Saturday, April 12, 2025

ಉಡುಪಿ

ಉಡುಪಿಜಿಲ್ಲೆಸುದ್ದಿ

ವಿಟ್ಲ ಮೇಗಿನ ಪೇಟೆ ಶಾಲೆಯಲ್ಲಿ ಅಕ್ಷಯ ಕಾಲೇಜಿನ ರಾ.ಸೇ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು:ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರವು ದ.ಕ ಜಿ.ಪಂ.ಹಿ.ಪ್ರಾ. ಶಾಲೆ ಮೇಗಿನಪೇಟೆ ವಿಟ್ಲ ಇಲ್ಲಿ ದಿನಾಂಕ 17-02-2024ರಂದು ಆರಂಭವಾಯಿತು. ಈ ಕಾರ್ಯಕ್ರಮವನ್ನು ಶ್ರೀ ಕೃಷ್ಣಯ್ಯ ಕೆ ವಿಟ್ಲ ಅರಮನೆ ಇವರು ಉದ್ಘಾಟಿಸಿ ,ಶಿಬಿರದಲ್ಲಿನ ಪಾಲ್ಗೊಳ್ಳುವಿಕೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವುದಲ್ಲದೆ ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡAತಹ ಶ್ರೀ ಜಯಂತ ನಡುಬೈಲು ಅಧ್ಯಕ್ಷರು ಅಕ್ಷಯ...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಚಿತ್ರ ರೋಗ ಬಾಧೆಯಿಂದ ನರಳುತ್ತಿರುವ ಪುತ್ರನ ಸ್ಥಿತಿ ನೆನೆದು ತಾಯಿಯ ಕಣ್ಣೀರ ರೋದನ;ಔಷಧಕ್ಕೋಸ್ಕರ ತಾಯಿ ಖರ್ಚು ಮಾಡಿ ಸೋತು ಸುಣ್ಣ-ಕಹಳೆ ನ್ಯೂಸ್

ಕುಂದಾಪುರ:ಮೈತುಂಬಾ ಗುಳ್ಳೆ,ಚರ್ಮ ಸುಟ್ಟು ಹೋದಂತಿದೆ.ವಿಪರೀತ ಯಾತನೆ.ವೈದ್ಯರು ದೇಹದಲ್ಲಿ ಹೆಚ್ಚಿರುವ ನಂಜಿನ ಕಾರಣಕ್ಕೆ ಹೀಗಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಇನ್ನೂ ಕಾಯಿಲೆ ಯಾವುದೆಂದು ಖಚಿತವಾಗಿಲ್ಲ, ಮನೆಗೆ ಆಧಾರವಾಗಿದ್ದ ಇವರೀಗ ಹಾಸಿಗೆ ಹಿಡಿದಿದ್ದಾರೆ. ವಿಚಿತ್ರ ರೋಗ ಬಾಧೆಯಿಂದ ನರಳುತ್ತಿರುವ ಪುತ್ರನ ಸ್ಥಿತಿ ನೆನೆದು ತಾಯಿಯ ಕಣ್ಣೀರ ರೋದನ ಮುಗಿಲು ಮುಟ್ಟಿದೆ.ತಾಲ್ಲೂಕಿನ ತಲ್ಲೂರು ಗ್ರಾಮದ ಉಪ್ಪಿನಕುದ್ರುವಿನ ಕುಟುಂಬವೊಂದರ ದುರಂತ ಕಥಾನಕವಿದು. ಉಪ್ಪಿನಕುದ್ರುವಿನ ನಿತ್ಯಾನಂದ (38)ಎಂಬವರು ಈ ವಿಚಿತ್ರ ಕಾಯಿಲೆಯಿಂದ ನರಳುತ್ತಿದ್ದಾರೆ,ಬಾಲ್ಯದ ದಿನಗಳಿಂದಲೂ ಶ್ರಮಜೀವಿ.ತಂದೆ ಪರಮೇಶ್ವರ,...
ಉಡುಪಿಜಿಲ್ಲೆಸುದ್ದಿ

ಮಹಾಕುಂಭ ಮೇಳವನ್ನು ‘ನಿಷ್ಪ್ರಯೋಜಕ’ ಎಂದು ಕರೆದ ಲಾಲು ಪ್ರಸಾದ ಯಾದವ್ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಿ ! – ಹಿಂದೂ ಜನಜಾಗೃತಿ ಸಮಿತಿ ಆಗ್ರಹ-ಕಹಳೆ ನ್ಯೂಸ್

ಉಡುಪಿ:144 ವರ್ಷಗಳಲ್ಲಿ ಒಮ್ಮೆ ಬರುವ ಮಹಾಕುಂಭ ಮೇಳಕ್ಕೆ ಭಾರತದ 50 ಕೋಟಿಗೂ ಹೆಚ್ಚು ಹಿಂದೂ ಭಕ್ತರು ಮತ್ತು 50 ಕ್ಕೂ ಹೆಚ್ಚು ದೇಶಗಳ ಲಕ್ಷಾಂತರ ವಿದೇಶಿಗರು ಹೆಚ್ಚಿನ ಭಕ್ತಿಯಿಂದ ಬರುತ್ತಿದ್ದಾರೆ ಮತ್ತು ಆನಂದವನ್ನು ಅನುಭವಿಸುತ್ತಿದ್ದಾರೆ. ಪ್ರಪಂಚದಾದ್ಯಂತದ ವಿಜ್ಞಾನಿಗಳು, ವಿದ್ವಾಂಸರು ಮತ್ತು ಚಿಂತಕರು ಮಹಾಕುಂಭದ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಗಮನಿಸುತ್ತಾರೆ. ಅಂತಹ ಜಾಗತಿಕ ಉತ್ಸವವನ್ನು 'ನಿಷ್ಪ್ರಯೋಜಕ' ಎಂದು ಕರೆಯುವ ಮಾಜಿ ಕೇಂದ್ರ ರೈಲ್ವೆ ಸಚಿವ ಮತ್ತು ಆರ್‍‌ಜೆಡಿ ಮುಖ್ಯಸ್ಥ ಲಾಲು...
ಉಡುಪಿಜಿಲ್ಲೆಸುದ್ದಿ

ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ–ಕಹಳೆ ನ್ಯೂಸ್

ಉಡುಪಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಲು ಕರಾವಳಿಗರ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಿರುವ ವಿಶೇಷ ರೈಲು ಸೇವೆಗೆ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸೋಮವಾರ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದರು. ಯಾತ್ರಾರ್ಥಿಗಳು ಸಾವಧಾನದಿಂದ ಪುಣ್ಯಸ್ನಾನ ಮಾಡಿ ಎಂದು ಕಿವಿಮಾತು ಹೇಳಿದ ಅವರು, ಭರತಭೂಮಿ ಪವಿತ್ರ ಕ್ಷೇತ್ರ. ಉಡುಪಿ ಕೂಡ ತೀರ್ಥಕ್ಷೇತ್ರ. ಮಧ್ವಾಚಾರ್ಯರು ದ್ವಾರಕೆಯಿಂದ ಶ್ರೀಕೃಷ್ಣನನ್ನು ತಂದು ಪ್ರತಿಷ್ಠಾಪನೆ ಮಾಡಿದ್ದಾರೆ. ಪ್ರತಿ 12 ವರ್ಷಕ್ಕೊಮ್ಮೆ ಇಲ್ಲಿನ ಮಧcಸರೋವರಕ್ಕೆ ಗಂಗೆ...
ಉಡುಪಿಜಿಲ್ಲೆಸುದ್ದಿ

ಶೋಷಿತರಿಗೆ ಶಕ್ತಿ ನೀಡಿದ್ದ ಸಂತ ಸೇವಾಲಾಲ: ಕೋಟ ಶ್ರೀನಿವಾಸ ಪೂಜಾರಿ-ಕಹಳೆ ನ್ಯೂಸ್

ಉಡುಪಿ: ಸಮಾಜದ ನ್ಯೂನತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಗಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.‌ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಸಂತ ಸೇವಾಲಾಲ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಸಮಾನತೆಯ ಬದುಕಿಗೆ ಹೆಚ್ಚು ಮಹತ್ವ ನೀಡಿ ಬಂಜಾರ ಸಮುದಾಯದ ಉನ್ನತಿಗಾಗಿ ಹೋರಾಡಿದ್ದ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಬ್ರಹ್ಮಕಲಶಕ್ಕೆ ಶುಭಕೋರಿದ ಬ್ಯಾನರ್ ಹರಿದ ಕಿಡಿಗೇಡಿಗಳು ಅರೆಸ್ಟ್-ಕಹಳೆ ನ್ಯೂಸ್

ಮೂಡಬಿದಿರೆ:ಲಾಡಿ ಶ್ರೀಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾನಿಗೈದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಹೊಟೇಲ್ ಕಾರ್ಮಿಕರಾದ ಮಹಮ್ಮದ್ ಕಾಮ್ದು ಝಮಾನ್ ಮತ್ತು ಜಾರ್ಖಾಂಡ್‌ನ ಮಹಮ್ಮದ್ ಸಿರಾಜ್ ಅನ್ಸಾರಿ ಬಂಧಿತ ಆರೋಪಿಗಳು. ಮೂಡುಬಿದಿರೆ ಪುರಸಭಾ ಸದಸ್ಯ ಇಟ್ಬಾಲ್ ಕರೀಂ ಲಾಡಿ ಶ್ರೀಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ ಬ್ಯಾನರ್ ಅನ್ನು ಹರಿದು ಹಾನಿಗೊಳಿಸಲಾಗಿತ್ತು. ಈ ಬಗ್ಗೆ...
ಉಡುಪಿಜಿಲ್ಲೆಸುದ್ದಿ

ಉಡುಪಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು-ಕಹಳೆ ನ್ಯೂಸ್

ಉಡುಪಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರ್ನಾಟಕದಿಂದಲೂ ಲಕ್ಷಾಂತರ ಭಕ್ತರು ತೆರಳುತ್ತಿದ್ದಾರೆ. ಕರಾವಳಿ ಜಿಲ್ಲೆಗಳ ಯಾತ್ರಾರ್ಥಿಗಳು ಕುಂಭಮೇಳಕ್ಕೆ ತೆರಳುವ ಅನುಕೂಲ ಆಗುವಂತೆ ವಿಶೇಷ ರೈಲು ಸೇವೆಯ ವ್ಯವಸ್ಥೆ ಮಾಡಲಾಗಿದೆ. ಫೆ.17ರ ಮಧ್ಯಾಹ್ನ 12.30ಕ್ಕೆ ಉಡುಪಿಯಿಂದ ಈ ರೈಲು ಹೊರಟು ಫೆ.19ರ ಬೆಳಗ್ಗೆ 6.30ಕ್ಕೆ ಪ್ರಯಾಗ್‌ರಾಜ್‌ ತಲುಪಲಿದೆ. ಫೆ.20ರ ಸಂಜೆ 6.30ಕ್ಕೆ ಪ್ರಯಾಗ್‌ರಾಜ್‌ ನಿಂದ ಹೊರಟು ಫೆ.22ರ ಸಂಜೆ ವೇಳೆಗೆ ಉಡುಪಿ ತಲುಪಲಿದೆ. ಈ ಸಂಬಂಧ ಕೊಂಕಣ್‌ ರೈಲ್ವೇಯಿಂದ...
ಉಡುಪಿಕಾರ್ಕಳಜಿಲ್ಲೆ

ಜ್ಞಾನಸುಧಾದ 47 ಜೆ.ಇ.ಇ ಮೈನ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ 3.075ಲಕ್ಷ ರೂಪಾಯಿ ಪ್ರೋತ್ಸಾಹ ಧನ ವಿತರಣೆ; ನಾಲ್ವರು ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ನಗದು ಪುರಸ್ಕಾರ -ಕಹಳೆ ನ್ಯೂಸ್

ಕಾರ್ಕಳ: ತಂದೆ-ತಾಯಿ-ಗುರುಗಳಿಗೆ ವಂದಿಸಿ ಪಡೆದ ವಿದ್ಯೆಯು ವಿದ್ಯಾರ್ಥಿಯ ಸಾಧನೆಗೆ ಕಾರಣವಾಗುತ್ತದೆ. ಸಂಕಲ್ಪ ಶುದ್ಧದಿಂದ ಇಟ್ಟಹೆಜ್ಜೆಯು ಯಶಸ್ಸನ್ನೇ ತಂದುಕೊಡುತ್ತದೆ. ಯಶಸ್ವಿ ಬದುಕಿನ ಸಾರ್ಥಕತೆ ಪೋಷಕರದಾಗುತ್ತದೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹೇಳಿದರು. ಅವರು ರಾಷ್ಟ್ರೀಯ ಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕೆ ಎನ್.ಟಿ.ಎ ನಡೆಸಿದ ಪ್ರಥಮ ಹಂತದ ಜೆ.ಇ.ಇ ಮೈನ್ ಫಲಿತಾಂಶದಲ್ಲಿ 97ಕ್ಕೂ ಅಧಿಕ ಪರ್ಸಂಟೈಲ್ ಗಳಿಸಿದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 47 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು....
1 5 6 7 8 9 95
Page 7 of 95
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ