Saturday, April 12, 2025

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಓಂ ಶ್ರೀ ಗೆಳೆಯರ ಬಳಗ (ರಿ.) ನಾಯಿಲ ನರಿಕೊಂಬು 19ನೇ ವಾರ್ಷಿಕೋತ್ಸವ ಓಂ ಶ್ರೀ ಪರ್ಪ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಓಂ ಶ್ರೀ ಗೆಳೆಯರ ಬಳಗ (ರಿ.) ನಾಯಿಲ ನರಿಕೊಂಬು ಇದರ 19ನೇ ವಾರ್ಷಿಕೋತ್ಸವ "ಓಂ ಶ್ರೀ ಪರ್ಪ " ಸಂಘದ ಕಟ್ಟಡದ ವಠಾರದಲ್ಲಿ ಜರಗಿತು. ಬೆಳಿಗ್ಗೆ ಸತ್ಯನಾರಾಯಣ ಪೂಜಿ, ಮಧ್ಯಾಹ್ನ ಸಾರ್ವಜನಿಕ ಅನ್ನದಾನ ಕಾರ್ಯಕ್ರಮ ನಡೆಯಿತು. ಸಂಜೆ ಶ್ರೀ ದುರ್ಗಾಪರಮೇಶ್ವರಿ ಸಾನಿಧ್ಯ ಜನತಾಗ್ರಹ ನರಿಕೊಂಬು ಇಲ್ಲಿನ ಶ್ರೀದೇವಿ ಪಾತ್ರಿ ಶ್ರೀ ಪ್ರವೀಣ್ ಸ್ವಾಮೀಜಿ ಕುಣಿತ ಭಜನಾ ಸ್ಪರ್ಧೆಯ ಉದ್ಘಾಟನೆ ಮಾಡಿದರು. ಜಿಲ್ಲೆಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

“ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ನಾಮಫಲಕ ಅನಾವರಣ-ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ "ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ" ಎಂಬ ನಾಮಫಲಕವನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಶಾಸಕರು ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿಗೆ ಮಾತ್ರವಲ್ಲ, ಪರವೂರು ಸೇರಿದಂತೆ ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೊಂದಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರಿನಲ್ಲಿ ಇನ್ನು ಮುಂದೆ ಈ ರಸ್ತೆ ಕರೆಯಲ್ಪಡುವುದು ಹರ್ಷ ತಂದಿದೆ ಎಂದರು. ಶ್ರೀ ಮಂಗಳಾದೇವಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನೇತ್ರಾವತಿ ಸೇತುವೆ ದುರಸ್ತಿ ಕಾಮಗಾರಿ: ಏ.1ರಿಂದ ಮಾರ್ಗ ಬದಲಾವಣೆ-ಕಹಳೆ ನ್ಯೂಸ್

ಮಂಗಳೂರು: ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ - ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಏಪ್ರಿಲ್‌ 1ರಿಂದ 30ರ ವರೆಗೆ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ ಒಂದು ಸೇತುವೆಯಲ್ಲಿ ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪ್‌ವೆಲ್‌ನಿಂದ ತೊಕ್ಕೊಟ್ಟುವರೆಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ವಿವಿ ಕಾಲೇಜಿನಲ್ಲಿ ಮಜ್ಜಿಗೆ ಹಬ್ಬ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು, ಮಾ. 29: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸೂಕ್ಷ್ಮಾಣುಜೀವ ಶಾಸ್ತ್ರ ವಿಭಾಗದ ವತಿಯಿಂದ ಮಜ್ಜಿಗೆ ಹಬ್ಬವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಭಾರತದ ಸೂಕ್ಷ್ಮಾಣುಜೀವ ಶಾಸ್ತ್ರ ಸಮಾಜದ ಸಂಸ್ಥಾಪಕ ಅಧ್ಯಕ್ಷ ಡಾ. ದೇಶ್ಮುಖ್ ಅವರು ಉದ್ಘಾಟಿಸಿ, ಜನರು ಟೀ, ಕಾಫಿ ಅಥವಾ ಇತರ ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವ ಬದಲು ಆರೋಗ್ಯಕರ ಮಜ್ಜಿಗೆ ಕುಡಿಯುವಂತೆ ಪ್ರೋತ್ಸಾಹಿಸಲು ಈ ಅಭಿಯಾನ ಪ್ರಾರಂಭಿಸಿರುವುದಾಗಿ ತಿಳಿಸಿದರು. ಮಜ್ಜಿಗೆ ಸುಲಭವಾಗಿ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ಅಲ್ಲದೇ, ಆರೋಗ್ಯಕರ ಪಾನೀಯವಾಗಿದ್ದು, ಸಾಕಷ್ಟು...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಸುಮಧುರ ಸಂಜೆಯ ಸಂಗೀತದಲ್ಲಿ ತೇಲಾಡಿದ ಪ್ರೇಕ್ಷಕರು-ಕಹಳೆ ನ್ಯೂಸ್

ಸುಳ್ಯ : ಪ್ರಕೃತಿ ನಾನಾ ಕಲೆಗಳ ಮೂಲ ಕಲೆ ಕಲಾವಿದರು ಬದುಕಿನ ಅನರ್ಘ್ಯ ರತ್ನಗಳು ಕಲೆ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ದೊಡ್ಡ ಮನಸ್ಸು ನಮ್ಮಲ್ಲಿರಬೇಕು ಅದೇ ಭಕ್ತಿರಸ ಗಾನಸುಧಾ ಗಾಯನ ಬದುಕನ್ನು ರೂಪಿಸುತ್ತದೆ ಸುಳ್ಯ ತಾಲೂಕಿನ ಬೆಳ್ಳಾರೆ ಕಳಂಜ ಗ್ರಾಮದ ತಂಟೆಪ್ಪಾಡಿ ನೀನಾದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಸಂಗೀತಕ್ಕೆ ಗುರುವರೇಣ್ಯರ ಜೊತೆ ಹಾಡುವ ಸೌಭಾಗ್ಯ ಖ್ಯಾತ ಗಾಯಕೀ ಸುಪ್ರಿಯ ರಘುನಂದನ್ ಮತ್ತು ಉದಯೋನ್ಮುಖ ಪ್ರತಿಭೆ ಸುಮಾ ಕೋಟೆ ತುಳು ಭಕ್ತಿಗೀತೆ,...
ಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ‘ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ’-ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಯುಕೆಜಿ ತರಗತಿಯ ಪುಟಾಣಿ ವಿದ್ಯಾರ್ಥಿಗಳಿಗೆ ' ಚಿಣ್ಣರ ಪ್ರಶಸ್ತಿ ಪ್ರಧಾನ ' ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭವನ್ನು ಪುಟಾಣಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದಿರೆಯ ಖ್ಯಾತ ಮಕ್ಕಳ ತಜ್ಞ ಡಾಕ್ಟರ್. ಟಿ. ವಸಂತ್ ರವರು ಉಪಸ್ಥಿತಿಯಲ್ಲಿದ್ದು ಮಕ್ಕಳ ಮನಸ್ಸು ಸೂಕ್ಷ್ಮವಾದುದು, ಎಳೆಯ ವಯಸ್ಸಿನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಎಲ್ಲಾ ಚೌಕಟ್ಟನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ- ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ -ಕಹಳೆ ನ್ಯೂಸ್

ಬಂಟ್ವಾಳ : ಮಗು ತನ್ನ ಮನೆಯಿಂದ ಹೊರಗಿನ ಪ್ರಪಂಚಕ್ಕೆ ಕಲಿಕೆಯ ವಾತಾವರಣಕ್ಕೆ ಹೋಗುವ ಸನ್ನಿವೇಶವೇ ಪೂರ್ವ ಪ್ರಾಥಮಿಕ ತರಗತಿಗಳು ಈ ತರಗತಿಗಳು ತನ್ನ ಜೀವನದಲ್ಲಿ ಬದುಕನ್ನು ಕಟ್ಟಿಕೊಳ್ಳುವ ಅಡಿಪಾಯವಾಗಿದೆ. ಮಾಧ್ಯಮಗಳು ಯಾವುದೇ ಆಗಿರಲಿ ಕಲಿಕೆ ಮುಖ್ಯವಾಗಿದೆ, ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ ಇದನ್ನು ಪೂರ್ವ ಪ್ರಾಥಮಿಕ ತರಗತಿಗಳು ಮುಂದಿನ ಹಂತಗಳಿಗೆ ಮಕ್ಕಳನ್ನು ಹೊಂದಿಕೊಳ್ಳುವಂತೆ ಮಾಡುತ್ತವೆ ಎಂಬುದಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಹೇಳಿದರು. ಅವರು ಶುಕ್ರವಾರ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕಾರು ಮತ್ತು ದ್ವಿಚಕ್ರವಾನ ಮುಖಾಮುಖಿ ಡಿಕ್ಕಿ -ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಕಾರು ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತಪಟ್ಟ ದ್ವಿಚಕ್ರ ವಾಹನ ಸವಾರರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ. ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ...
1 8 9 10 11 12 708
Page 10 of 708
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ