Wednesday, March 26, 2025

ಪುತ್ತೂರು

ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನಲ್ಲಿ ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಆಕ್ರೋಶ ; ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ ನೀಡಿದ ವಿದ್ಯಾರ್ಥಿ ಶಕ್ತಿ – ಕಹಳೆ ನ್ಯೂಸ್

ಪುತ್ತೂರು: ಲಡಾಕ್‌ನ ಗಲ್ವಾನ್ ಕಣಿವೆಯಲ್ಲಿ ಚೀನಾದ ಜತೆಗಿನ ಗಡಿ ಸಂಘರ್ಷದಲ್ಲಿ ಕರ್ನಲ್ ಸೇರಿದಂತೆ 20 ಯೋಧರು ಹುತಾತ್ಮರಾದ ಬಳಿಕ ದೇಶದಲ್ಲಿ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂಬ ಒತ್ತಡ ಹೆಚ್ಚುತ್ತಿದೆ. ಪುತ್ತೂರಿನಲ್ಲೂ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಜೊತೆಗೆ ಜೂ. 18ರಂದು ಮುಸ್ಸಂಜೆ ಇಲ್ಲಿನ ಕಿಲ್ಲೆ ಮೈದಾನದಲ್ಲಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಎದುರು ಎಬಿವಿಪಿ ಕಾರ್ಯಕರ್ತರು ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಸಂಘಪರಿವಾರದ ಹಿರಿಯ ಕಾರ್ಯಕರ್ತ ಚಂದ್ರಶೇಖರ್ ಅವರು ಹುತಾತ್ಮ...
ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹುತಾತ್ಮ ಯೋಧರಿಗೆ ನಮನ ; ಹಣತೆ ಹಚ್ಚಿ, ತಾಯಿ ಭಾರತಮಾತೆಗೆ ಪುಷ್ಪಾರ್ಚನೆ – ಕಹಳೆ ನ್ಯೂಸ್

ಪುತ್ತೂರು: ಲಾಡಕ್‌ನ ಗಡಿಯಲ್ಲಿ ಹುತಾತ್ಮರದ ಯೋಧರಿಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಣತೆ ಹಚ್ಚಿ, ಭಾರತ ಮಾತೆಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಕಾರ್ಯಕ್ರಮ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಜೂ. 18ರಂದು ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ನಗರ ಮಂಡಲದ ಅಧ್ಯಕ್ಷ ಪಿ. ಜಿ. ಜಗನ್ನಿವಾಸ್ ರಾವ್ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್...
ದಕ್ಷಿಣ ಕನ್ನಡಪುತ್ತೂರು

” ಚೀನಾ ನರಿ ಬುದ್ದಿಗೆ ಭಾರತ ತಕ್ಕ ಉತ್ತರ ಕೊಡಲಿದೆ ” – ಪುತ್ತೂರಿನಲ್ಲಿ ಹುತಾತ್ಮ ಭಾರತೀಯ ಯೋಧರಿಗೆ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಶ್ರದ್ಧಾಂಜಲಿ ; ಪ್ರಧಾನಿ ನಡೆ ಸಮರ್ಥನೆ, ಶ್ಲಾಘನೆ – ಕಹಳೆ ನ್ಯೂಸ್

ಪುತ್ತೂರು : ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷನೆಯಲ್ಲಿ ಹುತಾತ್ಮರಾದ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿವರಿಗೆ ಬೆಂಬಲವಾಗಿ ನಾವು ಚೀನಾ ವಿರೋಧವನ್ನು ಕೇವಲ ಮಾತಿನಲ್ಲಿ ಹೇಳದೆ ಕೃತಿಯಲ್ಲೂ ಮಾಡಿ ತೋರಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕೆಂದು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹೇಳಿದರು. ಜೂ.೧೬ರಂದು ಗಡಿಯಲ್ಲಿ ಚೀನಾದೊಂದಿಗೆ ನಡೆದ ಘರ್ಷನೆಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಇಲ್ಲಿನ ಕಿಲ್ಲೆ ಮೈದಾನದ ಅಮರ್...
ಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸುಸೂತ್ರವಾಗಿ ನಡೆದ ದ್ವಿತೀಯ ಪಿಯುಸಿಯ ಆಂಗ್ಲಪರೀಕ್ಷೆ-ಕಹಳೆ ನ್ಯೂಸ್

ಪುತ್ತೂರು: ಕೋರೊನಾದಿಂದಾಗಿ ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾದ ಪರಿಣಾಮವಾಗಿ ಬಾಕಿ ಉಳಿದ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯೂ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸುಸೂತ್ರವಾಗಿ ನಡೆಯಿತು. ಒಟ್ಟು 836 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು ಅದರಲ್ಲಿ 18 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಸುಮಾರು 104 ವಿದ್ಯಾರ್ಥಿಗಳು ಅವರವರ ಜಿಲ್ಲೆಯಲ್ಲಿ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಸುಮಾರು 39 ಕೊಠಡಿಗಳಲ್ಲಿ ಪರೀಕ್ಷೆಯು ನಡೆದಿತ್ತು. ಅಲ್ಲದೇ ಎಲ್ಲಾ ತರಗತಿ ಕೊಠಡಿಗಳಿಗೆ, ಹೊರಾಂಗಣಗಳಿಗೆ ಸ್ಯಾನಿಟೈಸರ್‌ನ್ನು ಯಂತ್ರದ ಮೂಲಕ ಸಿಂಪಡಿಸಿ...
ದಕ್ಷಿಣ ಕನ್ನಡಪುತ್ತೂರು

ಚೀನಾ ಆಕ್ರಮಣಕ್ಕೆ ಹುತಾತ್ಮರಾದ ಯೋಧರಿಗೆ ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಅಮರ್ ಜವಾನ್ ಜ್ಯೋತಿ ಬಳಿ ಗೌರವ ಸಮರ್ಪಣೆ – ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ – ಕಹಳೆ ನ್ಯೂಸ್

ಪುತ್ತೂರು: ಭಾರತ ದೇಶದ ವೀರ ಸೈನಿಕರು ಸಾಯುವುದಿಲ್ಲ. ದೇಶದ ಗಡಿ ಭಾಗದಲ್ಲಿ ದೇಶಕ್ಕಾಗಿ ಹೋರಾಟ ಮಾಡುತ್ತಾರೆ. ಚೀನಾ ಪಡೆ ವಿರುದ್ಧ ನಡೆದ ಘರ್ಷಣೆಯಲ್ಲಿ ನಮ್ಮ ಸೈನಿಕರು ಬಲಿದಾನ ಆಗಿದ್ದಾರೆ. ಈ ನಿಟ್ಟಿನಲ್ಲಿ ನಾವು ಕೂಡಾ ಚೀನಾದ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ದೇಶದ ಒಳಗಿನ ಯೋಧರಾಗಿ ಹೋರಾಟ ಮಾಡೋಣ ಎಂದು ಹಿಂದೂ ಜಾಗರಣಾ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ ಅವರು ಹೇಳಿದರು. ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ...
ದಕ್ಷಿಣ ಕನ್ನಡಪುತ್ತೂರು

” ಚೀನಾದ ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ನೀಡುವ ನಿಜವಾದ ಶ್ರದ್ಧಾಂಜಲಿ ” – ವಿಶ್ವಹಿಂದೂ ಪರಿಷತ್ತು ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಬಜರಂಗದಳದ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಆಗ್ರಹ – ಕಹಳೆ ನ್ಯೂಸ್

ಪುತ್ತೂರು: ಭಾರತದ ಗಡಿಯಲ್ಲಿ ವಿನಃ ಕಾರಣ ತಗಾದೆ ತೆಗೆಯುತ್ತಿರುವ ಚೀನಾಕ್ಕೆ ನಮ್ಮ ಯೋಧರು ಪ್ರತ್ಯುತ್ತರ ನೀಡಿದ್ದಾರೆ. ಈ ಘರ್ಷಣೆಯಲ್ಲಿ ನಮ್ಮ 20 ಯೋಧರ ಬಲಿದಾನವಾಗಿದೆ. ಇಂತಹ ಸಂದರ್ಭದಲ್ಲಿ ನಾವು ಚೀನಾದ ಸರಕು, ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರು ಹೇಳಿದರು. ಅವರು ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಚೀನಾ ಸೇನಾಪಡೆ ವಿರುದ್ಧ ನಡೆದ ಸಂಘರ್ಷದ ವೇಳೆ...
ಉಡುಪಿಕಾಸರಗೋಡುಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಬಂಟ್ವಾಳಬೆಳ್ತಂಗಡಿವಾಣಿಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ : ದಾಸ್ತಾನು ಕೊರತೆಯಿಂದ ಅಡಿಕೆ ಬೆಲೆ ಉತ್ತುಂಗಕ್ಕೆ ; ಕೆಜಿಗೆ 350ರೂ ನಿಂದ 400ರೂ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆಯು ಕೆಜಿಗೆ 350, 400 ಆಗುವ ನಿರೀಕ್ಷೆ ಹೆಚ್ಚಾಗಿದೆ. ಲಾಕ್ ಡೌನ್ ನಿಂದ ಕಂಗೆಟ್ಟ ಕೃಷಿಕರ ಮುಖದಲ್ಲಿ‌ ಮಂದಹಾಸ ಮೂಡಿದೆ....
1 295 296 297
Page 297 of 297
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ