ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಆರೋಪಿಗಳ ಸಂಖ್ಯೆ 27ಕ್ಕೆ ಏರಿಕೆ-ಕಹಳೆ ನ್ಯೂಸ್
ಸುಳ್ಯ : ಬಿಜೆಪಿ ನಾಯಕ, ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇನ್ನೂ ನಾಲ್ವರು ಆರೋಪಿಗಳ ವಿರುದ್ಧ ಆರೋಪಪಟ್ಟಿ ದಾಖಲಿಸಿದೆ. ಇವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ಇದು ಈ ಪ್ರಕರಣದಲ್ಲಿ ಎನ್ಐಎ ಸಲ್ಲಿಸಿರುವ ದ್ವಿತೀಯ ಪೂರಕ ಆರೋಪ ಪಟ್ಟಿ ಆಗಿದ್ದು, ಇದರಲ್ಲಿ ಅಬ್ದುಲ್ ನಾಸಿರ್, ನೌಶಾದ್, ಅಬ್ದುಲ್ ರಹಮಾನ್ ಮತ್ತು ಅತೀಕ್ ಅಹ್ಮದ್ ಎಂಬವರನ್ನು ಹೆಸರಿಸಲಾಗಿದೆ. ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ...