Tuesday, March 25, 2025

ಸುದ್ದಿ

ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕಾಫಿನಾಡಿನಲ್ಲಿ ಗಾಳಿ – ಮಳೆ ಅಬ್ಬರ. ಧರೆಗುರುಳಿದ ಮರ ;ರಸ್ತೆ ಬಂದ್-ಕಹಳೆ ನ್ಯೂಸ್

ಚಿಕ್ಕಮಗಳೂರು: ಮಲೆನಾಡಿನಲ್ಲಿ ಗಾಳಿ ಮಳೆಯ ಅಬ್ಬರ ಜೋರಾಗಿದ್ದು ಪರಿಣಾಮ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ರಸ್ತೆ ಸಂಚಾರ ತಾತ್ಕಾಲಿಕ ಬಂದ್ ಆಗಿದೆ. ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ ಭಾರೀ ಗಾಳಿ-ಮಳೆಯಿಂದಾಗಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕಳಸದಿಂದ ಮೂಡಿಗೆರೆ ಹೋಗುವ ಮಾರ್ಗ ತಾತ್ಕಾಲಿಕ ಬಂದ್ ಆಗಿದ್ದು ಕೂಡಲೇ ಸ್ಥಳೀಯರು ಮರ ತೆರವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ. ಕಳಸ ತಾಲೂಕಿನ ಹಿರೇಬೈಲ್-ಮರಸಣಿಗೆ ಬಳಿ ಘಟನೆ ನಡೆದಿದ್ದು ಇಲ್ಲಿನ...
ಜಿಲ್ಲೆಸುದ್ದಿ

ಗ್ಯಾಸ್ ಸಿಲಿಂಡರ್ ಸಾಗಾಟ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ; ಚಾಲಕನಿಗೆ ಗಾಯ

ದಾಂಡೇಲಿ : ಗ್ಯಾಸ್ ಸಿಲಿಂಡರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿ, ಚಾಲಕನಿಗೆ ಗಾಯವಾದ ಘಟನೆ ಇಂದು ಮಂಗಳವಾರ(ಮಾ.25) ಬೆಳಿಗ್ಗೆ 9:30 ಗಂಟೆ ಸುಮಾರಿಗೆ ಹಳಿಯಾಳ – ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಬರುವ ಆಲೂರು – ಕರ್ಕಾ ಮಧ್ಯೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ವಿನಾಯಕ ಚ್ಯಾಟಿ ಎಂಬಾತನೇ ಗಾಯಗೊಂಡ ಚಾಲಕನಾಗಿದ್ದಾನೆ. ಅಪಘಾತದ ವೇಳೆ...
ಜಿಲ್ಲೆಸುದ್ದಿ

ಮಂಚಕ್ಕೆ ಕರೆದರೂ ಬಾರದ ಅತ್ತಿಗೆಗೆ ಸಿಕ್ಕ ಸಿಕ್ಕಲ್ಲಿ ಕಚ್ಚಿದ ಕಾಮುಕ ಮೈದುನ-ಕಹಳೆ ನ್ಯೂಸ್

ಧಾರವಾಡ : ನಮ್ಮ ಹಿಂದೂ ಸಂಪ್ರದಾಯದಲ್ಲಿ ಅತ್ತಿಗೆಗೆ ತಾಯಿಯ ಸ್ಥಾನ ನೀಡಲಾಗಿದೆ. ಆದರೆ ಇತ್ತೀಚಿಗೆ ದಿನಗಳಲ್ಲಿ ಸಂಬಂಧಕ್ಕೂ ಬೆಲೆ ಇಲ್ಲದಂತಾಗಿದೆ. ಇದೀಗ ವ್ಯಕ್ತಿಯೊಬ್ಬ, ಅಣ್ಣನ ಹೆಂಡತಿ‌ ಮೇಲೆ ಕಣ್ಣಾಗಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದ್ರೆ, ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ‌. ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸ ಕಟ್ಟಿ ಗ್ರಾಮದಲ್ಲಿ ನಡೆದಿದೆ. ಅತ್ತಿಗೆ ಮೇಲೆ ಹಲ್ಲೆ ಮಾಡಿ ಕಚ್ಚಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಮಠದ ಸಮೀಪ ಗುಡ್ಡಕ್ಕೆ ಬೆಂಕಿ .ಪುನಾರ್ಪುಳಿ ಗಿಡಗಳಿಗೆ ಹಾನಿ-ಕಹಳೆ ನ್ಯೂಸ್

ಮಾಣಿ : ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀ ರಾಮಚಂದ್ರಾ ಪುರಮಠದ ವತಿಯಿಂದ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು ಒಂದು ಸಾವಿರ ಪುನಾರ್ಪುಳಿ ಗಿಡಗಳ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿಬಿದ್ದಿದೆ. ಸ್ಥಳೀಯರು ನೀರುಹಾಕಿ ಬೆಂಕಿನಂದಿಸಲು ಪ್ರಯತ್ನಿಸಿದರೂ ಬಿಸಿಲಿನ ಧಗೆಗೆ ಬೆಂಕಿ ಗುಡ್ಡಕ್ಕೆ ಹರಡಿಕೊಂಡಿತು.ಬಳಿಕ ಬಂಟ್ವಾಳ ಫೈರ್ ಸರ್ವಿಸ್ ನವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಫಲಭರಿತ ಸುಮಾರು 50 ಗಿಡಗಳು ಬೆಂಕಿಯ ಕೆನ್ನಾಲಗೆಗೆ ಸಿಕ್ಕಿ ಸುಟ್ಟು ಹೋಗಿವೆ. ಹತ್ತಿರದಲ್ಲೇ ,ಮನೆಗಳು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜೋಡುಮಾರ್ಗ ಜೇಸಿಯಿಂದ ಮಜಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ ಮೂಲಕ ವಿಶ್ವ ಜಲ ದಿನ ಆಚರಣೆ-ಕಹಳೆ ನ್ಯೂಸ್

ಬಂಟ್ವಾಳ: ಜೋಡುಮಾರ್ಗ ಜೇಸಿ ವತಿಯಿಂದ ಶನಿವಾರ ಮಜಿ ವೀರಕಂಭ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸುವ ಮೂಲಕ ವಿಶ್ವ ಜಲ ದಿನ ಆಚರಿಸಲಾಯಿತು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜೇಸಿ ರಾಷ್ಟ್ರೀಯ ಉಪಾಧ್ಯಕ್ಷ ಜಿ.ಎಸ್.ಎನ್. ವರ್ಮಾ ಹಸ್ತಾಂತರಿಸಿ ಮಾತನಾಡಿ ನೀರಿನ ಮಹತ್ವವನ್ನು ವಿವರಿಸಿದರು. ಮುಖ್ಯ ಶಿಕ್ಷಕಿ ಬೆನೆಡಿಕ್ಟ ನೊರೊನ್ಹಾ ಹಾಗೂ ಶಿಕ್ಷಕವೃಂದಕ್ಕೆ ಘಟಕವನ್ನು ಹಸ್ತಾಂತರಿಸಲಾಯಿತು. ಶಿಕ್ಷಕಿ ಸಂಗೀತಾ ಶರ್ಮ ಮಾತನಾಡಿ ವಿಶ್ವ ಜಲದಿನವಾದ ಇಂದು ಶಾಲೆ ಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ ಜೀರ್ಣೋದ್ದಾರಕ್ಕೆ ಮಂಜೂರಾದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ (ರಿ )ಬಿ ಸಿ ಟ್ರಸ್ಟ್.ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ವಲಯದ ಬಂಟ್ವಾಳಮೂಡ ಕಾರ್ಯಕ್ಷೇತ್ರದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ ರೂ 2 ಲಕ್ಷ ಅನುದಾನ ಮೊತ್ತದ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲ್ಲೂಕು ಯೋಜನಾಧಿಕಾರಿ ಜಯಾನಂದ ಪಿ ರವರು ಭಜನಾ ಮಂಡಳಿಯ ಅಧ್ಯಕ್ಷರು ಗಣೇಶ್ ದಾಸ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗ ಇಡುವಂತೆ ಗ್ರಾಮಸ್ಥರ ಆಗ್ರಹ -ಕಹಳೆ ನ್ಯೂಸ್

ಬಂಟ್ವಾಳ: ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗ ಇಡುವಂತೆ ಗ್ರಾಮಸ್ಥರು ಆಗ್ರಹಿಸಿದರು. ಸೋಮವಾರ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ನಡೆದ ವೀರಕಂಭ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆಯಲ್ಲಿ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳಿಂದ ಗ್ರಾಮ ಸ್ವಚ್ಛತೆಗೆ ಅಡ್ಡಿಯಾಗಿದ್ದು, ಪರಿಚಯ ಇಲ್ಲದವರಿಗೆ ಬಾಡಿಗೆ ನೀಡಿರುವುದರಿಂದ ಕ್ರಮ ಚಟುವಟಿಕೆಗಳು ನಡೆಯುತ್ತಿದೆ,ಬಾಡಿಗೆ ಮನೆ ನೀಡುವಾಗ ಸೂಕ್ತ ದಾಖಲಾತಿ ಪಡೆದು ಗ್ರಾಮ ಪಂಚಾಯತಿಗೆ ಮಾಹಿತಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಒಂದೇ ಟಯರ್‌ನಲ್ಲಿ ‘ಸಾರಾ’ ಎಂಬ ಖಾಸಗಿ ಬಸ್ ಸಂಚಾರ ; ಬಸ್ ತಡೆ ಹಿಡಿದು ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ಬಂಟ್ವಾಳ, ಮಾ.24 : ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.   ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ 'ಸಾರಾ' ಎಂಬ ಖಾಸಗಿ ಬಸ್ಸಿನ ಬಸ್ಸಿನ ಹಿಂದಿನ ಎಡಭಾಗದಲ್ಲಿ ಒಂದೇ ಚಕ್ರದಲ್ಲಿ ಸಂಚರಿಸುತ್ತಿತ್ತು. ಇನ್ನೊಂದು ಟಯರ್ ಒಡೆದು ವಿಚಿತ್ರ ಶಬ್ದ ಬರುತ್ತಿದ್ದರೂ ಚಾಲಕ, ನಿರ್ವಾಹಕ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಶನಿವಾರ...
1 2 3 4 2,818
Page 2 of 2818
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ