ನಾವೇ ರಾಜಿ ಮಾಡಿಕೊಂಡಿದ್ದೇವೆ, ಪ್ರಕರಣ ಹಿಂಪಡೆಯಿರಿ: ಡಿಸಿ ಗೆ ಮನವಿ-ಕಹಳೆ ನ್ಯೂಸ್
ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಘಟನೆಯ ಮೇಲೆ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂತ್ರಸ್ತೆ ಲಕ್ಕವ್ವ ಬಾಯಿ ನೇತೃತ್ವದಲ್ಲಿ ಸಮುದಾಯದವರು ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಮನವಿ ಸಲ್ಲಿಸಿದರು. ಹಲವು ವರ್ಷಗಳಿಂದ ವಿವಿಧ ಜಿಲ್ಲೆಗಳಿಂದ ಉದ್ಯೋಗ ಅರಸಿಕೊಂಡು ಉಡುಪಿಗೆ ಬಂದು ಮಲ್ಪೆ ಮೀನುಗಾರರ ಸಂಘದ ಸಹಕಾರದಿಂದ ಮಲ್ಪೆ ಬಂದರಿನಲ್ಲಿ ಕೆಲಸ ಮಾಡಿಕೊಂಡಿದ್ದೇವೆ. ಇತ್ತೀಚೆಗೆ ಆಕಸ್ಮಿಕವಾಗಿ ನಡೆದ ಘಟನೆಯ ಅನಂತರ ನಮ್ಮ ಸಮುದಾಯದ ಪ್ರಮುಖರು ಹಾಗೂ ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳ...