Saturday, April 12, 2025

ಪ್ರಾದೇಶಿಕ

ಪುತ್ತೂರುಸುದ್ದಿ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ಗೌರವಾಧ್ಯಕ್ಷರಾಗಿ ವಿ.ಬಿ.ಅರ್ತಿಕಜೆ, ಕಾನೂನು ಸಲಹೆಗಾರರಾಗಿ ಮಹೇಶ್ ಕಜೆ, ಗೌರವ ಸಲಹೆಗಾರರಾಗಿ ರಾಕೇಶ್ ಕಮ್ಮಾಜೆ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರೊ. ವಿ.ಬಿ.ಅರ್ತಿಕಜೆ ಮತ್ತು ಕಾನೂನು ಸಲಹೆಗಾರರಾಗಿ ಖ್ಯಾತ ನ್ಯಾಯವಾದಿ ಮಹೇಶ್‌ ಕಜೆರವರನ್ನು ನೇಮಕ‌ ಮಾಡಲಾಗಿದೆ. ಹಿರಿಯ ಪತ್ರಕರ್ತರಾಗಿ, ಹಿರಿಯ ಸಾಹಿತಿಗಳಾಗಿ, ವಿಶ್ರಾಂತ ಪ್ರಾಧ್ಯಾಪಕರಾಗಿ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸೇರಿದಂತೆ ಸಾರಸ್ವತ ಲೋಕದಲ್ಲಿ ಗುರುತಿಸಿಕೊಂಡಿರುವ ಪ್ರೊ.ವಿ.ಬಿ.ಅರ್ತಿಕಜೆಯವರನ್ನು ಗೌರವಾಧ್ಯಕ್ಷರಾಗಿ ಮತ್ತು ಪುತ್ತೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ...
ಬಂಟ್ವಾಳಸುದ್ದಿ

ಬಂಟ್ವಾಳ: ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಅರ್ಚಕ ರಮೇಶ್‌ ಮೂಲ್ಯ ನಿಧನ-ಕಹಳೆನ್ಯೂಸ್

 ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ (55)ಅವರು ಇಂದು ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ನಿನ್ನೆ ರಾತ್ರಿಯಿಂದ ಚಿಕಿತ್ಸೆ ಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಪತ್ನಿ ಮತ್ತು ಎರಡು ಗಂಡು ಒಂದು ಹೆಣ್ಣು ಹಾಗೂ...
ಬೆಳ್ತಂಗಡಿಶಿಕ್ಷಣಸುದ್ದಿ

ಬೆಳ್ತಂಗಡಿಯಲ್ಲಿ ‘ಮುಳಿಯ ಗಾನರಥ’ ಗ್ರ್ಯಾಂಡ್ ಫಿನಾಲೆ ; ಶ್ರುತಿ ಭಟ್ ಉಜಿರೆ, ಜಯಶ್ರೀ ಲಾಯಿಲ ಚಾಂಪಿಯನ್ಸ್‌ – ಕಹಳೆ ನ್ಯೂಸ್

ಬೆಳ್ತಂಗಡಿ : ಮುಳಿಯ ಜ್ಯುವೆಲ್ಸ್ ವತಿಯಿಂದ ಭಾನುವಾರ (ಅ.18) ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕರೋಕೆ ಗಾಯನ ಸ್ಪರ್ಧೆ ‘ಮುಳಿಯ ಗಾನರಥ’ ಗ್ರ್ಯಾಂಡ್‌ ಫಿನಾಲೆಯಲ್ಲಿ ಜ್ಯೂನಿಯರ್‌ ವಿಭಾಗದಲ್ಲಿ ಶ್ರುತಿ ಭಟ್‌ ಉಜಿರೆ ಹಾಗೂ ಸೀನಿಯರ್ ವಿಭಾಗದಲ್ಲಿ ಜಯಶ್ರೀ ಲಾಯಿಲ ಪ್ರಥಮ ಸ್ಥಾನ ಪಡೆದರು. ಜೂನಿಯರ್ ವಿಭಾಗದಲ್ಲಿ ವಿಭಾ ನಾಯ್ಕ್‌ ಗೇರುಕಟ್ಟೆ ದ್ವಿತೀಯ, ರಕ್ಷನ್ ಜೆ. ರಾವ್ ಕನ್ಯಾಡಿ- ತೃತೀಯ ಸ್ಥಾನ ಗೆದ್ದರು. ಸೀನಿಯರ್ ವಿಭಾಗದಲ್ಲಿ ಸೌಜನ್ಯಾ ಎಸ್‌. ಉಜಿರೆ ದ್ವಿತೀಯ...
ಪುತ್ತೂರು

ಪ್ರಥಮ ಚಿಕಿತ್ಸೆಯ ಸಂದರ್ಭದಲ್ಲಿ ಮೊಬೈಲ್ ಬಳಸಬಾರದು- ರೋ.ಕ್ಸೇವಿಯರ್ ಡಿಸೋಜಾ- ಕಹಳೆ ನ್ಯೂಸ್

ಪುತ್ತೂರು: ಅ.12 ಪ್ರಥಮ ಚಿಕಿತ್ಸೆ ಮಾಡುವ ಸಂದರ್ಭದಲ್ಲಿ ನಾವು ಮೊಬೈಲ್ ಬಳಸಬಾರದು. ಅಲ್ಲದೇ ಅಪಘಾತಗೊಂಡಿರುವ ವ್ಯಕ್ತಿಯ ಜೀವುಳಿಸುವ ಕಾರ್ಯವಾಗಬೇಕೆ ವಿನಃ ಅನ್ಯ ಕಾರ್ಯಗಳ ಬಗೆಗೆ ಅಲೋಚನೆಗಳು ಇರಬಾರದು ಎಂದು ಪುತ್ತೂರಿನ ರೋಟರಿ ಕ್ಲಬ್ ನ ಅಧ್ಯಕ್ಷ ರೋ.ಕ್ಸೇವಿಯರ್ ಡಿಸೋಜಾ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ಪ್ರಥಮ ಚಿಕಿತ್ಸಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಮನುಷ್ಯ ಎಷ್ಟೇ ಮುಂದುವರೆದರು ಕೂಡಾ ಎಂದೆಂದಿಗೂ ಮಾನವೀಯತೆಯನ್ನು ಮರೆಯಬಾರದು. ಯಾರಿಗಾದರು ಪ್ರಥಮ ಚಿಕಿತ್ಸೆಯ ಅವಶ್ಯಕತೆ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಯೋಗ ಶಿಕ್ಷಕ ಚಂದ್ರಶೇಖರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ ಏಕಾಗ್ರತೆ ಹೆಚ್ಚುವುದಲ್ಲದೆ ನಮ್ಮ ಮಾನಸಿಕ ಮತ್ತು ದೈಹಿಕ ಕ್ಷಮತೆ ಅಭಿವೃದ್ಧಿಯಾಗುತ್ತದೆ. ದೇಹದಲ್ಲಿರುವ ಸ್ನಾಯುಗಳು ಬಲವರ್ಧನೆಯಾಗಲು ಯೋಗ ಸಹಕಾರಿ. ಚಂಚಲ ಮನಸ್ಸನ್ನು ಪ್ರಯತ್ನಪೂರ್ವಕವಾಗಿ ಒಂದೆಡೆಗೆ ತರಲು ಯೋಗವನ್ನು ಪ್ರತಿಯೊಬ್ಬರು...
ಪುತ್ತೂರು

ವಿವೇಕಾನಂದ ಪದವಿ ಪೂರ್ವಕಾಲೇಜಿನಿಂದ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಸ್ಫರ್ಧೆಗಳ ಆಯೋಜನೆ-ಕಹಳೆ ನ್ಯೂಸ್

ಪುತ್ತೂರು: ಪಾಠಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ವಿದ್ಯಾರ್ಥಿಗಳ ಮನಸ್ಸು ಪ್ರಪುಲ್ಲಗೊಳ್ಳುತ್ತದೆ. ಆನ್‍ಲೈನ್ ಸ್ಫರ್ಧೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿಭಟ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ 2020-21 ನೇ ಸಾಲಿನ ಆನ್‍ಲೈನ್ ಸ್ಫರ್ಧೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರು, ಕೊರೊನಾದಿಂದಾಗಿ ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗಿದ್ದ...
ಪುತ್ತೂರು

ಸುಭಾಷ್ ಪಟ್ಟಾಜೆಗೆ ಡಾಕ್ಟರೇಟ್ ಪದವಿ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆಯನ್ನು ನಿರ್ವಹಿಸಿದ ಸುಭಾಷ್ ಪಟ್ಟಾಜೆ ಅವರು ಡಾ. ಮಹೇಶ್ವರಿ ಯು. ಅವರ ಮಾರ್ಗದರ್ಶನದಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯಕ್ಕೆ ಸಮರ್ಪಿಸಿದ ‘ಕನ್ನಡ ಮತ್ತು ಮಲಯಾಳಂ ಸಣ್ಣಕತೆಗಳಲ್ಲಿ ಪರಕೀಯ ಪ್ರಜ್ಞೆಯ ನೆಲೆಗಳು- ಒಂದು ತೌಲನಿಕ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರಕಿದೆ. ಚೆಡೆಕಲ್ಲು- ಪಟ್ಟಾಜೆ ನಿವಾಸಿ ವಿಘ್ನೇಶ್ವರ ಪಿ ಮತ್ತು ಸವಿತಾ ದಂಪತಿ ಪುತ್ರರಾಗಿರುವ ಇವರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2016 ರಿಂದ 2020...
ಬೆಳ್ತಂಗಡಿ

ನಾಳೆ ಗುರುವಾಯನಕೆರೆ ಶ್ರೀ ದೇವಿ ಕಾಂಪ್ಲೆಕ್ಸ್ ನಲ್ಲಿ ಶ್ರೀ ಮೂಕಾಂಬಿಕಾ ಫರ್ನಿಚರ‍್ಸ್ ನ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಶ್ರೀ ಮೂಕಾಂಬಿಕಾ ಫರ್ನಿಚರ್ಸ್‍ನ ಉದ್ಘಾಟನಾ ಸಮಾರಂಭ ನಾಳೆ ಗುರುವಾಯನಕೆರೆ ಸರಕಾರಿ ಹೈಸ್ಕೂಲ್ ಹತ್ತಿರದ ಶ್ರೀ ದೇವಿ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.     ಉದ್ಘಾಟನಾ ಸಮಾರಂಭವನ್ನು ಸಂತೆಕಟ್ಟೆ ಬೆಳ್ತಂಗಡಿಯ ಶ್ರೀ ಕೃಷ್ಣ ಗ್ಲಾಸ್ ಮತ್ತು ಪ್ಲೈವುಡ್‍ನ ಮಾಲಕರಾದ ಭಾಸ್ಕರ್ ರೈ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಗುರುವಾಯನಕೆರೆ ಶ್ರೀ ದೇವಿ ಕಾಂಪ್ಲೆಕ್ಸ್ ಕಟ್ಟಡದ ಮಾಲಕರಾದ ತಾರಾನಾಥ, ಗೇರುಕಟ್ಟೆ ಬದ್ರಿಯಾ ಕಾಂಪ್ಲಕ್ಸ್‍ನ ಮಾಲಕರಾದ ಉಸ್ಮಾನ್ ಹಾಜಿ, ಬೆಳ್ತಂಗಡಿ ಸೂಪರ್ ಬಜಾರ್‍ನ ಮಾಲಕರಾದ ಕೆ.ಎಮ್.ಅಬ್ದುಲ್...
1 683 684 685 686 687 708
Page 685 of 708
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ