Wednesday, April 2, 2025

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 311 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಎಂಟು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 311 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ 238 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ಆರು ಮಂದಿ ಸಾವನ್ನಪ್ಪಿದ್ದರು. ಆದರೆ, ಇಂದು‌ ಎಂಟು ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿಯ ಪುತ್ತಿಲದ ವ್ಯಕ್ತಿ ಮೃತ್ಯು ; ಕೊರೋನಾ ಸೋಂಕು ದೃಢ – ಕಹಳೆ ನ್ಯೂಸ್‌

ಪುತ್ತೂರು: ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಜು. 17ರಂದು ಮೃತಪಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಕೊರೋನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಜು.14ರಂದು ಬೆಳ್ತಂಗಡಿ ತಾಲೂಕಿನ ಪುತ್ತಿಲದ ಸುಮಾರು 57 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಜು. 16ರಂದು ಅವರ ಗಂಟಲು ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. 17ರಂದು ಆ ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ವ್ಯಕ್ತಿ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಖೋಡೆಸ್ ರಮ್ ಕುಡಿದ್ರೆ ಕೊರೊನಾ ಓಡುತ್ತೆ ; ಉಳ್ಳಾಲ ಕಾಂಗ್ರೆಸ್ ಕೌನ್ಸಿಲರ್ ಬಿಟ್ಟಿ ಸಲಹೆ – ಕಹಳೆ ನ್ಯೂಸ್

ಮಂಗಳೂರು: ಖೋಡೆಸ್ ರಮ್ ಕುಡಿದ್ರೆ ಕೊರೊನಾ ವೈರಸ್ ಹತ್ತಿರನೇ ಸುಳಿಯೋದಿಲ್ಲ ಎಂದು ಉಳ್ಳಾಲನಗರ ಸಭೆಯಲ್ಲಿ ಕಾಂಗ್ರೆಸ್ ಕೌನ್ಸಿಲರ್ ಹೇಳಿದ ಬಿಟ್ಟಿ ಉಪದೇಶ ಇದೀಗ ಎಲ್ಲರ ಟೀಕೆಗೆ ಗುರಿಯಾಗಿದೆ. ಉಳ್ಳಾಲ ನಗರ ಸಭೆಯ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ, ಮದ್ಯದ ಬಾಟಲಿ ಹಿಡಿದುಕೊಂಡು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತಾನು ಕುಡಿಯುವುದಿಲ್ಲ ಎಂದು ಹೇಳಿಕೊಂಡು ಮದ್ಯ ತುಂಬಿದ ಬಾಟಲಿ ಹಿಡಿದು ಜನಸಾಮಾನ್ಯರಿಗೆ ಖೋಡೆಸ್ ರಮ್ ಕುಡಿಯಲು ಸಲಹೆ ನೀಡುತ್ತಿರುವ ವೀಡಿಯೋ ವೈರಲ್...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆ

ಮೂಡುಬಿದಿರೆಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಮೀನು ವ್ಯಾಪಾರಿ ‘ ಬೋಲ್ಟ್ ‘ ಆಸಿಫ್..! – ಕಹಳೆ ನ್ಯೂಸ್

ಮೂಡುಬಿದಿರೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಮಾರ್ಪಾಡಿಯ ಮೀನು ವ್ಯಾಪಾರಿಯೊಬ್ಬ ಅತ್ಯಾಚಾವೆಸಗಿದ ಘಟನೆ ಮೂಡುಬಿದಿರೆಯ ಮಾರ್ಪಾಡಿಯಲ್ಲಿ ನಡೆದಿದೆ. ಸ್ಥಳೀಯ ಮೀನು ವ್ಯಾಪಾರಿ ಆಸಿಫ್ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಮೀನು ವ್ಯಾಪಾರಿ ಅಸೀಫ್ , ತಾನು ವಾಸವಿದ್ದ ಪರಿಸರದಲ್ಲೇ ವಾಸ್ತವ್ಯವಿದ್ದ ತಮಿಳು ಮೂಲದ ಕೂಲಿ ಕಾರ್ಮಿಕರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳ ಜತೆ ಈತ ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಮನೆ ಹತ್ತಿರದ ಗುಡ್ಡೆಯಲ್ಲಿ ಅತ್ಯಾಚಾರವೆಸಗಿದ್ದ...
ದಕ್ಷಿಣ ಕನ್ನಡರಾಜಕೀಯಸುದ್ದಿ

‘ದ.ಕ. ಜಿಲ್ಲೆಗೆ 25 ಸಾವಿರ ಕೊವೀಡ್ ರ್‍ಯಾಪಿಡ್ ಟೆಸ್ಟ್‌ಕಿಟ್‌, 15 ಆಂಬುಲೆನ್ಸ್‌ ಪೂರೈಕೆ’ ; ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು, ಜು.17  : ದ.ಕ. ಜಿಲ್ಲೆಗೆ 25 ಸಾವಿರ ಕೊವೀಡ್ ರ್‍ಯಾಪಿಡ್ ಟೆಸ್ಟ್‌ಕಿಟ್‌, 15 ಆಂಬುಲೆನ್ಸ್‌ ಪೂರೈಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಅಶ್ವತ್‌ ನಾರಾಯಣ ಅವರು ಭರವಸೆ ನೀಡಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ. ಕೊರೊನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯ ಕುರಿತು ಉಪ ಮುಖ್ಯಮಂತ್ರಿಗಳಾದ ಅಶ್ವತ್‌ ನಾರಾಯಣ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಚರ್ಚೆ ನಡೆಸಿದ್ದು...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಉಪ್ಪಿನಂಗಡಿಯ‌‌ಲ್ಲಿ ತಾಯಿ ಬೈದರೆಂದು ನೇಣಿಗೆ ಕೊರಳೊಡ್ಡಿದ 10ರ ಬಾಲೆ – ಕಹಳೆ ನ್ಯೂಸ್

ಉಪ್ಪಿನಂಗಡಿ‌‌, ಜು 17 : ಬಾಲಕಿಯೋರ್ವಳು ತಾಯಿ ಬೈದರೆಂದು ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬಂಡಾಡಿ ಗ್ರಾಮದ ಕೇದಗೆದಡಿ ಎಂಬಲ್ಲಿ ಗುರುವಾರ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಕೇದಗೆದಡಿ ನಿವಾಸಿ ಬಾಲಚಂದ್ರ ಎಂಬವರ ಪುತ್ರಿ ಪ್ರಿಯಾ (10) ಎನ್ನಲಾಗಿದೆ. ಗುರುವಾರ ಸಂಜೆ ವೇಳೆ ತಲೆಕಟ್ಟಲು ಹೇಳಿದ್ದಕ್ಕೆ ತಾಯಿ ಬೈದರೆಂದು ಮುನಿಸಿಕೊಂಡು ಮನೆಯ ಶೌಚಾಲಯಕ್ಕೆ ತೆರಳಿದ್ದಳು. ಪ್ರಿಯಾ ಕಾಣಿಸದೇ ಇದ್ದ ಸಂದರ್ಭ ಮನೆಯವರು ಹುಡುಕಾಟ ನಡೆಸಿದಾಗ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ...
ದಕ್ಷಿಣ ಕನ್ನಡರಾಜಕೀಯಸುದ್ದಿ

Breaking News : ಕಾಂಗ್ರೆಸ್ ಯುವ ನಾಯಕ ಮಿಥುನ್ ರೈಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ, ತಮಗೆ ಕೊರೋನಾ ಸೋಂಕು ತಗುಲಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಮಿಥುನ್ ರೈ ಪೋಸ್ಟ್ ಮಾಡಿರುವುದೇನು ? https://www.facebook.com/756824464358589/posts/4207736275934040/ ನನಗೆ ಕೊರೋನಾ ಪಾಸಿಟಿವ್ ಆಗಿದೆ ಮತ್ತು ನಾನು ಬೆಂಗಳೂರಿನಲ್ಲಿ ಕ್ಯಾರೆಂಟೈನ್ ನಲ್ಲಿದ್ದೇನೆ. ನಿಮ್ಮ ಎಲ್ಲಾ ಪ್ರೀತಿ ಮತ್ತು ಆಶೀರ್ವಾದಗಳೊಂದಿಗೆ, ನಾನು ಚೇತರಿಸಿಕೊಳ್ಳುತ್ತೇನೆ ಮತ್ತು ಶೀಘ್ರದಲ್ಲೇ ನಿಮ್ಮ ಸೇವೆಗೆ ಮರಳುತ್ತೇನೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆರಿಗೆಯಾದ ಮಹಿಳೆಗೆ ಕೊರೊನಾ ದೃಢ ; ಆಸ್ಪತ್ರೆ ಗೇಟ್ ಮುರಿದು ಬಾಣಂತಿ – ಮಗು ಕರೆದೊಯ್ದು ಪತಿ – ಕಹಳೆ ನ್ಯೂಸ್

ಬೆಳ್ತಂಗಡಿ, ಜು 17 ;ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆರಿಗೆಯಾದ ಮಹಿಳೆಗೆ ಕೊರೊನಾ ದೃಢಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪತಿ ಗೇಟ್ ಬೀಗ ಮುರಿದು ಆಸ್ಪತ್ರೆ ಪ್ರವೇಶಿಸಿದ್ದು ಮಗು ಮತ್ತು ಬಾಣಂತಿಯನ್ನು ತನ್ನ ಕಾರಿನಲ್ಲಿ ಕರೆದೊಯ್ದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಇಲ್ಲಿನ  ನಾವೂರು ಗ್ರಾಮದ ಮಹಿಳೆ ಬುಧವಾರ ಇಲ್ಲಿ ಹೆರಿಗೆಗಾಗಿ ದಾಖಲಾಗಿದ್ದರು.ಈ ಸಂದರ್ಭ ಅವರ ಗಂಟಲದ್ರವ ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು.ಈ ನಡುವೆ ಬುಧವಾರ ರಾತ್ರಿಯೇ ಅವರಿಗೆ ಹೆರಿಗೆ ಆಗಿತ್ತು.ಗುರುವಾರ ಸಂಜೆ ಕೊರೊನಾ...
1 552 553 554 555 556 564
Page 554 of 564
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ