ಜಗತ್ತಿನ ಅಂದಕಾರವನ್ನು ಹೋಗಲಾಡಿಸುವ ಶಕ್ತಿ ಇರುವುದು ಶಿಕ್ಷಣಕ್ಕೆ ಮಾತ್ರ… ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ -ಕಹಳೆ ನ್ಯೂಸ್
ಬಂಟ್ವಾಳ : ಜಗತ್ತಿನ ಅಂಧ ಕಾರವನ್ನು ಹೋಗಲಾಡಿಸುವ ಶಕ್ತಿ ಇರುವುದು ಶಿಕ್ಷಣಕ್ಕೆ ಮಾತ್ರ. ಶಿಕ್ಷಕರಲ್ಲಿ ತಾಯಿಯ ಮಮತೆಯನ್ನು ಹೊಂದಿರುವAತಹ ವಾತ್ಸಲ್ಯ ಗುಣವಿರಬೇಕು ಆಗ ಮಗು ಆಸಕ್ತಿಯಿಂದ ಕಲಿಯುತ್ತದೆ. ತನ್ನೆಲ್ಲ ಉತ್ತಮ ವಿಚಾರಗಳನ್ನು ಮಗುವಿಗೆ ಧಾರೆಯೆರೆಯುವ ಮೂಲಕ ಮಗುವನ್ನು ಮಾನವೀಯ ಮೌಲ್ಯಯುತವಾದ ಸತ್ಪ್ರಜೆಯನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ,ಇದಕ್ಕೆ ಜೊತೆಯಾಗಿ ನಿಲ್ಲಬೇಕಾಗಿರುವುದು ಪೋಷಕರ ಕರ್ತವ್ಯವಾಗಿದೆ. ಮಗುವಿಗೆ ಎಲ್ಲರೊಳಗೆ ಒಂದಾಗಿ ಸಂಸ್ಕಾರಯುತ ಜೀವನವನ್ನು ಸಾಗಿಸುವ ಗುಣಗಳನ್ನು ಬೆಳೆಸುವಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ...