Sunday, March 30, 2025

ಕಾಸರಗೋಡು

ಕಾಸರಗೋಡುಯಕ್ಷಗಾನ / ಕಲೆ

ಕುಂಬಳೆಯಲ್ಲಿ ಪ್ರಥಮ ಪ್ರದರ್ಶನ ಕಂಡ “ಕಣಿಪುರ ಶ್ರೀ ಬಾಲಗೋಪಾಲ” ನೃತ್ಯ ರೂಪಕ -ಕಹಳೆ ನ್ಯೂಸ್

ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ದೇವರ ಪುನಃ ಪ್ರತಿಷ್ಠಾ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರಧಾನ ವೇದಿಕೆಯಲ್ಲಿ ಪುತ್ತೂರಿನ ವೈಷ್ಣವೀ ನಾಟ್ಯಾಲಯದ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಇವರು ನೃತ್ಯ ಸಂಯೋಜನೆ ಹಾಗೂ ನಿರ್ದೇಶನವನ್ನು ಮಾಡಿದ " ಶ್ರೀ ಬಾಲಗೋಪಾಲ" ಎನ್ನುವ ವಿನೂತನ ನೃತ್ಯ ರೂಪಕ ಪ್ರಪ್ರಥಮ ಬಾರಿಗೆ ಪ್ರದರ್ಶನಗೊಂಡು ಜನ ಮೆಚ್ಚುಗೆಗೆ ಪಾತ್ರವಾಯಿತು. ನೃತ್ಯ ರೂಪಕ ಹಾಗೂ ಭರತನಾಟ್ಯ ಪ್ರದರ್ಶನದಲ್ಲಿ ಬದಿಯಡ್ಕ ಹಾಗೂ ಕುಂಬಳೆ ಶಾಖೆಯ ಸುಮಾರು 50...
ಕಾಸರಗೋಡುದಕ್ಷಿಣ ಕನ್ನಡಸುದ್ದಿ

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಎರಡು ಮಳಿಗೆಗಳು; ಲಕ್ಷಾಂತರ ರೂ. ನಷ್ಟ..! -ಕಹಳೆ ನ್ಯೂಸ್

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಎರಡು ಮಳಿಗೆಗಳು ಬೆಂಕಿಗೆ ಧಗಧಗನೆ ಹೊತ್ತಿ ಉರಿದ ಘಟನೆ ಕಾಸರಗೋಡಿನ ಹಳೆ ಬಸ್ಸು ನಿಲ್ದಾಣ ಸಮೀಪ ನಡೆದಿದೆ. ಹಳೆ ಬಸ್ಸು ನಿಲ್ದಾಣ ಸಮೀಪದ ಸರಕು ಸಾಮಾಗ್ರಿ, ಮೊಬೈಲ್ ಹಾಗೂ ವಾಚ್ ವರ್ಕ್ಸ್ ಮಳಿಗೆಗಳಲ್ಲಿ ಈ ಬೆಂಕಿ ಅವಘಡ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಬೆಂಕಿ ಅಪಘಾತ ನಡೆದಿದೆ ಎನ್ನಲಾಗುತ್ತಿದೆ. ಮೊಬೈಲ್ ಮಳಿಗೆಯಲ್ಲಿ ಮೂರು ಲಕ್ಷ ರೂ. ಹಾಗೂ ಸರಕು ಸಾಮಾಗ್ರಿ ಮಳಿಗೆಯಲ್ಲಿ ಸುಮಾರು...
ಕಾಸರಗೋಡುಬದಿಯಡ್ಕಸಂತಾಪಸುದ್ದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಗೋಪಾಲ್ ಚೆಟ್ಟಿಯಾರ್ ನಿಧನ – ಕಹಳೆ ನ್ಯೂಸ್

ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ ಪೂರ್ಣಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ...
ಕಾಸರಗೋಡುಸುದ್ದಿ

ನಕಲಿ ಪಾಸ್‌ಪೋರ್ಟ್ ವೀಸಾ ದಂಧೆ ಭೇದಿಸಿದ ಕೇರಳ ಪೊಲೀಸರು – ಕಹಳೆ ನ್ಯೂಸ್

ಕಾಸರಗೋಡು : ನಕಲಿ ವೀಸಾ ದಂಧೆಯಲ್ಲಿ ತೊಡಗಿಕೊಂಡಿದ್ದ ಭಾರಿ ಜಾಲವೊಂದನ್ನು ಕೇರಳದ ಬೇಡಕಂ ಪೊಲೀಸರು ಭೇದಿಸಿದ್ದು ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ 37 ನಕಲಿ ಸೀಲುಗಳು, ಬ್ಯಾಂಕ್‌ಗಳು, ಕಾಲೇಜುಗಳು ಮತ್ತು ವೈದ್ಯರ ಲೆಟರ್‌ಹೆಡ್‌, ಲ್ಯಾಪ್ ಟಾಪ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ದಕ್ಷಿಣ ಕೊರಿಯಾದ ಕೆಐಎ ಉದ್ಯೋಗಿಯೂ ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರಿಂದ ಮೂರು ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ತ್ರಿಕರಿಪುರ ಗ್ರಾಮ ಪಂಚಾಯತ್‌ನ ಉಡುಂಬುಂತಲದ ಎಂ ಎ...
ಕಾಸರಗೋಡುಬದಿಯಡ್ಕರಾಜ್ಯರಾಷ್ಟ್ರೀಯಸುದ್ದಿ

2024ನೇ ಸಾಲಿನ ಪದ್ಮ ಪ್ರಶಸ್ತಿಗಳು ಪ್ರಕಟ ; ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಅವರಿಗೆ ಪದ್ಮಶ್ರೀ ಮುಕುಟ – ಕಹಳೆ ನ್ಯೂಸ್

ಹೊಸದಿಲ್ಲಿ / ಕಾಸರಗೋಡು : ಪ್ರತೀ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಸತ್ಯನಾರಾಯಣ ಬೆಳ್ಳೇರಿ  ಕಾಸರಗೋಡಿನ ಭತ್ತ ಬೆಳೆಯುವ ರೈತರಾಗಿದ್ದು 650 ಕ್ಕೂ ಹೆಚ್ಚು ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವ ಮೂಲಕ ಭತ್ತದ ಬೆಳೆಗಳ ಕಾವಲುಗಾರನಾಗಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪದ್ಮಶ್ರೀ ಪುರಸ್ಕೃತ ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಪರಿಚಯ ಇಲ್ಲಿದೆ…!! ಕಳೆದ 12 ವರ್ಷಗಳಿಂದ ಮರೆಯಾಗುತ್ತಿರುವ ದೇಸಿ ಭತ್ತದ...
ಕಾಸರಗೋಡುರಾಜ್ಯಸುದ್ದಿ

ಗುರುವಾಯೂರು ಶ್ರೀಕೃಷ್ಣ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ, ಪೂಜೆ ಸಲ್ಲಿಕೆ – ಕಹಳೆ ನ್ಯೂಸ್

ತ್ರಿಶ್ಶೂರ್(ಕೇರಳ): ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಜನವರಿ 17) ಬೆಳಗ್ಗೆ ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿ ಮೋದಿ ಅವರು ಸಾಂಪ್ರದಾಯಿಕ ಬಿಳಿ ಪಂಚೆ ಮತ್ತು ಶಾಲು ಧರಿಸಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಉಡುಪನ್ನು ಬದಲಾಯಿಸಿ, ನಟ, ರಾಜಕಾರಣಿ ಸುರೇಶ್‌ ಗೋಪಿ ಅವರ ಪುತ್ರಿಯ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿರುವುದಾಗಿ ವರದಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನೂತನ ವಧು,...
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಪುತ್ತೂರು-ಸುಳ್ಯ-ಕೇರಳ ಗಡಿಭಾಗದ ಮಂಡೆಕೋಲು, ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ – ಕಹಳೆ ನ್ಯೂಸ್

ಪುತ್ತೂರು, ಜ 03: ಕಾಡಾನೆಯೊಂದು ತೋಟಕ್ಕೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ಜ.3 ರಂದು ಬುಧವಾರ ಮುಂಜಾನೆ ಕುಮಾರ್ ಪೆರ್ನಾಜೆ ಎಂಬವರ ತೋಟದಲ್ಲಿ ನಡೆದಿದೆ. ಪುತ್ತೂರು-ಸುಳ್ಯ-ಕೇರಳ ಗಡಿಭಾಗದ ಆನೆಗುಂಡಿ ರಕ್ಷಿತಾರಣ್ಯದಿಂದ ಬಂದಿರುವ ಒಂಟಿ ಸಲಗ ಎಂದು ಹೇಳಲಾಗಿದೆ. ಮಂಡೆಕೋಲು, ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿರುವ ಕೃಷಿ ತೋಟಗಳಿಗೆ ದಾಳಿ ನಡೆಸಿದ ಒಂಟಿ ಸಲಗ ಗುಂಪಿನಿಂದ ಬೇರ್ಪಟ್ಟು ಕನಕಮಜಲು ಮುಗೇರಿನಿಂದ ಪೆರ್ನಾಜೆಗೆ ಬಂದು ಹಾನಿಗೊಳಿಸಿ ಪುನಃ ಮುಗೇರಿನ ಕಡೆಗೆ...
ಕಾಸರಗೋಡುಮಂಜೇಶ್ವರಸುದ್ದಿ

ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಪನ್ನ ; ರಥ ಬೀದಿಯಲ್ಲಿ ಭಕ್ತ ಸಾಗರ – ಕಹಳೆ ನ್ಯೂಸ್

ಮಂಜೇಶ್ವರ,  ಡಿ 19 : ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ. ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು. ತುಳುನಾಡಿನಲ್ಲಿ ಹಿಂದಿನಿಂದಲೂ ನಾಗ ದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಡನಾಗಿ ಭಕ್ತರಿಗೆ ದರ್ಶನ ನೀಡಿದ್ದು...
1 3 4 5 6 7 18
Page 5 of 18
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ