Sunday, March 23, 2025

ಕುಂದಾಪುರ

ಉಡುಪಿಕುಂದಾಪುರಜಿಲ್ಲೆಸುದ್ದಿ

ಜೇಡಿ ಮಣ್ಣಿನ‌ ಸಮಸ್ಯೆ ಶೀಘ್ರವೇ ಪರಿಹರಿಸಿ: ವಿ. ನರಸಿಂಹ ಒತ್ತಾಯ-ಕಹಳೆ ನ್ಯೂಸ್

ಕುಂದಾಪುರ: ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ಜೇಡಿಮಣ್ಣನ್ನು ತೆಗೆಯಲು ನಿರ್ಬಂಧ ಹೇರಲಾಗಿದೆ. ಹಂಚು ಉದ್ಯಮಕ್ಕೆ ಅವಶ್ಯವಿರುವ ಜೇಡಿಮಣ್ಣಿನ ಸಮಸ್ಯೆಯನ್ನು ಸರ್ಕಾರ ಶೀಘ್ರವೇ ಪರಿಹಾರ‌ ಮಾಡಬೇಕು ಎಂದು ಉಡುಪಿ ಜಿಲ್ಲಾ ಹೆಂಚು ಕಾರ್ಮಿಕ ಸಂಘದ ಅಧ್ಯಕ್ಷ ವಿ. ನರಸಿಂಹ ಒತ್ತಾಯಿಸಿದ್ದಾರೆ. ಮಂಗಳವಾರ ಸಂಜೆ ನಗರದ ಶಾಸ್ತ್ರೀ ಸರ್ಕಲ್‌ನಲ್ಲಿ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ (ಸಿಐಟಿಯು) ಕುಂದಾಪುರ ವತಿಯಿಂದ ಹಂಚು ಉದ್ಯಮಕ್ಕೆ ಬೇಕಾದ ಜೇಡಿ‌ಮಣ್ಣನ್ನು ತೆಗೆಯುವ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ನಡೆದ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕುಂದಾಪುರ ಛಾಯಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಿರೀಶ್ ಜಿ.ಕೆ ಉಪಾಧ್ಯಕ್ಷರಾಗಿ ಸುಧೀರ್ ಬಿದ್ಕಲ್ ಕಟ್ಟೆ ಅವಿರೋಧ ಆಯ್ಕೆ- ಕಹಳೆ ನ್ಯೂಸ್

ಕುಂದಾಪುರ: ಛಾಯಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಕುಂದಾಪುರ ಇದರ ಮುಂದಿನ‌ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಗಿರೀಶ್ ಜಿ.ಕೆ, ಉಪಾಧ್ಯಕ್ಷರಾಗಿ ಸುಧೀರ್ ಬಿದ್ಕಲ್ ಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ವಿ.ಎಮ್.ಕೆ ಟವರ್ ನಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆದ ಆಡಳಿತ ಮಂಡಳಿ ಆಯ್ಕೆ ಪ್ರಕ್ರಿಯೆಯಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಗಿರೀಶ್ ಜಿ.ಕೆ ಹಾಗೂ ಉಪಾಧ್ಯಕ್ಷರಾಗಿ ಸುಧೀರ್ ಬಿದ್ಕಲ್ ಕಟ್ಟೆ ಅವಿರೋಧವಾಗಿ ಆಯ್ಕೆಯಾದರು‌. ನಿರ್ದೇಶಕರಾಗಿ ಪುಂಡಲೀಕ ಶಾನುಭಾಗ್, ದಿನೇಶ್...
ಉಡುಪಿಕುಂದಾಪುರಜಿಲ್ಲೆಸುದ್ದಿ

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಒಪ್ಪಿಗೆ: ಕೋಟ-ಕಹಳೆ ನ್ಯೂಸ್

ಕುಂದಾಪುರ : ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನ ಮಾಡುವ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಗಳಾಗಿದ್ದು, ಇದಕ್ಕೆ ಕರ್ನಾಟಕ ಸರಕಾರ ಭಾಗಶಃ ಒಪ್ಪಿಗೆ ನೀಡಿದೆ. ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನವಾದಲ್ಲಿ ಪರಿಪೂರ್ಣ ಅಭಿವೃದ್ದಿಗೆ ಅನುಕೂಲ ವಾಗುತ್ತದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕುಂದಾಪುರದ ಮೂಡ್ಲಕಟ್ಟೆ ರೈಲ್ವೆ ನಿಲ್ದಾಣದಲ್ಲಿ ಪ್ರಥಮವಾಗಿ ನಿಲುಗಡೆ ಗೊಂಡ ತಿರುವನಂತಪುರಂ ನಿಝಾಮುದ್ದೀನ್ ಎಕ್ಸ್‌ಪ್ರೆಸ್ ಮತ್ತು ಎರ್ನಾಕುಲಂ ನಿಜಾಮುದ್ಧಿನ್ ಎಕ್ಸ್‌ಪ್ರೆಸ್ ರೈಲುಗಳನ್ನು ಸ್ವಾಗತಿಸಿದ...
ಕುಂದಾಪುರಜಿಲ್ಲೆದಕ್ಷಿಣ ಕನ್ನಡಸುದ್ದಿ

ಲಿವರ್ ಸಮಸ್ಯೆಯಿಂದ ಬಳಲುತ್ತಿರುವ 6 ತಿಂಗಳ ಹಸುಗೂಸಿನ ತುರ್ತು ಚಿಕಿತ್ಸೆಗೆ ಬೇಕಿದೆ ಮಾನವೀಯ ನೆರವು -ಕಹಳೆ ನ್ಯೂಸ್

ತೆಕ್ಕಟ್ಟೆ : ಇಲ್ಲಿನ ಕುಂದಾಪುರ ತಾಲೂಕಿನ ಬೇಳೂರು ಮೊಗೆಬೆಟ್ಟು ಪ್ರಭಾಕರ ಆಚಾರ್ಯ ಹಾಗೂ ಯಶೋಧ ದಂಪತಿಗಳ 6 ತಿಂಗಳ ಹಸುಗೂಸು ಆರ್ವಿ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ನಾರಾಯಣ ಹೆಲ್ತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ,ಅಲ್ಲಿಯ ವೈದ್ಯಾಽಕಾರಿಗಳು ತುರ್ತಾಗಿ ಲಿವರ್ ಮರುಜೋಡಣೆಯ ಚಿಕಿತ್ಸೆಗೆ (liver trans plantation) ಸೂಚಿಸಿದ್ದಾರೆ. ಮರುಜೋಡಣೆಯ ಚಿಕಿತ್ಸೆಯ ಅಂದಾಜು ವೆಚ್ಚ ರೂ.25ಲಕ್ಷ ತಗಲುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ಈ ಬಡ...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಕಲಚೇತನರಿಗೆ ದ್ವಿಚಕ್ರ ವಾಹನ ಕೀಲಿಕೈ ಹಸ್ತಾಂತರಿಸಿದ: ಶಾಸಕ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲ 10 ಜನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಿಸುವ ಕಾರ್ಯಕ್ರಮ ಕುಂದಾಪುರದ ವಿಕಲಚೇತನರ ಇಲಾಖೆಯ ಆವರಣದಲ್ಲಿ ಆಯೋಜಿಸಿದ್ದು ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಫಲಾನುಭವಿಗಳಿಗೆ ದ್ವಿಚಕ್ರ ವಾಹನ ಕೀಲಿಕೈ ಹಸ್ತಾಂತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ  ಕುಂದಾಪುರ ಪುರಸಭಾ ಅಧ್ಯಕ್ಷ...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥಾಪಕರ ದಿನಾಚರಣೆ ; ಮಕ್ಕಳಲ್ಲಿ ಶಿಸ್ತು ಮೂಡಿಸಲು ಸ್ಕೌಟ್ಸ್ & ಗೈಡ್ಸ್ ಸಹಕಾರಿ- ಡಾ. ರಮೇಶ್ ಶೆಟ್ಟಿ

ಕುಂದಾಪುರ: " ಸ್ವಾತಂತ್ರ್ಯ ಪೂರ್ವದಲ್ಲಿಯೇ ಬ್ರಿಟಿಷ್ ನಿವೃತ್ತ ಅಧಿಕಾರಿ ಪೋವೆಲ್ ರಿಂದ ಸ್ಥಾಪಿತವಾದ ಸ್ಕೌಟ್ಸ್ ಅಂಡ್ ಗೈಡ್ಸ್ ಆಂದೋಲನ ಇಂದು ಜಗತ್ತಿನಾದ್ಯಂತ ಪಸರಿಸಿ ಯುವ ಸಮುದಾಯವನ್ನು ಅದರಲ್ಲಿಯೂ ವಿಶೇಷವಾಗಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ದೈಹಿಕವಾಗಿ ಬೌದ್ಧಿಕವಾಗಿ ಸದೃಢವಾಗಿಸಿ ಉತ್ತಮ ಪ್ರಜೆಗಳಾಗಿ ರೂಪಿಸಲು ಸಹಕಾರಿಯಾಗಿದೆ. ಇಂದು ಭಾರತದ ಬಹುಪಾಲು ರಾಜ್ಯಗಳಲ್ಲಿ ತರಬೇತಿ ನಡೆಯುತ್ತಿದ್ದು ಬಹುಪಾಲು ಶಾಲೆಗಳಲ್ಲಿ ವಿದ್ಯಾರ್ಥಿಗಳು ಬಹಳ ಉತ್ಸುಕತೆಯಿಂದ ಪಾಲ್ಗೊಂಡು ಉತ್ತಮ ಶಿಸ್ತು ನಡತೆಗಳನ್ನು ಕಲಿತು ಪಠ್ಯ ಮತ್ತು ಪಠ್ಯೇತರ ವಿಭಾಗದಲ್ಲೂ...
ಕುಂದಾಪುರಜಿಲ್ಲೆಸುದ್ದಿ

ಕೋಡಿ ಪರಿಸರದಲ್ಲಿ ಕೃಷಿ ಜಮೀನು ಮತ್ತು ಮನೆಗಳಿಗೆ ಉಪ್ಪು ನೀರು ಬರದಂತೆ ತಡೆಯಲು ನದಿ ದಂಡೆ ಸಂರಕ್ಷಣೆಗೆ ಅನುದಾನ ಮಂಜೂರು ಮಾಡುವಂತೆ-: ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಡಿ ಪರಿಸರದಲ್ಲಿ ಕೃಷಿ ಜಮೀನು ಮತ್ತು ಮನೆಗಳಿಗೆ ಉಪ್ಪು ನೀರು ಬರದಂತೆ ತಡೆಯಲು ನದಿ ದಂಡೆ ಸಂರಕ್ಷಣೆಗೆ ಅನುದಾನ ಮಂಜೂರು ಮಾಡಲು ಇಂದು ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ವಿಧಾನಸಭೆಯ ಅಧಿವೇಶನದ ಸಂದರ್ಭದಲ್ಲಿಯೇ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ಎಸ್ ಬೋಸರಾಜರನ್ನು ಭೇಟಿ ಮಾಡಿ ಕೋಡಿ ಪರಿಸರದಲ್ಲಿ ನದಿಗಳಿಂದ ಉಪ್ಪು ನೀರು ಉಕ್ಕಿ ಕೃಷಿ ಜಮೀನು...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಚಿತ್ರ ರೋಗ ಬಾಧೆಯಿಂದ ನರಳುತ್ತಿರುವ ಪುತ್ರನ ಸ್ಥಿತಿ ನೆನೆದು ತಾಯಿಯ ಕಣ್ಣೀರ ರೋದನ;ಔಷಧಕ್ಕೋಸ್ಕರ ತಾಯಿ ಖರ್ಚು ಮಾಡಿ ಸೋತು ಸುಣ್ಣ-ಕಹಳೆ ನ್ಯೂಸ್

ಕುಂದಾಪುರ:ಮೈತುಂಬಾ ಗುಳ್ಳೆ,ಚರ್ಮ ಸುಟ್ಟು ಹೋದಂತಿದೆ.ವಿಪರೀತ ಯಾತನೆ.ವೈದ್ಯರು ದೇಹದಲ್ಲಿ ಹೆಚ್ಚಿರುವ ನಂಜಿನ ಕಾರಣಕ್ಕೆ ಹೀಗಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಇನ್ನೂ ಕಾಯಿಲೆ ಯಾವುದೆಂದು ಖಚಿತವಾಗಿಲ್ಲ, ಮನೆಗೆ ಆಧಾರವಾಗಿದ್ದ ಇವರೀಗ ಹಾಸಿಗೆ ಹಿಡಿದಿದ್ದಾರೆ. ವಿಚಿತ್ರ ರೋಗ ಬಾಧೆಯಿಂದ ನರಳುತ್ತಿರುವ ಪುತ್ರನ ಸ್ಥಿತಿ ನೆನೆದು ತಾಯಿಯ ಕಣ್ಣೀರ ರೋದನ ಮುಗಿಲು ಮುಟ್ಟಿದೆ.ತಾಲ್ಲೂಕಿನ ತಲ್ಲೂರು ಗ್ರಾಮದ ಉಪ್ಪಿನಕುದ್ರುವಿನ ಕುಟುಂಬವೊಂದರ ದುರಂತ ಕಥಾನಕವಿದು. ಉಪ್ಪಿನಕುದ್ರುವಿನ ನಿತ್ಯಾನಂದ (38)ಎಂಬವರು ಈ ವಿಚಿತ್ರ ಕಾಯಿಲೆಯಿಂದ ನರಳುತ್ತಿದ್ದಾರೆ,ಬಾಲ್ಯದ ದಿನಗಳಿಂದಲೂ ಶ್ರಮಜೀವಿ.ತಂದೆ ಪರಮೇಶ್ವರ,...
1 2 3 14
Page 1 of 14
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ