ಕ ಕ್ಲಸ್ಟರ್ ನ ಶಿಕ್ಷಕರ ಸಮಾಲೋಚನಾ ಸಭೆ- ಕಹಳೆ ನ್ಯೂಸ್

ಕನ್ನಡ ಭಾಷೆ ,ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ತಾಯಿಯಿಂದ ಮಾತೃಭಾಷೆಯ ಮೂಲಕ ಕನ್ನಡ ಭಾಷೆಯಲ್ಲಿ ಸಂವಹನ ನಡೆದಾಗ ಭಾಷೆ ಗಟ್ಟಿಯಾಗುತ್ತದೆ. ಶಿಕ್ಷಕರು ಮೊದಲು ತನ್ನನ್ನು ತಾನು ಅರಿತು ಕೊಂಡಾಗ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಪರಿಣಾಮಗಳನ್ನು ಉಂಟುಮಾಡಲು ಸುಲಭ ಸಾಧ್ಯವಾಗುತ್ತದೆ. ತಾನು ಬದಲಾಗಿ ತನ್ನ ಜೊತೆಗೆ ಇತರರನ್ನು ಹೊಂದಿಕೊಂಡು ಬೆಳೆಯುವುದೇ ಶಿಕ್ಷಕ ಧರ್ಮ ಎಂದು ಉಪನ್ಯಾಸಕ ಜಯಾನಂದ ಪೆರಾಜೆ ಹೇಳಿದರು. ಅವರು ದ. ಕ. ಜಿಲ್ಲಾ ಪಂಚಾಯತ್ ಹಿರಿಯ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ- ಕಹಳೆ ನ್ಯೂಸ್

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಪ್ರಣತಿ, ಆದ್ಯಾ ಬಿ.ಆರ್‌, ವರ್ಷ.ಕೆ, ಯಜ್ಞಾ, ವೀಕ್ಷಾ ಪಿ, ಶ್ರಾವ್ಯಾ ಯು, ಗ್ರೀಷ್ಮಾ ಎಸ್. ಎ, ತ್ರಿಶಾಲಿ ಕೆ.ಆರ್‌, ರಕ್ಷಾ ಎ.ಎಲ್ ಹಾಗೂ ದ್ವಿತೀಯ ಪಿಯುಸಿಯ ಕಾರ್ತಿಕಾ, ಧನುಶ್ರೀ ಹಾಗೂ ತ್ರಿಶಾ...
1 193 194 195 196 197 2,768
Page 195 of 2768