Saturday, April 12, 2025

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೆಲ್ಕಾರ್ ನ ತರಕಾರಿ ಅಂಗಡಿಯಲ್ಲಿ ಕಳವು, ಶಾಲೆಗಿಟ್ಟಿದ್ದ ಕಾಣಿಕೆ ಹುಂಡಿ ಕಳ್ಳರ ಪಾಲು-ಕಹಳೆ ನ್ಯೂಸ್

ಬಂಟ್ವಾಳ: ಮೆಲ್ಕಾರ್ ನ ತರಕಾರಿ ಅಂಗಡಿಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಬೆಳಕಿಗೆ ಬಂದಿದೆ. ಮಹಮ್ಮದ್ ಶರೀಫ್ ಎಂಬವರ ಮಾಲಕತ್ವದ ಚಂದ್ರಿಕಾ ತರಕಾರಿ ಅಂಗಡಿಯ ಬೀಗ ಮುರಿದು ಹಣಕ್ಕಾಗಿ ಜಾಲಾಡಿದ್ದಾರೆ. ಶರೀಫ್ ಅವರು ಸಾಮಾಜಿಕ ಸೇವಾ ಕರ್ತರಾಗಿದ್ದು ಸರಕಾರಿ ಶಾಲೆಯ ಅಭಿವೃದ್ದಿಗಾಗಿ ತನ್ನ ಅಂಗಡಿಯಲ್ಲಿ ಇಟ್ಟಿದ್ದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ದೋಚಿದ್ದಾರೆ. ಕಾಣಿಕೆ ಡಬ್ಬಿ ತುಂಬಿದ್ದು ಅಂದಾಜು 5 ಸಾವಿರಕ್ಕಿಂತಲೂ ಅಧಿಕ ಮೊತ್ತದ ಹಣ ಅದರಲ್ಲಿತ್ತು ಎನ್ನಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೀರಕಟ್ಟೆ-ವಳಾಲಿನಲ್ಲಿ ಹೊಸ ಟೋಲ್‌ಪ್ಲಾಝಾ ನಿರ್ಮಾಣ ಕಾಮಗಾರಿ-ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿಯ ಭಾಗವಾಗಿ ಉಪ್ಪಿನಂಗಡಿ ಸಮೀಪದಲ್ಲಿ ನೀರಕಟ್ಟೆ-ವಳಾಲಿನಲ್ಲಿ ಟೋಲ್‌ಪ್ಲಾಝಾ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಹೆದ್ದಾರಿ ಕಾಮಗಾರಿ ಮುಗಿಯುತ್ತಿದ್ದಂತೆ ಟೋಲ್‌ಗೇಟ್ ಆರಂಭವಾಗುವ ಸಾಧ್ಯತೆ ಇದೆ. ಹೆದ್ದಾರಿ ಕಾಮಗಾರಿಯ ಪ್ರಾರಂಭದಲ್ಲಿ ಕಲ್ಲಡ್ಕ ಸಮೀಪದಲ್ಲಿ ಟೋಲ್ ಆರಂಭವಾಗಲಿದೆ ಹಾಗೂ ಬ್ರಹ್ಮರಕೂಟ್ಲು ಟೋಲ್ ಮುಚ್ಚಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಹೊಸ ಟೋಲ್ ಉಪ್ಪಿನಂಗಡಿ ಭಾಗದಲ್ಲಿ ನಿರ್ಮಾಣ ಆಗಲಿರುವುದರಿಂದ ಬ್ರಹ್ಮರಕೂಟ್ಲು ಟೋಲ್ ಸದ್ಯಕ್ಕೆ ಮುಚ್ಚುವ ಸಾಧ್ಯತೆ ಕಡಿಮೆ ಎನ್ನಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳ

ಉಪ್ಪಿನಂಗಡಿ ಶ್ರೀನಿಧಿ ಮೊಬೈಲ್ಸ್ ನ ಗ್ರಾಹಕರ ಪಾಲಿಗೆ ಒಲಿದ ಬಹುಮಾನ-ಕಹಳೆ ನ್ಯೂಸ್

ಉಪ್ಪಿನಂಗಡಿ ಯ ಪ್ರತಿಷ್ಟಿತ ಹಾಗೂ ಜನಪ್ರಿಯ ಮೊಬೈಲ್ ಮಳಿಗೆ 'ಶ್ರೀನಿಧಿ ಮೊಬೈಲ್ಸ್' ಗೆ ಈ ವರ್ಷ ದಕ್ಷಿಣ ಕನ್ನಡ & ಉಡುಪಿ ಮೊಬೈಲ್ ಅಶೋಷಿಯೇಶನ್ ಹಮ್ಮಿಕೊಂಡಿದ್ದ ಸ್ಮಾರ್ಟ್ ಫೋನ್ ಫೆಸ್ಟ್ ಲಕ್ಕಿ ಕೂಪನ್ನಲ್ಲಿ 4 ಬಹುಮಾನಗಳು ಬಂದಿದ್ದು ಶ್ರೀನಿಧಿಯ ಗ್ರಾಹಕರಿಗೆ ಸಂತಸ ತಂದಿದೆ, ಗ್ರಾಹಕರಿಗೆ ರೂ 1000 ಕ್ಕಿಂತ ಹೆಚ್ಚಿನ ಪ್ರತೀ ಖರೀದಿಗೂ ಒಂದು ಉಚಿತ ಲಕ್ಕಿ ಕೂಪನ್ ನೀಡಲಾಗುತಿತ್ತು. ಒಟ್ಟಾರೆ ಉಪ್ಪಿನಂಗಡಿ ಯಲ್ಲಿ 50 ಕ್ಕೂ ಮಿಕ್ಕಿ ಮೊಬೈಲ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಗವಾನ್ ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿ ಇದರ ಪ್ರತಿಷ್ಟಾನ ಮಹೋತ್ಸವದ ಪೂರ್ವ ತಯಾರಿ ಸಭೆ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ಭಗವಾನ್ ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿ ಇದರ ಪ್ರತಿಷ್ಟಾನ ಮಹೋತ್ಸವದ ಅಂಗವಾಗಿ ಪೂಜ್ಯ ಖಾವಂದರು ಆಗಮಿಸುತ್ತಿದ್ದು ಈ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಒಕ್ಕೂಟ ಅಧ್ಯಕ್ಷರಾದ ನವೀನ್ ಚಂದ್ರ ವಹಿಸಿದರು. ಜನ ಜಾಗ್ರತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ಕಾರ್ಯಕ್ರಮ ಉದ್ಘಾಟಿಸಿ ಮಾರ್ಗದರ್ಶನ ನೀಡಿದರು. ಜಿಲ್ಲಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಬಂಟ್ವಾಳ: ಕಲ್ಲಡ್ಕ ಪ್ಲೈ ಓವರ್ ಹಾಗೂ ಸರ್ವೀಸ್ ರಸ್ತೆಯ ಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಕಂಪ್ಲೀಟ್ ಆಗಲಿದ್ದು, ಎಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆಯನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪನಿ ತಿಳಿಸಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದರು. ಅವರು ಇಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಜೊತೆ ಬಿ.ಸಿ. ರೋಡಿನಿಂದ ಉಪ್ಪಿನಂಗಡಿವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಕಾಂಚನದಲ್ಲಿರುವ ಕೆ.ಎನ್.ಆರ್.ಸಿ.ಕಂಪೆನಿಯ ಪ್ಲಾಂಟ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ,ಕುದ್ರೆಬೆಟ್ಟು ಮಣಿಕಂಠ ಮಂದಿರದ ಸಪ್ತ ದಶೋತ್ಸವ ಹಾಗೂ ಶ್ರೀ ಕಲ್ಲುರ್ಟಿ ಮತ್ತು ಶ್ರೀ ಗುಳಿಗ ದೈವಗಳ ಕೋಲ ಸೇವೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕ ಕುದ್ರೆಬೆಟ್ಟು ಜನಶಕ್ತಿ ಸೇವಾ ಟ್ರಸ್ಟ್( ರಿ.), ಶ್ರೀ ಮಣಿಕಂಠ ಯುವಶಕ್ತಿ (ರಿ.), ಶ್ರೀ ಮಣಿಕಂಠ ಮಾತೃಶಕ್ತಿ ಇದರ ಮಣಿಕಂಠ ಮಂದಿರದ "ಸಪ್ತ ದಶೋತ್ಸವ "ಹಾಗೂ ಶ್ರೀ ಕಲ್ಲುರ್ಟಿ ಮತ್ತು ಶ್ರೀ ಗುಳಿಗ ದೈವಗಳ ಕೋಲ ಸೇವೆ ದಿನಾಂಕ 2-2-2025 ನೇ ಆದಿತ್ಯವಾರ ಜರಗಲಿರುವುದು. ಬೆಳಿಗ್ಗೆ 5:00ಗೆ ಸರಿಯಾಗಿ ಗಣ ಹೋಮ ನಡೆದು ಬೆಳಿಗ್ಗೆ ಗಂಟೆ 6 ರಿಂದ ಸಂಜೆ ಗಂಟೆ 8ರ ತನಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಿಂತೆಯಂತೆ ಕಾಡಿದ ಗೊಂದಲಗಳಿಗೆ ಬೆಳಕು ನೀಡಿದ ನಾರಾಯಣಗುರುಗಳು : ಸಂಜೀವ ಪೂಜಾರಿ-ಕಹಳೆ ನ್ಯೂಸ್

ಬಂಟ್ವಾಳ : ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಅಸಮಾನತೆಯ ವಿರುದ್ಧ ಸಂಘರ್ಷರಹಿತವಾದ ಸುಧಾರಣಾ ಕ್ರಾಂತಿಯನ್ನು ರೂಪಿಸಿ ಆ ಮೂಲಕ ಯಶಸ್ವಿಯಾದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಪ್ರತಿಯೊಂದು ಅನುಷ್ಠಾನ ಹಾಗೂ ಚಿಂತನೆಗಳು ಚಿಂತೆಯಂತೆ ಕಾಡುತ್ತಿರುವ ವರ್ತಮಾನದ ಗೊಂದಲಗಳಿಗೆ ಸೂಕ್ತ ಪರಿಹಾರವಾಗ ಬಲ್ಲ ಬೆಳಕಿನ ಮೌಲ್ಯವನ್ನು ಹೊಂದಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಜಿಪ ಮುನ್ನೂರು ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ ತಿಳಿಸಿದರು. ಅವರು ಯುವವಾಹಿನಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗೋವಾದಲ್ಲಿ ಮಹಮ್ಮದ್ ಶರೀಫರಿಗೆ ಭಾರತ ಗೌರವ ಪ್ರಶಸ್ತಿ ಪ್ರದಾನ- ಕಹಳೆ ನ್ಯೂಸ್

ಬಂಟ್ವಾಳ : ಸರ್ಕಾರಿ ಶಾಲೆಗೆ ಬಿಸಿ ಊಟಕ್ಕಾಗಿ ಉಚಿತವಾಗಿ ತರಕಾರಿಯನ್ನು ಪೂರೈಸುತ್ತಿರುವ ಬಂಟ್ವಾಳ ತಾಲೂಕಿನ ಮೆಲ್ಕಾರ್ ಚಂದ್ರಿಕಾ ವೆಜಿಟೇಬಲ್ ನ ಮಾಲಕ ಮಹಮ್ಮದ್ ಶರೀಫ್ ಅವರಿಗೆ ಗೋವಾದ ಪಣಜಿಯಲ್ಲಿ "ಭಾರತ ಗೌರವ" ಪ್ರಶಸ್ತಿ ಪ್ರದಾನವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜ್ಜಬ್ಬ ಮಾಡಿದರು. ಸಾಂತ್ವನ ಫೌಂಡೇಶನ್ ಬೆಂಗಳೂರು ಹಾಗೂ ಕಲ್ಲಂಗುಟಿ ಕನ್ನಡ ಸಂಘ ಪಣಜಿ ಸಯೋಗದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಹಮ್ಮದ್ ಶರೀಫರಿಗೆ ಸಮಾಜ ಸೇವೆ ಕ್ಷೇತ್ರದಲ್ಲಿ ಪರಿಗಣಿಸಿ ಇವರಿಗೆ...
1 11 12 13 14 15 170
Page 13 of 170
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ