Thursday, March 27, 2025

ಆರೋಗ್ಯ

ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಉಸಿರಾಟದ ಸಮಸ್ಯೆ ; ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ 90ರ ಹರೆಯದ ದೇವೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.   ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭ, ಲೋಕಸಭಾ ಕಲಾಪದಲ್ಲಿಯೂ ಸಕ್ರಿಯವಾಗಿ ಲವಲವಿಕೆಯಿಂದ ದೇವೇಗೌಡ ಅವರು ಭಾಗಿಯಾಗಿದ್ದರು....
ಆರೋಗ್ಯದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆದ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ –ಕಹಳೆ ನ್ಯೂಸ್

ಕಲ್ಲಡ್ಕ : ಬ್ಯಾಂಕಿನ ವ್ಯವಹಾರದ ಜತೆಗೆ ಗ್ರಾಹಕರ ಆರೋಗ್ಯದ ಕಡೆ ಗಮನ ಹರಿಸಿದ ಬ್ಯಾಂಕಿನ ಕಾರ್ಯ ಅಭಿನಂದನದಾಯಕವಾಗಿದೆ ಎಂದು ಮಾಜಿ ಶಾಸಕರಾದ ಏ ಪೂಜಾರಿ ಏಳ್ತಿಮಾರ್ ಅಭಿಪ್ರಾಯಪಟ್ಟರು. ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ(ನಿ) ಕಲ್ಲಡ್ಕ ಶಾಖೆ ಪ್ರಾರಂಭವಾಗಿ ಹತ್ತು ವರ್ಷ ಪೂರ್ಣಗೊಳಿಸಿದ ಪ್ರಯುಕ್ತ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕೆ ಎಮ್ ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಶ್ರೀ ಶಾರದಾ ಸೇವಾ ಪ್ರತಿಷ್ಠಾನ...
ಆರೋಗ್ಯದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು ಕೆಡಿಪಿ ಸಭೆ – ಕಹಳೆ ನ್ಯೂಸ್

ಮೂಡುಬಿದಿರೆ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೂರ್ಣಕಾಲಿಕ ವೈದ್ಯರಿಲ್ಲದಿರುವುದರಿಂದ ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆ ವಿಳಂಬವಾಗುತ್ತಿದೆ. ಪೋಲೀಸ್ ಸಿಬಂದಿ ನೇಮಕದ ಸಮಸ್ಯೆ ಹಾಗೂ ನೊಂದ ಸಂಬAಧಿಕರು ಆಕ್ರೋಶಕ್ಕೊಳಗಾಗುತ್ತಾರೆ. ಹೀಗಾಗಿ ವೈದ್ಯರು ಕೇಂದ್ರ ಸ್ಥಳದಲ್ಲಿಯೇ ಇರುವಂತಹ ವ್ಯವಸ್ಥೆಯಾಗಬೇಕು ಎಂದು ಪೋಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ ಹೇಳಿದರು. ಶಾಸಕ ಉಮನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಮೊದಲ ತಾಲೂಕು ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ...
ಆರೋಗ್ಯಕಡಬದಕ್ಷಿಣ ಕನ್ನಡಸುದ್ದಿ

ಡೆಂಗ್ಯೂ ಜ್ವರಕ್ಕೆ ಯುವಕ ಬಲಿ- ಕಹಳೆ ನ್ಯೂಸ್

ಕಡಬ: ಏಕಕಾಲಕ್ಕೆ ಡೆಂಗ್ಯೂ ಮತ್ತು ಮಲೇರಿಯಾ ಜ್ವರ ಬಾಧಿಸಿ ಯುವಕನೋರ್ವ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕು ಕುಟ್ರುಪಾಡಿ ಗ್ರಾಮದ ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31) ಮೃತಪಟ್ಟ ಯುವಕ. ಜ್ವರ ಕಾಣಿಸಿಕೊಂಡ ಕಾರಣ ಕಡಬದ ಖಾಸಗಿ ಮೆಡಿಕಲ್ ಸೆಂಟರ್‌ಗೆ ಚಿಕಿತ್ಸೆಗಾಗಿ ಆಗಮಿಸಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ನಂತರದಲ್ಲಿ ಮನೆಗೆ ಬಂದ ಬಳಿಕ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ...
ಆರೋಗ್ಯಪುತ್ತೂರುಸುದ್ದಿ

ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವೈದ್ಯಕೀಯ ಶಿಬಿರಕ್ಕೆ ರಾಷ್ಟ್ರೀಯ ಪ್ರಶಸ್ತಿಯ ಗರಿ…! : ಶಿಬಿರದ ರುವಾರಿ ಡಾ.ಸುರೇಶ್ ಪುತ್ತೂರಾಯರವರಿಗೆ Diabetes Awareness Initiative Award – ಕಹಳೆ ನ್ಯೂಸ್

ಪುತ್ತೂರು: ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ದೇವರ ಸೇವೆಯ ಜೊತೆಗೆ ಪ್ರಸಾದ ರೂಪದಲ್ಲಿ ನೀಡಲಾಗುತ್ತಿರುವ ಪ್ರತಿ ತಿಂಗಳು ನಡೆಸುವ ಉಚಿತ ವೈದ್ಯಕೀಯ ಶಿಬಿರವು ಇಂದು ರಾಷ್ಟ್ರ ಮಟ್ಟದಲ್ಲಿ ತನ್ನ ಕೀರ್ತಿ ಪತಾಕೆಯನ್ನು ಹಾರಿಸಿದೆ. ಮಧುಮೇಹ ತಪಾಸಣೆಯಲ್ಲಿ ನೀಡಿದ ಅದ್ವಿತೀಯ ಸೇವೆ ಹಾಗೂ ಜನರಲ್ಲಿ ಆರೋಗ್ಯ ಜಾಗೃತಿಗಾಗಿ Diabetes Awareness Initiative Award-2024ಕ್ಕೆ ಶಿಬಿರವು ಭಾಜನವಾಗಿದೆ. ಜ.25ರಂದು ಒರಿಸ್ಸಾದ ಭವನೇಶ್ವರದಲ್ಲಿ ನಡೆದ ಡಯಾಬಿಟೀಸ್ ಇಂಡಿಯಾ 14ನೇ ವಿಶ್ವ ಸಮ್ಮೇಳನದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಆರೋಗ್ಯಬೆಂಗಳೂರುರಾಜ್ಯರಾಮನಗರಸುದ್ದಿ

ರಾಜ್ಯದಲ್ಲಿ ಕೊರೊನಾ ಆತಂಕ ; ಚಿಕ್ಕಮಗಳೂರು ನಾಲ್ವರಿಗೆ, ರಾಮನಗರದಲ್ಲಿ ಒಂದೇ ಗ್ರಾಮದ ಇಬ್ಬರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು/ರಾಮನಗರ: ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲದ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿರೋದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಮತ್ತೊಂದೆಡೆ ರಾಮನಗರದಲ್ಲಿ ಒಂದೇ ಗ್ರಾಮದ ಇಬ್ಬರಿಗೆ ಕೊರೊನಾ ಬಂದಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ (TamilNadu_=) ಕೊರೊನಾ ರೂಪಾಂತರ ತಳಿ JN.1 ಪತ್ತೆಯಾಗಿರುವ ಹಿನ್ನೆಲೆ ಸರ್ಕಾರ ರಾಜ್ಯದಲ್ಲಿ ಹದ್ದಿನ ಕಣ್ಣಿಟ್ಟಿದೆ. ಸರ್ಕಾರದ ಮಾರ್ಗಸೂಚಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಜಿಲ್ಲಾದ್ಯಂತ ಜೆಎನ್.1 ಎದುರಿಸಲು ಸನ್ನದ್ಧವಾಗಿದೆ....
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕೇರಳದಲ್ಲಿ ಕೊರೋನಾ ಹೊಸ ತಳಿಗೆ ಇಬ್ಬರು ಸಾವು ; ರಾಜ್ಯದಲ್ಲಿ ಆರೋಗ್ಯ ಸಚಿವರ ತುರ್ತುಸಭೆ – ಕಹಳೆ ನ್ಯೂಸ್

ಬೆಂಗಳೂರು: ಭಾರತ ಸೇರಿ ಜಗತ್ತಿನೆಲ್ಲೆಡೆ ಮತ್ತೊಮ್ಮೆ ಕೊರೋನಾ ವಕ್ಕರಿಸುವಂತಿದೆ. ಮತ್ತೆ ಕೊರೋನಾ ಕೇಸ್‍ಗಳ ಸಂಖ್ಯೆ ಹೆಚ್ಚುತ್ತಿದೆ. ಅಮೆರಿಕ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೋನಾದ (Corona Virus) ಹೊಸ ಸಬ್ ವೇರಿಯಂಟ್ ಜೆಎನ್-1 (JN.1) ಭಾರತದಲ್ಲೂ ಇದೀಗ ಕಂಡುಬಂದಿದೆ. ನೆರೆಯ ಕೇರಳದಲ್ಲಿ (Kerala) ಮೊದಲ ಕೇಸ್ ಪತ್ತೆಯಾಗಿದೆ. ಜೆಎನ್1 ಒಮಿಕ್ರಾನ್‍ನ್ ಸಬ್ ವೇರಿಯಂಟ್ ಬಿಎ 2.86 ವಂಶಕ್ಕೆ ಸೇರಿದ್ದಾಗಿದೆ. ಇದನ್ನು ಪಿರೋಲಾ ಎಂದು ಕೂಡ ಕರೆಯಲಾಗುತ್ತೆ. ಇದು ಅಪಾಯಕಾರಿನಾ ಅಲ್ವಾ...
ಆರೋಗ್ಯಕಾಸರಗೋಡುರಾಷ್ಟ್ರೀಯಸುದ್ದಿ

ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ – ಕಹಳೆ ನ್ಯೂಸ್

ತಿರುವನಂತಪುರಂ: ಭಾರತದಲ್ಲಿ ಕೋವಿಡ್-‌19 ಭೀತಿ ಮತ್ತೆ ಶುರುವಾಗಿದೆ. ಕೇರಳದ (Kerala) ಮಹಿಳೆಯೊಬ್ಬರಲ್ಲಿ ಕೋವಿಡ್-‌19 ಉಪತಳಿ (Covid Subvariant) ಜೆಎನ್‌.1 (JN.1) ಪತ್ತೆಯಾಗಿರುವುದು ದೃಢಪಟ್ಟಿದೆ. ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ ಸೋಂಕಿರುವುದು ಪತ್ತೆಯಾಗಿದೆ. ಅವರಲ್ಲಿ influenza-like illnesses (ILI- ಇನ್ಫ್ಲುಯೆನ್ಝಾ ತರಹದ ಕಾಯಿಲೆ) ಸೌಮ್ಯ ಲಕ್ಷಣ ಕಂಡುಬಂದಿದೆ. ಕೋವಿಡ್-19 ನಿಂದ ಅವರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
1 2 3 4 5 6 12
Page 4 of 12
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ