Saturday, May 3, 2025

ಕುಂದಾಪುರ

ಉಡುಪಿಕುಂದಾಪುರಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ 6ನೇ ದಿನದ ಕಾರ್ಯಕ್ರಮ ಉದ್ಘಾಟನೆ; “ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭಾ ಅನಾವರಣಕ್ಕೆ ಸಹಕಾರಿ – ಬಿ.ಜಯಕರ ಶೆಟ್ಟಿ-ಕಹಳೆ ನ್ಯೂಸ್

 ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರದ ಆರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಡುಪಿ ಜಿಲ್ಲಾ ಮುಖ್ಯ ಆಯುಕ್ತಾಗಿರುವ ಶ್ರೀಯುತ ಬಿ.ಜಯಕರ ಶೆಟ್ಟಿ"ಮಕ್ಕಳು ಶಾಲೆಯಲ್ಲಿ ಪಠ್ಯದ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯನ್ನು ಬೆಳೆಸಿಕೊಂಡರೆ ಉತ್ತಮ ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿರುವ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ ೨ನೇ ದಿನದ ಕಾರ್ಯಕ್ರಮ ಉದ್ಘಾಟನೆ; “ಮಕ್ಕಳಿಗೆ ತಮ್ಮ ಪರಿವಾರದ ಚರಿತ್ರೆಯನ್ನು ಪ್ರಪ್ರಥಮವಾಗಿ ತಿಳಿಸಬೇಕು”- ರಘುರಾಮ ದೇವಾಡಿಗ -ಕಹಳೆ ನ್ಯೂಸ್

ಕುಂದಾಪುರ :ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ ನ ವತಿಯಿಂದ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾದ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು. ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರಘುರಾಮ ದೇವಾಡಿಗ, ವಿದ್ಯಾರ್ಥಿಗಳು ಪ್ರಪಂಚ ಜ್ಞಾನವನ್ನು ಪಡೆಯಬೇಕು. ಆದರೆ ಅದಕ್ಕಿಂತ ಮೊದಲು ತಂದೆ ತಾಯಿ, ಅಜ್ಜ-ಅಜ್ಜಿ ಹಾಗೂ ನಮ್ಮ ಸುತ್ತ ಮುತ್ತಲಿನ ಚರಿತ್ರೆಗಳ ಬಗ್ಗೆ, ಆಚಾರ-ವಿಚಾರಗಳ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕಾರು ಮತ್ತು ದ್ವಿಚಕ್ರವಾನ ಮುಖಾಮುಖಿ ಡಿಕ್ಕಿ -ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಕಾರು ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತಪಟ್ಟ ದ್ವಿಚಕ್ರ ವಾಹನ ಸವಾರರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ. ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ...
ಕುಂದಾಪುರಸುದ್ದಿ

ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ, ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಆಯ್ಕೆ–ಕಹಳೆ ನ್ಯೂಸ್

ಕುಂದಾಪುರ, : ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಜೀವ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಸಮಬಲದ ನಿರ್ದೇಶಕರನ್ನು ಹೊಂದಿದ್ದ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸಮಬಲದ ಸ್ಥಾನ ಪಡೆದಿದ್ದರು. ಹಾಗಾಗಿ ಅಧ್ಯಕ್ಷ ಸ್ಥಾನದ ಬಗ್ಗೆ ಕುತೂಹಲ ಕೆರಳಿಸಿತ್ತು. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶೀನ ಪೂಜಾರಿ ಅವರಿಗೆ ಬಿಜೆಪಿ ಬೆಂಬಲಿತ ಸದಸ್ಯರು ಬೆಂಬಲ ನೀಡಿದ್ದರು. ಹಾಗಾಗಿ ಶೀನ ಪೂಜಾರಿ ಗೆಲುವು...
ಕುಂದಾಪುರಸುದ್ದಿ

ಬಸ್ರೂರು| ಜಾಗ ಮತ್ತು ಗರಡಿ ಮನೆ ವಿಚಾರ ತಕರಾರು: ಹುಲ್ಲು ಕಟಾವು ಯಂತ್ರದಿಂದ ಹಲ್ಲೆ, ವ್ಯಕ್ತಿ ಕೈಗೆ ಗಂಭೀರ ಗಾಯ-ಕಹಳೆ ನ್ಯೂಸ್

ಕುಂದಾಪುರ: ಜಾಗ ಮತ್ತು ಗರಡಿ ಮನೆ ವಿಚಾರದಿಂದ ತಕರಾರುವಾಗಿ ಹುಲ್ಲು ಕಟಾವು ಯಂತ್ರದಿಂದ ಹಲ್ಲೆ ಮಾಡಿ ವ್ಯಕ್ತಿ ಕೈಗೆ ಗಂಭೀರ ಗಾಯಗೊಂಡ ಘಟನೆ ಜ. 21 ರಂದು ಬೆಳಿಗ್ಗೆ ಕುಂದಾಪುರ ತಾಲೂಕು ಬಸ್ರೂರು ಗ್ರಾಮದ ಮೂಡ್ಕೇರಿ ಗರಡಿಮನೆ ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಗರಡಿಮನೆ, ಮೂಡ್ಕೇರಿ ದಿವಂಗತ ಗೋಪಾಲ ಪೂಜಾರಿ ಅವರ ಮಗ ಕೇಶವ ಪೂಜಾರಿ(48) ಎಂದು ಗುರುತಿಸಲಾಗಿದೆ. ಘಟನೆ ವಿವರ: ಬಸ್ರೂರಿನ ಕೇಶವ ಎಂಬವರ ಗದ್ದೆಯಲ್ಲಿ ವಿಠಲ ಪೂಜಾರಿ...
ಕುಂದಾಪುರಸುದ್ದಿ

ವಾಕಿಂಗ್ ತೆರಳಿದ್ದ ವೇಳೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು-ಕಹಳೆ ನ್ಯೂಸ್

ಕುಂದಾಪುರ: ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಬಸ್ರೂರು ಮೂರುಕೈ ಸಮೀಪದ ವಡೇರಹೋಬಳಿ‌ ಎಂಬಲ್ಲಿ ಸಂಭವಿಸಿದೆ. ಅಪಘಾತದ ಬಳಿಕ ರಿಕ್ಷಾ ಚಾಲಕ ನಿಲ್ಲಿಸದೆ ಪರಾರಿಯಾಗಿ ಅಮಾನವೀಯತೆ ಮೆರೆದಿದ್ದು ಒಂದಷ್ಟು ಗಂಟೆ ಬಳಿಕ ಠಾಣೆಗೆ ಬಂದು ಶರಣಾಗಿದ್ದಾನೆ. ಇಲ್ಲಿನ ವಡೇರಹೋಬಳಿ ಬೆಟ್ಟಾಗರ ಮನೆ ನಿವಾಸಿ ಸೋಮಯ್ಯ (61) ಮೃತ ದುರ್ದೈವಿ. ಸೋಮಯ್ಯ ಅವರು ನಿತ್ಯ ಬೆಳಿಗ್ಗೆ ವಾಕೀಂಗ್ ಮಾಡುವ ಹವ್ಯಾಸ ಹೊಂದಿದ್ದರು. ಬುಧವಾರವೂ ವಾಕಿಂಗ್ ತೆರಳಿದ್ದ...
ಕುಂದಾಪುರಶಿಕ್ಷಣಸುದ್ದಿ

ವಿದ್ಯಾರಣ್ಯ ಶಾಲೆಯಲ್ಲಿ ವಿದ್ಯಾರ್ಥಿನಿಗೆ 3 ಲಕ್ಷ ರೂಪಾಯಿಗಳ ಸಹಾಯಹಸ್ತ ವಿತರಣೆ: ಶಾಲೆಯೊಂದು ತುಂಬು ಕುಟುಂಬಕ್ಕೆ ಉದಾಹರಣೆ- ಡಾ.ರಮೇಶ್ ಶೆಟ್ಟಿ-ಕಹಳೆ ನ್ಯೂಸ್

" ಅವಿಭಕ್ತ ಕುಟುಂಬ ವ್ಯವಸ್ಥೆಯು ನಮ್ಮ ದೇಶದ ಶ್ರೀಮಂತ ಸಂಸ್ಕೃತಿಯ ಭಾಗವಾಗಿದೆ. ಈ ವ್ಯವಸ್ಥೆಯಲ್ಲಿ ಕುಟುಂಬದ ಸದಸ್ಯರಲ್ಲಿ ನಾವು ನಮ್ಮವರು ಎಂಬ ಭಾವನೆ ಮೂಡಿ ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಸಹಕಾರ ಮನೋಭಾವದಿಂದ ಜೀವನ ಸಾಗಿಸುತ್ತಾರೆ. ಇದು ಉತ್ತಮ ಸಮಾಜ ಮುನ್ನಡೆಗೆ ಸಹಾಯವಾಗುತ್ತದೆ. ಹಾಗೆಯೇ ಶಾಲೆಯೂ ಕೂಡ ಒಂದು ತುಂಬು ಕುಟುಂಬಕ್ಕೆ ಉದಾಹರಣೆಯಾಗಿದ್ದು, ಇಲ್ಲಿ ಮಕ್ಕಳು, ಪೋಷಕರು, ಶಿಕ್ಷಕರು, ಆಡಳಿತ ಮಂಡಳಿ, ಬೋಧಕೇತರ ಸಿಬ್ಬಂದಿಗಳು ಇಡೀ ಕುಟುಂಬದ ಸದಸ್ಯರು. ಇಲ್ಲಿ ಯಾರಿಗಾದರೂ ಸಮಸ್ಯೆ...
ಕುಂದಾಪುರಶಿಕ್ಷಣಸುದ್ದಿ

ವಿದ್ಯಾರಣ್ಯ ಶಾಲೆಯಲ್ಲಿ ಪೋಷಕ-ಶಿಕ್ಷಕ ಒರಿಯೆಂಟೇಶನ್ ಕಾರ್ಯಕ್ರಮ; ಪರೀಕ್ಷಾ ತಯಾರಿಗೆ ಸಮಯ ಹೊಂದಾಣಿಕೆ ಬಹಳ ಮುಖ್ಯ – ಡಾ.ವಿರೂಪಾಕ್ಷ ದೇವರಮನೆ.-ಕಹಳೆ ನ್ಯೂಸ್

ಕುಂದಾಪುರ: "ಮಕ್ಕಳೇ ಹೊಸ ಜಗತ್ತಿನ ನಿಜವಾದ ಸೃಷ್ಟಿಕರ್ತರು.ಮಕ್ಕಳು ವಿದ್ಯಾರ್ಥಿ ಜೀವನದಲ್ಲಿಯೇ ಉತ್ತಮ ಶಿಕ್ಷಣ ಮತ್ತು ಮೌಲ್ಯಯುತವಾದ ಮಾಹಿತಿ ಯನ್ನು ಪಡೆದರೆ ಉತ್ತಮ ವ್ಯಕ್ತಿತ್ವವನ್ನು ಹೊಂದಲು ಸಾಧ್ಯವಾಗುತ್ತದೆ.ಮಕ್ಕಳು ಮಾನಸಿಕ ಒತ್ತಡಗಳನ್ನು ನಿಭಾಯಿಸಲು ಅಗತ್ಯ ಮಾರ್ಗದರ್ಶನ ಕಾಲ ಕಾಲಕ್ಕೆ ನೀಡಬೇಕು.ಪೋಷಕರು ಪರೀಕ್ಷೆ ಸಮಯದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿ ಉತ್ತಮ ವಾತಾವರಣ ಕಲ್ಪಿಸಬೇಕು ಮತ್ತು ಮಕ್ಕಳ ಮನಸಿನ ಮೇಲೆ ಧನಾತ್ಮಕ ಒತ್ತಡ ಹಾಕಬೇಕು.ಮಕ್ಕಳು ಪರೀಕ್ಷೆ ಸಮೀಪಿಸಿದಂತೆ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾರೆ.ಮಕ್ಕಳು ಪರೀಕ್ಷಾ ತಯಾರಿಗೆ ಸಮಯ ಹೊಂದಾಣಿಕೆ...
1 2 3 5
Page 1 of 5
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ