Wednesday, April 2, 2025

ಉಡುಪಿ

ಉಡುಪಿಜಿಲ್ಲೆಸುದ್ದಿ

ತಪ್ಪಿಸಿದ ರಾಹುಕಾಲ ಅವರಿಗೆ ಮಾತ್ರ, ರಾಜ್ಯಕ್ಕೆ ರಾಹುಕಾಲ ಅಂಟಿದ್ದು ಗ್ಯಾರೆಂಟಿ – ಶ್ರೀನಿಧಿ ಹೆಗ್ಡೆ-ಕಹಳೆ ನ್ಯೂಸ್

ಉಡುಪಿ: ರಾಹುಕಾಲ ಎಂಬ ಕಾರಣಕ್ಕೆ ನಿಗದಿತ ಸಮಯಕ್ಕಿಂತ 45 ನಿಮಿಷ ಬೇಗ ಬಜೆಟ್ ಆರಂಭಿಸಿದ ಸಿಎಂ, ರಾಜ್ಯದ ಹಿಂದೂಗಳಿಗೆ ಮರಾಮೋಸ ಮಾಡಿದ್ದಲ್ಲದೇ ಉಡುಪಿ ಜಿಲ್ಲೆಗೂ ಯಾವ ಯೋಜನೆಗಳನ್ನು ಘೋಷಿಸಿಲ್ಲ ಎಂದು ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್ ಹಾಗು ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಆರ್ಥಿಕತೆಗೆ ಅತೀ ಅಮೂಲ್ಯ ಕೊಡುಗೆ ನೀಡುವ ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ನೀಡದೆ, ಉಡುಪಿ...
ಉಡುಪಿಕಾಪುಜಿಲ್ಲೆಸುದ್ದಿ

ನಮ್ಮ ವಯೋ ವೃದ್ದಾ ಹಿರಿಯ ನಾಗರೀಕ ರೆಂದರೆ ರೋಗಿ ಗಳಲ್ಲ ಯಾರಿಗೂ ಪ್ರಯೋಜನ ವಿಲ್ಲದ ನಿಸ್ ಪ್ರಯೋಜ ಕರಲ್ಲ, ಅವರನ್ನು ಗೌರವಿಸಿ-ಕಾಪು ತಾಲೂಕು ತಹಸೀಲ್ದಾರ್- ಕಹಳೆ ನ್ಯೂಸ್

ಕಾಪು : ನಮ್ಮ ವಯೋ ವೃದ್ದಾ ಹಿರಿಯ ನಾಗರೀಕ ರೆಂದರೆ ರೋಗಿ ಗಳಲ್ಲ ಯಾರಿಗೂ ಪ್ರಯೋಜನ ವಿಲ್ಲದ ನಿಸ್ ಪ್ರಯೋಜ ಕರಲ್ಲ, ಅವರನ್ನು ಗೌರವಿಸಿ, ಅವರಿಗೆ ಪ್ರೀತಿ ನೀಡಿ , ಅವರು ಜ್ಞಾನ ದ ಬಂಡಾರ, ಸಂಸ್ಕೃತಿ ಮತ್ತು ಪೃಕ್ರತಿ ಯನ್ನು ಪಾಲನೆ ಮಾಡಿ ನಮ್ಮ ಬದುಕಿನ ಆಶ್ರದಾತರು ಅವರಿಗೆ ಆಸರೆ ನೀಡಿ ಪ್ರೀತಿ ಯಿಂದ ಅವರ ಸಂರಕ್ಷಣೆ ಮಾಡಿ ಅವರಿಗೆ ಯಾವುದೇ ತೊಂದರೆ ಆಗ ದಂತೆ ನೋಡಿಕೊಳ್ಳಬೇಕು ಎಂದು...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥಾಪಕರ ದಿನಾಚರಣೆ ; ಮಕ್ಕಳಲ್ಲಿ ಶಿಸ್ತು ಮೂಡಿಸಲು ಸ್ಕೌಟ್ಸ್ & ಗೈಡ್ಸ್ ಸಹಕಾರಿ- ಡಾ. ರಮೇಶ್ ಶೆಟ್ಟಿ

ಕುಂದಾಪುರ: " ಸ್ವಾತಂತ್ರ್ಯ ಪೂರ್ವದಲ್ಲಿಯೇ ಬ್ರಿಟಿಷ್ ನಿವೃತ್ತ ಅಧಿಕಾರಿ ಪೋವೆಲ್ ರಿಂದ ಸ್ಥಾಪಿತವಾದ ಸ್ಕೌಟ್ಸ್ ಅಂಡ್ ಗೈಡ್ಸ್ ಆಂದೋಲನ ಇಂದು ಜಗತ್ತಿನಾದ್ಯಂತ ಪಸರಿಸಿ ಯುವ ಸಮುದಾಯವನ್ನು ಅದರಲ್ಲಿಯೂ ವಿಶೇಷವಾಗಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ದೈಹಿಕವಾಗಿ ಬೌದ್ಧಿಕವಾಗಿ ಸದೃಢವಾಗಿಸಿ ಉತ್ತಮ ಪ್ರಜೆಗಳಾಗಿ ರೂಪಿಸಲು ಸಹಕಾರಿಯಾಗಿದೆ. ಇಂದು ಭಾರತದ ಬಹುಪಾಲು ರಾಜ್ಯಗಳಲ್ಲಿ ತರಬೇತಿ ನಡೆಯುತ್ತಿದ್ದು ಬಹುಪಾಲು ಶಾಲೆಗಳಲ್ಲಿ ವಿದ್ಯಾರ್ಥಿಗಳು ಬಹಳ ಉತ್ಸುಕತೆಯಿಂದ ಪಾಲ್ಗೊಂಡು ಉತ್ತಮ ಶಿಸ್ತು ನಡತೆಗಳನ್ನು ಕಲಿತು ಪಠ್ಯ ಮತ್ತು ಪಠ್ಯೇತರ ವಿಭಾಗದಲ್ಲೂ...
ಉಡುಪಿಕಾರ್ಕಳಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಮಹಿಳೆಯರ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ವಸೂಲಿ ; ಯುವತಿಯರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದವ ಸೆರೆ.!! – ಕಹಳೆ ನ್ಯೂಸ್

ಮಂಗಳೂರು : ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಯುವತಿಯರ ಮೊಬೈಲ್ ನಂಬರನ್ನು ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಐಡಿ ಮೂಲಕ ಪಡೆದು ಅವರಿಗೆ ನಿಮ್ಮ ಅಶ್ಲೀಲ ವಿಡಿಯೋ ನನ್ನಲ್ಲಿ ಇರುವುದಾಗಿ ಬೆದರಿಕೆ ಹೇಳಿ ಹಣಕ್ಕಾಗಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...
ಉಡುಪಿಜಿಲ್ಲೆಬೈಂದೂರುಸುದ್ದಿ

ಡೀಮ್ಡ್ ಫಾರೆಸ್ಟ್ ಪಟ್ಟಿ ಯಲ್ಲಿರುವ ಅಕ್ರಮ ಸಕ್ರಮ ಅರ್ಜಿಗಳ ಜಂಟಿ ಸರ್ವೇ ಕಾರ್ಯ ಚುರುಕುಗೊಳಿಸಿ : ಬೈಂದೂರು ತಹಸೀಲ್ದಾರ್ ಗೆ ಬೈಂದೂರು ಶಾಸಕ ಗಂಟಿ ಹೊಳೆ ಸೂಚನೆ-ಕಹಳೆ ನ್ಯೂಸ್

ಬೈಂದೂರು ಹೋಬಳಿಯ ಬಗರ್ ಹುಕುಂ (ಅಕ್ರಮ ಸಕ್ರಮ ) ಹಾಗೂ 94 ಸಿ ಬಾಕಿ ಕಡತಗಳ ವಿಲೇವಾರಿ ಸಂಬಂಧ ಬೈಂದೂರು ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖಾ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿ ಹೊಳೆಯವರು ಮಾತನಾಡಿ ಪ್ರಸ್ತುತ ಬೈಂದೂರು ಹೋಬಳಿಯಲ್ಲಿ ಸಮಸ್ಯಾತ್ಮಕವಲ್ಲದ ಎಲ್ಲಾ ಅಕ್ರಮ ಸಕ್ರಮ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 35 ಕಡತಗಳು ತಾಂತ್ರಿಕ ಕಾರಣದಿಂದ ಮಂಜುರಾತಿಗೆ ಬಾಕಿ...
ಉಡುಪಿಕಾಪುಜಿಲ್ಲೆಸುದ್ದಿ

ಮಾರಿಗುಡಿ ನಿರ್ಮಾಣ ಅತ್ಯಪೂರ್ವ: ಎಡನೀರು ಶ್ರೀ-ಕಹಳೆ ನ್ಯೂಸ್

ಕಾಪು: ಇಲ್ಲಿನ ಹೊಸ ಮಾರಿಗುಡಿಯು ದಕ್ಷಿಣ ಭಾರತದಲ್ಲೇ ಅತ್ಯಪೂರ್ವವೆಂಬಂತೆ ಅದ್ಭುತವಾಗಿ ನಿರ್ಮಾಣಗೊಂಡಿದೆ. ಭಕ್ತರ ಶಿಲಾಸೇವೆ ಸಹಿತ ವಿವಿಧ ಸೇವಾ ಕಾರ್ಯಗಳ ಮೂಲಕವಾಗಿ ಹೊಸತನಗಳೊಂದಿಗೆ ನಿರ್ಮಾಣ ಗೊಂಡಿರುವ ಮಾರಿಗುಡಿಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲೂ ವೈಶಿಷ್ಟ್ಯಗಳಿದ್ದು, ಇದರಿಂದ ನಾಡಿಗೆ ಮಂಗಳ ಉಂಟಾಗಲಿದೆ ಎಂದು ಶ್ರೀ ಎಡನೀರು ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಹಮ್ಮಿಕೊಂಡಿ ರುವ...
ಉಡುಪಿಜಿಲ್ಲೆಸುದ್ದಿ

ಮಲ್ಪೆ: ಒಮಾನ್ ದೇಶದ ಮೀನುಗಾರಿಕಾ ಬೋಟ್‌ ವಶಕ್ಕೆ-ಕಹಳೆ ನ್ಯೂಸ್

ಉಡುಪಿ: ಮಲ್ಪೆ ಸೇಂಟ್‌ ಮೇರಿಸ್‌ ದ್ವೀಪದ ಬಳಿ ಸಂಶಯಾಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ಒಮಾನ್‌ ದೇಶದ ಮೀನುಗಾರಿಕಾ ಬೋಟೊಂದನ್ನು ಕರಾವಳಿ ಕಾವಲು ಪೊಲೀಸ್‌ (ಸಿಎಸ್‌ಪಿ) ಹಾಗೂ ಮಂಗಳೂರಿನ ಕೋಸ್ಟ್‌ ಗಾರ್ಡ್‌ ವಶಕ್ಕೆ ಪಡೆದಿದ್ದು, ಅದರಲ್ಲಿದ್ದ ಮೂವರನ್ನು ಬಂಧಿಸಲಾಗಿದೆ. ತಮಿಳುನಾಡಿನ ಜೇಮ್ಸ್‌ ಫ್ರಾಂಕ್ಲಿನ್‌ ಮೋಸೆಸ್‌ (50), ರಾಬಿನ್‌ ಸ್ಟನ್‌ (50) ಹಾಗೂ ಡೆರೋಸ್‌ ಅಲ್ಫೋನ್ಸ್‌ (38) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಫೆ. 17ರಂದು ಒಮಾನ್‌ನ...
ಅಂತಾರಾಷ್ಟ್ರೀಯಉಡುಪಿಸುದ್ದಿ

ಉಡುಪಿ ಸೇಂಟ್ ಮೇರಿಸ್ ದ್ವೀಪ ಬಳಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆ – ಕಹಳೆ ನ್ಯೂಸ್

– ಡೀಸೆಲ್ ಖಾಲಿಯಾಗಿ ಹಣ, ಆಹಾರವಿಲ್ಲದೇ ಮೀನುಗಾರರು ಪರದಾಟ ಉಡುಪಿ: ಮಲ್ಪೆ ಆಳ ಸಮುದ್ರದಲ್ಲಿ ಓಮನ್ ಬೋಟ್ ಪತ್ತೆಯಾಗಿದೆ. ಉಡುಪಿ ಸೇಂಟ್ ಮೇರಿಸ್ ದ್ವೀಪ ಸಮೀಪ ಓಮನ್ ಮೂಲದ ಮೀನುಗಾರಿಕಾ ಬೋಟ್ ಕಂಡುಬಂದಿದೆ. ಓಮನ್ ಹಾರ್ಬರ್‌ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬೋಟ್ ಬಂದಿದೆ. ಬೋಟ್‌ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ. ಇದರಲ್ಲಿ ತಮಿಳುನಾಡು ಮೂಲದ ತಂಡ ಮೀನುಗಾರಿಕ ವೃತ್ತಿ ನಡೆಸುತ್ತಿತ್ತು. ಸಂಬಳ ಹಾಗೂ ಆಹಾರ ನೀಡದೆ ಓಮನ್ ಬೋಟ್ ಮಾಲೀಕ ಸತಾಯಿಸುತ್ತಿದ್ದ....
1 2 3 4 5 6 93
Page 4 of 93
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ