Wednesday, April 2, 2025

ಉಡುಪಿ

ಉಡುಪಿಸುದ್ದಿ

ಉಡುಪಿ ಜಿಲ್ಲೆಯಲ್ಲಿಂದು 160 ಮಂದಿಗೆ ಕೊರೊನಾ ಪಾಸಿಟಿವ್ ; ಓರ್ವ ಮಹಿಳೆ ಸಾವು – ಕಹಳೆ ನ್ಯೂಸ್

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಅಬ್ಬರ ಜೋರಾಗಿದ್ದು ಗುರುವಾರ 160 ಮಂದಿಯಲ್ಲಿ ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. 70 ವರ್ಷದ ಮಹಿಳೆಯೊಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ದೃಢಪಟ್ಟಿದು ಇಂದು ಮತ್ತೆ 160 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಪಡುಬಿದ್ರಿ ಪರಿಸರದಲ್ಲಿ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ, ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹೆಜಮಾಡಿ, ಉಚ್ಚಿಲ, ನಡ್ಸಾಲ್, ಗ್ರಾಮಗಳ ವ್ಯಕ್ತಿಗಳಲ್ಲಿ ಸೋಂಕು ಹರಡಿದ್ದು ಇವರೆಲ್ಲರೂ...
ಉಡುಪಿಸುದ್ದಿ

ಉಡುಪಿಯಲ್ಲಿ ಒಂದೇ ದಿನ 281 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಉಡುಪಿ, ಜು. 22 : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಬುಧವಾರದಂದು ಒಂದೇ ದಿನ 281 ಹೊಸ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ.   ಬುಧವಾರದಂದು ಅತ್ಯಧಿಕ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2686ಕ್ಕೆ ಏರಿಕೆಯಾಗಿದೆ. ಈ ನಡುವೆ, 135 ಮಂದಿಯ ಪರೀಕ್ಷಾ ವರದಿ ಬುಧವಾರದಂದು ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ ಬುಧವಾರದಂದು 24 ಮಂದಿ ಗುಣಮುಖರಾಗಿದ್ದು, ಆ ಮೂಲಕ ಒಟ್ಟು 1369 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ....
ಉಡುಪಿಬೈಂದೂರುಸಿನಿಮಾ

ಉಡುಪಿ ಜಿಲ್ಲೆಯ ಬೈಂದೂರಿನ ಗಂಟಿಹೊಳೆಯಲ್ಲಿರುವ ತಮ್ಮ ಗದ್ದೆಯಲ್ಲಿ ಗೊಬ್ಬರ ಹೊತ್ತು ಬೆವರು ಸುರಿಸಿ ನಾಟಿ ಮಾಡಿದ ಭೂಮಿ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ: ಕೊರೊನಾ ಎಂಬ ಮಹಾಮಾರಿ ರಾಜ್ಯಕ್ಕೆ ಕಾಲಿಟ್ಟು ಲಾಕ್‍ಡೌನ್ ಘೋಷಣೆಯಾದ ಬಳಿಕ ಉದ್ಯೋಗಕ್ಕೆಂದು ಮನೆ ಬಿಟ್ಟು ಹೊರ ಹೋದವರು ತಮ್ಮ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ. ಅಲ್ಲದೇ ತಮ್ಮನ್ನು ತಾವು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ರೀತಿ ನಟನೆ, ವಿದ್ಯಾಭ್ಯಾಸ ಎಂದು ಸಿಲಿಕಾನ್ ಸಿಟಿಗೆ ತೆರಳಿದ್ದ ಬಿಗ್‍ಬಾಸ್ 7ರ ಸ್ಪರ್ಧಿ ಭೂಮಿ ಶೆಟ್ಟಿ ಕೂಡ ಇದೀಗ ಮನೆಗೆ ಬಂದಿದ್ದು, ಗದ್ದೆ ನಾಟಿ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೌದು. ಓದಿನ ಜೊತೆಗೆ ನಟನೆ ಮಾಡಿಕೊಂಡು...
ಉಡುಪಿಸುದ್ದಿ

ಉಡುಪಿ ಜಿಲ್ಲೆಯಲ್ಲಿಂದು 84 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಉಡುಪಿ, ಜು 21 : ಜಿಲ್ಲೆಯಲ್ಲಿ ಮತ್ತೆ 84 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 2405 ಕ್ಕೆ ಏರಿಕೆಯಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಮಂಗಳವಾರದಂದು 92 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ 1752 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಸದ್ಯ ಜಿಲ್ಲೆಯಲ್ಲಿ 653 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಇನ್ನೂ 481 ಮಂದಿಯ ವರದಿ ಲಭ್ಯವಾಗಲು ಬಾಕಿ ಇದೆ....
ಉಡುಪಿರಾಜ್ಯಸುದ್ದಿ

ಉಡುಪಿ ಅಷ್ಟಮಠಕ್ಕೂ ಕಾಲಿಟ್ಟ ಕೊರೊನಾ – ಪುತ್ತಿಗೆ ಶ್ರೀಗಳಿಗೆ ಕೊರೊನಾ ಪಾಸಿಟಿವ್..! ; ಶ್ರೀಗಳ ಆರೋಗ್ಯ ವೃದ್ಧಿಗೆ ಭಕ್ತರ ಹಾರೈಕೆ – ಕಹಳೆ ನ್ಯೂಸ್

ಉಡುಪಿ : ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳಲ್ಲಿ ಕೊರೊನ ಪಾಸಿಟಿವ್ ದೃಢಪಟ್ಟಿದ್ದು ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳು ಕೆಲದಿನಗಳಿಂದ ಜ್ವರ, ಗಂಟಲುನೋವಿನಿಂದ ಬಳಲುತ್ತಿದ್ದು ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಇಂದು ಅವರ ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ ವ್ರತವನ್ನು ಅರಂಭಿಸಬೇಕಾಗಿತ್ತು. ಸದ್ಯ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಅವರು...
ಉಡುಪಿಸುದ್ದಿ

ಉಡುಪಿ ಕೋರ್ಟ್‌ನ ನ್ಯಾಯಾಧೀಶರಿಗೆ ಕೊರೊನಾ ಪಾಸಿಟಿವ್‌ ; 2 ದಿನ ನ್ಯಾಯಾಲಯ ಸೀಲ್‌ಡೌನ್ – ಕಹಳೆ ನ್ಯೂಸ್

ಉಡುಪಿ, ಜು. 21  : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು ಮಂಗಳವಾರ ಇಲ್ಲಿನ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೊನಾ ಸೋಂಕು ವರದಿ ಪಾಸಿಟಿವ್‌ ಆಗಿದೆ.   ನ್ಯಾಯಾಧೀಶರಿಗೆ ಕೊರೊನಾ ಇರುವುದು ದೃಢಪಟ್ಟ ಕಾರಣ ಕೋರ್ಟ್ ಆವರಣವನ್ನು ಎರಡು ದಿನ ಸೀಲ್‌ಡೌನ್‌ ಮಾಡಿ ಸ್ಯಾನಿಟೈಸ್ ಮಾಡಲಿದ್ದು ಈ ನಿಟ್ಟಿನಲ್ಲಿ ಜು. 21 ಮತ್ತು 22ರಂದು ಕೋರ್ಟ್ ಸೀಲ್‌ಡೌನ್‌ ಆಗಿರಲಿದೆ ಎಂದು ತಿಳಿದು ಬಂದಿದೆ. ಇನ್ನು ಉಡುಪಿಯಲ್ಲಿ ಸೋಮವಾರ 98 ಜನರಿಗೆ ಕೊರೊನಾ...
ಉಡುಪಿರಾಷ್ಟ್ರೀಯಸುದ್ದಿ

ಭವ್ಯ ಶ್ರೀ ರಾಮಮಂದಿರ ಭೂಗರ್ಭಕ್ಕೆ ‘ಕೃಷ್ಣ ನಗರಿಯ ಮಣ್ಣು’ ; ಅಯೋಧ್ಯೆಯತ್ತ ಪವಿತ್ರ ಮೃತ್ತಿಕೆ – ಕಹಳೆ ನ್ಯೂಸ್

ಉಡುಪಿ, ಜು 21 : ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡು ಅಯೋಧ್ಯೆಯಲ್ಲಿ ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಹೊರಟಿದೆ ಶ್ರೀಕೃಷ್ಣ ನಗರಿ ರಜತಪೀಠಪುರದ ಪವಿತ್ರ ಮೃತ್ತಿಕೆ!     ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಸೇರಿಸಲು ವಿಶ್ವಹಿಂದುಪರಿಷತ್ ನಿರ್ಧರಿಸಿದೆ . ಈ ಹಿನ್ನಲೆಯಲ್ಲಿ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ...
ಉಡುಪಿಸುದ್ದಿ

ಉಡುಪಿಯಲ್ಲಿ ಮತ್ತೆ 99 ಮಂದಿಗೆ ಕೊರೊನಾ ಪಾಸಿಟಿವ್ ; 22 ಮಂದಿ ಗುಣಮುಖ – ಕಹಳೆ ನ್ಯೂಸ್

ಉಡುಪಿ, ಜು 20 : ಜಿಲ್ಲೆಯಲ್ಲಿ ಮತ್ತೆ 99 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1221ಕ್ಕೆ ಏರಿಕೆಯಾಗಿದೆ.   ಅಲ್ಲದೆ, ಮತ್ತೆ 22 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ  560 ಮಂದಿಯ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಇಂದು 251 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ 661 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ.  ...
1 89 90 91 92 93
Page 91 of 93
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ