ಸುಳ್ಯ : ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ಹೆಮ್ಮೆಯ ವಿದ್ಯಾರ್ಥಿ ಸುಶ್ಮಿತಾ ಆರ್ ಇವರು ಸೆಪ್ಟೆಂಬರ್ 2020ರ ಪರೀಕ್ಷೆಯ ಬಿ.ಕಾಂ ವಿಭಾಗದ ಐದು ಹಾಗೂ ಆರನೇ ಸೆಮಿಷ್ಟರ್ ನ ಫಿನಾನ್ಸಿಯಲ್ ಎಕೌಂಟಿಂಗ್ ವಿಷಯದಲ್ಲಿ 300 ಅಂಕಕ್ಕೆ 300 ಅಂಕಗಳನ್ನು ಪಡೆದು ಇಂದು ನಡೆಯುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆಯಲಿದ್ದಾರೆ....
ಸುಳ್ಯ : ಎಪ್ರಿಲ್ 7ರಂದು ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ನೀರಿನ ದುರಸ್ತಿ ನಡೆಸುತ್ತಿದ್ದ ವ್ಯಕ್ತಿಯೋರ್ವ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಕಲ್ಮಕಾರು ಗ್ರಾಮದ ಮೆಂಟಕಜೆ ನಿವಾಸಿ 85 ವರ್ಷದ ಕೃಷಿಕ ಶಿವರಾಮ ಗೌಡ ಎಂದು ಗುರುತಿಸಲಾಗಿದೆ. ಶಿವರಾಮ ಗೌಡ ಅವರು ಎಪ್ರಿಲ್ 7ರ ಬುಧವಾರದಂದು ಮನೆಯ ಸಮೀಪದ ಕಾಡಿನಿಂದ ತೋಟಕ್ಕೆ ಬರುವ ನೀರಿನ ಪೈಪ್ ಅನ್ನು ಸರಿಪಡಿಸಲು ತೆರಳಿದ್ದ ಸಂದರ್ಭದಲ್ಲಿ ಇವರ ಮೇಲೆ ಕಾಡಾನೆ...
ಸುಳ್ಯ : ಸುಳ್ಯದ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಸುಳ್ಯದ ಜಯನಗರ ನಿವಾಸಿ ಕೇಶವ ಎಂಬವರು ಜ್ಯೋತಿ ವೃತ್ತದ ಬಳಿ ತಮ್ಮ ಹುಂಡೈ ಕಾರನ್ನು ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಐವರ್ನಾಡು ನಿವಾಸಿ ವೀರನಾಥ ಎಂಬವರು ತನ್ನ ಆಲ್ಟೋ ಕಾರಿನಲ್ಲಿ ಸುಳ್ಯಕ್ಕೆ ಬರುತ್ತಿದ್ದರು. ಈ ಸಮಯದಲ್ಲಿ ಕಾರಿನ ಬ್ರೇಕ್ ಜಾಮ್ ಆಗಿ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡೈ ಕಾರಿಗೆ...
ಸುಳ್ಯ : ಬುಧವಾರ ರಾತ್ರಿ ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಂಗಡಿ ಮಾಲಕರು ಮತ್ತು ಪೋಲೀಸರು ಅಂಗಡಿ ಬಾಗಿಲು ತೆರೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುಮಾರು 50 ಸಾವಿರ ನಗದು ಹಾಗೂ 10 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನ ಕಳವಾಗಿರುವುದು ಬೆಳಕಿಗೆ ಬಂದಿದೆ. ಇನ್ನು...
ಸುಳ್ಯ : ಸಾವಿರಾರು ಬೀಡಿ ಕಾರ್ಮಿಕರಿಗೆ ಉದ್ಯೋಗವನ್ನು ನೀಡಿ ಬದುಕಿಗೆ ಆಸರೆಯಾಗಿದ್ದ ಸುಳ್ಯದ ಬೀಡಿ ಉದ್ಯಮಿ, 60ವರ್ಷದ ಲಯನ್ ಟಿ.ಪಿ.ಸುಲೈಮಾನ್ ಹೃದಯಾಘಾತದಿಂದ ಮಾರ್ಚ್ 3 ರಂದು ನಿಧನರಾಗಿದ್ದಾರೆ. ಇವರು ಕ್ರೀಡಾ ಪ್ರೋತ್ಸಾಹಕ ರಾಗಿದ್ದು, ಬಾಲ್ಯದಿಂದಲೇ ವಾಲಿಬಾಲ್ ಟೆನ್ನಿಸ್, ಶಟಲ್ ಬ್ಯಾಡ್ಮಿಂಟನ್ ಪಂದ್ಯಗಳ ಕ್ರೀಡಾಪಟುವಾಗಿದ್ದರು. ಸುಳ್ಯದಲ್ಲಿ ನಿರ್ಮಾಣಗೊಂಡಿರುವ ಟೆನ್ನಿಸ್ ಕ್ರೀಡಾಂಗಣದ ಸ್ಥಾಪಕರಲ್ಲಿ ಓರ್ವರಾಗಿದ್ದ ಇವರು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದ ಅಭಿರುಚಿ ಸುಳ್ಯಕ್ಕೆ ತೋರಿಸಿಕೊಟ್ಟವರು ಇವರಾಗಿದ್ದರು. ಕೊಡುಗೈ ದಾನಿಯಾಗಿದ್ದ ಇವರು ಸುಮಾರು...
ಸುಳ್ಯ : ಕೊವೀಡ್ ಮುನ್ನೆಚ್ಚರಿಕಾ ಕ್ರಮವಾಗಿ ಸಂಪಾಜೆ ಗೇಟ್ನಲ್ಲಿ ಹೊರ ರಾಜ್ಯದಿಂದ ಆಗಮಿಸುತ್ತಿರುವ ಪ್ರಯಾಣಿಕರ ತಪಾಸಣೆ ಕಾರ್ಯ ಬಿಗಿಗೊಂಡ ಕಾರಣ ಸಂಪಾಜೆ ಗೇಟ್ ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಕೇರಳದಲ್ಲಿ ಕೊವೀಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ತಪಾಸಣೆ ನಡೆಸುವಂತೆ ಕೊಡಗು ಜಿಲ್ಲಾಧಿಕಾರಿ ಆದೇಶ ನೀಡಿದ ಹಿನ್ನಲೆಯಲ್ಲಿ ನಿನ್ನೆ ಮುಂಜಾನೆಯಿಂದಲೇ ಸಂಪಾಜೆ ಗೇಟಿನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ. ಕೋವಿಡ್ ಪರೀಕ್ಷೆಯ ವರದಿ ತಂದ ಬಳಿಕ ಹೊರರಾಜ್ಯದ ವಾಹನಗಳಿಗೆ...
ಉಡುಪಿ : ಮಧ್ವಾಚಾರ್ಯರ ಕಾಲದಿಂದ ಕುಕ್ಕೆಯಲ್ಲಿ ಮಠದವರೇ ಪೂಜೆ ಮಾಡುತ್ತಾ ಬಂದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದೇವಾಲಯದ ಹಾಗೆ ಅಲ್ಲ. ಕುಕ್ಕೆಯ ಆಚರಣೆ ಸಂಪ್ರದಾಯಗಳು ಮಠದಂತೆ ಇದೆ. ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತುಕೊಂಡು ಹೋಗುವ ಉತ್ಸವ ನಡೆಯುವುದಿಲ್ಲ. ಆಚಾರ್ಯ ಮಧ್ವರ ಕಾಲದಿಂದ ಮಾಧ್ವರಿಂದ ಪೂಜೆ ನಡೆಯುತ್ತಿದೆ ಎಂದು ಉಡುಪಿ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಕುಕ್ಕೆಯಲ್ಲಿ ಈ...