Friday, March 28, 2025

ಕುಂದಾಪುರ

ಕುಂದಾಪುರಸುದ್ದಿ

ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ, ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಆಯ್ಕೆ–ಕಹಳೆ ನ್ಯೂಸ್

ಕುಂದಾಪುರ, : ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಜೀವ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಸಮಬಲದ ನಿರ್ದೇಶಕರನ್ನು ಹೊಂದಿದ್ದ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸಮಬಲದ ಸ್ಥಾನ ಪಡೆದಿದ್ದರು. ಹಾಗಾಗಿ ಅಧ್ಯಕ್ಷ ಸ್ಥಾನದ ಬಗ್ಗೆ ಕುತೂಹಲ ಕೆರಳಿಸಿತ್ತು. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶೀನ ಪೂಜಾರಿ ಅವರಿಗೆ ಬಿಜೆಪಿ ಬೆಂಬಲಿತ ಸದಸ್ಯರು ಬೆಂಬಲ ನೀಡಿದ್ದರು. ಹಾಗಾಗಿ ಶೀನ ಪೂಜಾರಿ ಗೆಲುವು...
ಕುಂದಾಪುರಸುದ್ದಿ

ಬಸ್ರೂರು| ಜಾಗ ಮತ್ತು ಗರಡಿ ಮನೆ ವಿಚಾರ ತಕರಾರು: ಹುಲ್ಲು ಕಟಾವು ಯಂತ್ರದಿಂದ ಹಲ್ಲೆ, ವ್ಯಕ್ತಿ ಕೈಗೆ ಗಂಭೀರ ಗಾಯ-ಕಹಳೆ ನ್ಯೂಸ್

ಕುಂದಾಪುರ: ಜಾಗ ಮತ್ತು ಗರಡಿ ಮನೆ ವಿಚಾರದಿಂದ ತಕರಾರುವಾಗಿ ಹುಲ್ಲು ಕಟಾವು ಯಂತ್ರದಿಂದ ಹಲ್ಲೆ ಮಾಡಿ ವ್ಯಕ್ತಿ ಕೈಗೆ ಗಂಭೀರ ಗಾಯಗೊಂಡ ಘಟನೆ ಜ. 21 ರಂದು ಬೆಳಿಗ್ಗೆ ಕುಂದಾಪುರ ತಾಲೂಕು ಬಸ್ರೂರು ಗ್ರಾಮದ ಮೂಡ್ಕೇರಿ ಗರಡಿಮನೆ ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಗರಡಿಮನೆ, ಮೂಡ್ಕೇರಿ ದಿವಂಗತ ಗೋಪಾಲ ಪೂಜಾರಿ ಅವರ ಮಗ ಕೇಶವ ಪೂಜಾರಿ(48) ಎಂದು ಗುರುತಿಸಲಾಗಿದೆ. ಘಟನೆ ವಿವರ: ಬಸ್ರೂರಿನ ಕೇಶವ ಎಂಬವರ ಗದ್ದೆಯಲ್ಲಿ ವಿಠಲ ಪೂಜಾರಿ...
ಕುಂದಾಪುರಸುದ್ದಿ

ವಾಕಿಂಗ್ ತೆರಳಿದ್ದ ವೇಳೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು-ಕಹಳೆ ನ್ಯೂಸ್

ಕುಂದಾಪುರ: ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಬಸ್ರೂರು ಮೂರುಕೈ ಸಮೀಪದ ವಡೇರಹೋಬಳಿ‌ ಎಂಬಲ್ಲಿ ಸಂಭವಿಸಿದೆ. ಅಪಘಾತದ ಬಳಿಕ ರಿಕ್ಷಾ ಚಾಲಕ ನಿಲ್ಲಿಸದೆ ಪರಾರಿಯಾಗಿ ಅಮಾನವೀಯತೆ ಮೆರೆದಿದ್ದು ಒಂದಷ್ಟು ಗಂಟೆ ಬಳಿಕ ಠಾಣೆಗೆ ಬಂದು ಶರಣಾಗಿದ್ದಾನೆ. ಇಲ್ಲಿನ ವಡೇರಹೋಬಳಿ ಬೆಟ್ಟಾಗರ ಮನೆ ನಿವಾಸಿ ಸೋಮಯ್ಯ (61) ಮೃತ ದುರ್ದೈವಿ. ಸೋಮಯ್ಯ ಅವರು ನಿತ್ಯ ಬೆಳಿಗ್ಗೆ ವಾಕೀಂಗ್ ಮಾಡುವ ಹವ್ಯಾಸ ಹೊಂದಿದ್ದರು. ಬುಧವಾರವೂ ವಾಕಿಂಗ್ ತೆರಳಿದ್ದ...
ಕುಂದಾಪುರಶಿಕ್ಷಣಸುದ್ದಿ

ವಿದ್ಯಾರಣ್ಯ ಶಾಲೆಯಲ್ಲಿ ವಿದ್ಯಾರ್ಥಿನಿಗೆ 3 ಲಕ್ಷ ರೂಪಾಯಿಗಳ ಸಹಾಯಹಸ್ತ ವಿತರಣೆ: ಶಾಲೆಯೊಂದು ತುಂಬು ಕುಟುಂಬಕ್ಕೆ ಉದಾಹರಣೆ- ಡಾ.ರಮೇಶ್ ಶೆಟ್ಟಿ-ಕಹಳೆ ನ್ಯೂಸ್

" ಅವಿಭಕ್ತ ಕುಟುಂಬ ವ್ಯವಸ್ಥೆಯು ನಮ್ಮ ದೇಶದ ಶ್ರೀಮಂತ ಸಂಸ್ಕೃತಿಯ ಭಾಗವಾಗಿದೆ. ಈ ವ್ಯವಸ್ಥೆಯಲ್ಲಿ ಕುಟುಂಬದ ಸದಸ್ಯರಲ್ಲಿ ನಾವು ನಮ್ಮವರು ಎಂಬ ಭಾವನೆ ಮೂಡಿ ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಸಹಕಾರ ಮನೋಭಾವದಿಂದ ಜೀವನ ಸಾಗಿಸುತ್ತಾರೆ. ಇದು ಉತ್ತಮ ಸಮಾಜ ಮುನ್ನಡೆಗೆ ಸಹಾಯವಾಗುತ್ತದೆ. ಹಾಗೆಯೇ ಶಾಲೆಯೂ ಕೂಡ ಒಂದು ತುಂಬು ಕುಟುಂಬಕ್ಕೆ ಉದಾಹರಣೆಯಾಗಿದ್ದು, ಇಲ್ಲಿ ಮಕ್ಕಳು, ಪೋಷಕರು, ಶಿಕ್ಷಕರು, ಆಡಳಿತ ಮಂಡಳಿ, ಬೋಧಕೇತರ ಸಿಬ್ಬಂದಿಗಳು ಇಡೀ ಕುಟುಂಬದ ಸದಸ್ಯರು. ಇಲ್ಲಿ ಯಾರಿಗಾದರೂ ಸಮಸ್ಯೆ...
ಕುಂದಾಪುರಶಿಕ್ಷಣಸುದ್ದಿ

ವಿದ್ಯಾರಣ್ಯ ಶಾಲೆಯಲ್ಲಿ ಪೋಷಕ-ಶಿಕ್ಷಕ ಒರಿಯೆಂಟೇಶನ್ ಕಾರ್ಯಕ್ರಮ; ಪರೀಕ್ಷಾ ತಯಾರಿಗೆ ಸಮಯ ಹೊಂದಾಣಿಕೆ ಬಹಳ ಮುಖ್ಯ – ಡಾ.ವಿರೂಪಾಕ್ಷ ದೇವರಮನೆ.-ಕಹಳೆ ನ್ಯೂಸ್

ಕುಂದಾಪುರ: "ಮಕ್ಕಳೇ ಹೊಸ ಜಗತ್ತಿನ ನಿಜವಾದ ಸೃಷ್ಟಿಕರ್ತರು.ಮಕ್ಕಳು ವಿದ್ಯಾರ್ಥಿ ಜೀವನದಲ್ಲಿಯೇ ಉತ್ತಮ ಶಿಕ್ಷಣ ಮತ್ತು ಮೌಲ್ಯಯುತವಾದ ಮಾಹಿತಿ ಯನ್ನು ಪಡೆದರೆ ಉತ್ತಮ ವ್ಯಕ್ತಿತ್ವವನ್ನು ಹೊಂದಲು ಸಾಧ್ಯವಾಗುತ್ತದೆ.ಮಕ್ಕಳು ಮಾನಸಿಕ ಒತ್ತಡಗಳನ್ನು ನಿಭಾಯಿಸಲು ಅಗತ್ಯ ಮಾರ್ಗದರ್ಶನ ಕಾಲ ಕಾಲಕ್ಕೆ ನೀಡಬೇಕು.ಪೋಷಕರು ಪರೀಕ್ಷೆ ಸಮಯದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿ ಉತ್ತಮ ವಾತಾವರಣ ಕಲ್ಪಿಸಬೇಕು ಮತ್ತು ಮಕ್ಕಳ ಮನಸಿನ ಮೇಲೆ ಧನಾತ್ಮಕ ಒತ್ತಡ ಹಾಕಬೇಕು.ಮಕ್ಕಳು ಪರೀಕ್ಷೆ ಸಮೀಪಿಸಿದಂತೆ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾರೆ.ಮಕ್ಕಳು ಪರೀಕ್ಷಾ ತಯಾರಿಗೆ ಸಮಯ ಹೊಂದಾಣಿಕೆ...
ಕುಂದಾಪುರಸುದ್ದಿ

ಜೈ ಶಿವಾಜಿ ಕ್ರಿಕೆಟರ್ಸ್(ರಿ.) ಜೈ ಶಿವಾಜಿ ಗಣೇಶೋತ್ಸವ ಸಮಿತಿ(ರಿ.),ಟಿ.ಟಿ.ರಸ್ತೆ ವಡೇರಹೋಬಳಿ ಕುಂದಾಪುರ ಇದರ ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್

ಜೈ ಶಿವಾಜಿ ಕ್ರಿಕೆಟರ್ಸ್(ರಿ.) ಜೈ ಶಿವಾಜಿ ಗಣೇಶೋತ್ಸವ ಸಮಿತಿ(ರಿ.),ಟಿ.ಟಿ.ರಸ್ತೆ ವಡೇರಹೋಬಳಿ ಕುಂದಾಪುರ ಇದರ ನೂತನ ಪದಾಧಿಕಾರಿಗಳ ಆಯ್ಕೆ ಕುಂದಾಪುರ ಟಿ.ಟಿ ರಸ್ತೆಯ ಬಡಾಕೋಡಿ ಅರಮಶ್ರೀ ದೇವಸ್ಥಾನದಲ್ಲಿ ನಡೆದ ಸಂಘದ ಸಭೆಯಲ್ಲಿ ಅಧ್ಯಕ್ಷರಾಗಿ ಸಂದೀಪ್ ವಿ ಕಿರಣ್ ಇವರು ಆಯ್ಕೆಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ರಘು ಟಿ.ಟಿ, ಕೋಶಾಧಿಕಾರಿಯಾಗಿ ನಂದನ್, ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕುಂದಾಪುರ ಆಯ್ಕೆಗೊಂಡಿರುತ್ತಾರೆ. ಹಾಗೆ ಜೈ ಶಿವಾಜಿ ಕ್ರಿಕೆಟರ್ಸ್ ನ ಮುಖಂಡನಾಗಿ ಶಶಿಕುಮಾರ್ ಆಯ್ಕೆಗೊಂಡಿರುತ್ತಾರೆ. ಇದೇ ಸಂದರ್ಭದಲ್ಲಿ ಸಂಘದ ಮಾಜಿ...
ಉಡುಪಿಕುಂದಾಪುರಸಂತಾಪಸುದ್ದಿ

ಕೊಲ್ಲೂರು ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ ಅಡಿಗ ನಿಧನ – ಕಹಳೆ ನ್ಯೂಸ್

ಕೊಲ್ಲೂರು ಮುಕಾಂಬಿಕೆಯ ಆರಾಧಕ ಪ್ರಧಾನ ತಂತ್ರಿ ಮಂಜುನಾಥ ಅಡಿಗ ಧಾರ್ಮಿಕ ವಿಚಾರಗಳ ಆಳ ಅಧ್ಯಯನ ಹಾಗೂ ಜ್ಞಾನಕ್ಕೆ ಪ್ರಸಿದ್ದಿಯಾಗಿದ್ದರು ದೇಶದ ನಾನಾ ರಾಜ್ಯಗಳಲ್ಲಿ ಶ್ರೀಯುತರು ಅಪಾರ ಶಿಷ್ಯವರ್ಗವನ್ನು ಹೊಂದಿದ್ದರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಪ್ರಧಾನ ತಂತ್ರಿ ಹಾಗೂ ಅರ್ಚಕರಾದ ಶ್ರೀ ಮಂಜುನಾಥ ಅಡಿಗ ಅವರು ಇಂದು ಮಧ್ಯಾಹ್ನ ಉಡುಪಿ ಜಿಲ್ಲೆಯ ಕೊಲ್ಲೂರಿನ ತಮ್ಮ ಸ್ವಗ್ರಹದಲ್ಲಿ ಬ್ರಹೈಕ್ಯರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ಶ್ರೀ ಮಂಜುನಾಥ ಅಡಿಗರು ಕೊಲ್ಲೂರು ದೇವಾಲಯದ...
ಉಡುಪಿಕಾಪುಕುಂದಾಪುರಭಟ್ಕಳಸುದ್ದಿ

ಕುಂದಾಪುರ : ತ್ರಾಸಿ – ಸಮುದ್ರದಲ್ಲಿ ಜೆಟ್ ಸ್ಕೀ ಪಲ್ಟಿಯಾಗಿ ರೈಡರ್ ನಾಪತ್ತೆ- ಕಹಳೆ ನ್ಯೂಸ್

ಕುಂದಾಪುರ : ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಪರಿಣಾಮ ರೈಡರ್ ಸಮುದ್ರ ಪಾಲಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ಸಂಭವಿಸಿದೆ. ನಾಪತ್ತೆಯಾಗಿರುವವರನ್ನು ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ. ಇವರ ಜೊತೆ ರೈಡ್ ಗೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ...
1 2 3 4
Page 1 of 4
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ