Friday, April 18, 2025

ಸಂತಾಪ

ಬೆಂಗಳೂರುಸಂತಾಪಸಿನಿಮಾಸುದ್ದಿ

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದ ಜನಾರ್ಧನ್ ಅವರು ತಡರಾತ್ರಿ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಜನಾರ್ಧನ್ ಅವರ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 3-4 ಗಂಟೆ ವೇಳೆಗೆ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳಿಂದ...
ಜಿಲ್ಲೆಬೆಳಗಾವಿಸಂತಾಪಸುದ್ದಿ

ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು-ಕಹಳೆ ನ್ಯೂಸ್

ಬೆಳಗಾವಿ: ರಾಮನಗರದಲ್ಲಿರುವ ಧರ್ಮನಾಥ ಭವನದ ಬಳಿಯ ಚಂದ್ರಕಾಂತ ಕಾಗವಾಡ ಅವರ ಬಾಯ್ಸ್ ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ರಾಯಭಾಗ ತಾಲ್ಲೂಕಿನಲ್ಲಿ ಭಾವನಸೌಂದತ್ತಿ ಗ್ರಾಮದ ನಿವಾಸಿ ಪ್ರಜ್ವಲ್ ಕುಪ್ಪಾನಟ್ಟಿ (20) ಆತ್ಮಹತ್ಯೆಗೆ ಶರಣಾದವರು. ಸೋಮವಾರ ಕಾಲೇಜಿಗೆ ತೆರಳದೇ ಹಾಸ್ಟೆಲ್‌ನಲ್ಲಿಯೇ ಇದ್ದ ಪ್ರಜ್ವಲ್ ನೇಣು ಹಾಕಿಕೊಂಡಿರುವುದು ಸಂಜೆ ಬೆಳಕಿಗೆ ಬಂದಿದೆ. ಮಾಹಿತಿ‌ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ನಿಖರ...
ಜಿಲ್ಲೆಮೂಡಬಿದಿರೆಸಂತಾಪಸುದ್ದಿ

ಹೃದಯಾಘಾತದಿಂದ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಾ*ವು-ಕಹಳೆ ನ್ಯೂಸ್

ಮೂಡುಬಿದಿರೆ: ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಅಹರ್ನಿಶಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಮಾಜಮುಖಿ ಚಿಂತನೆಯುಳ್ಳ ಸಕ್ರಿಯ ಕಾರ್ಯಕರ್ತ ವಿಜೇಶ್ ಅವರು ತಡ ರಾತ್ರಿ ಕೊನೆಯುಸಿರೆಳೆದಿದ್ದಾರೆ....
ಜಿಲ್ಲೆಮೂಡಬಿದಿರೆಸಂತಾಪಸುದ್ದಿ

ಸ್ಕೂಟಿಗೆ ಕಾರು ಢಿಕ್ಕಿ: ಶಿಕ್ಷಕಿ ಸಾವು-ಕಹಳೆ ನ್ಯೂಸ್

ಮೂಡುಬಿದಿರೆ: ಶಿರ್ತಾಡಿ ಸೇತುವೆ ಬಳಿ ಶುಕ್ರವಾರ ಸಂಜೆ ಕಾರೊಂದು ಆಯಕ್ಟಿವಾಕ್ಕೆ ಢಿಕ್ಕಿ ಹೊಡೆದು ಸವಾರೆ, ಶಿರ್ತಾಡಿ ಹೋಲಿ ಏಂಜೆಲ್ಸ್ ಶಾಲೆಯ ಶಿಕ್ಷಕಿ, ಮೂಡುಬಿದಿರೆ ನಾಗರಕಟ್ಟೆ ನಿವಾಸಿ ಸುಜಯಾ ಭಂಡಾರಿ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಸುಜಯಾ ಅವರನ್ನು ಮಂಗಳೂರು ಆಸ್ಪತ್ತೆಗೆ ಸಾಗಿಸಲಾಯಿತಾದರೂ ಅಲ್ಲಿ ಮೃತಪಟ್ಟರು. ಅವರಿಗೆ ಅವಳಿ ಮಕ್ಕಳಿದ್ದು, ಪತಿ ವಿದೇಶದಲ್ಲಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸಂತಾಪಸುದ್ದಿ

ಬೆಂಗಳೂರು: ಯುವತಿ ಜತೆ ಲಿವ್ ಇನ್​ನಲ್ಲಿದ್ದ ಉತ್ತರ ಪ್ರದೇಶದ ಯುವಕ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಬೆಂಗಳೂರು ಮಾರ್ಚ್ 6: ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್‌ಎನ್‌ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ನಡೆದಿರುವುದು ತಿಳಿದುಬಂದಿದೆ. ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ. ಮಾರ್ಚ್ 4ರ ನಸುಕಿನಲ್ಲಿ ಮಯಾಂಕ್ ರಜನಿ ಅಪಾರ್ಟ್ಮೆಂಟ್​ನ 12ನೇ ಮಾಡಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಸಾವು! ಒರ್ವನ ಸ್ಥಿತಿ ಗಂಭೀರ-ಕಹಳೆ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ. ತಂದೆ-ಮಗ ಸಹಿತ ಮೃತರನ್ನು ಪೈವಳಿಕೆ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ಅವರ ಪುತ್ರ ವರುಣ್ ಮತ್ತು ಕಿಶನ್ ಎಂದು ಗುರುತಿಸಲಾಗಿದೆ. ರತ್ನಂ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು...
ಜಿಲ್ಲೆಬೆಳಗಾವಿಸಂತಾಪಸುದ್ದಿ

ಕಾಗವಾಡದ ಕಾಂಗ್ರೆಸ್​ ಶಾಸಕ ರಾಜು ಕಾಗೆ ಹಿರಿಯ ಪುತ್ರಿ ಅನಾರೋಗ್ಯದಿಂದ ನಿಧನ-ಕಹಳೆ ನ್ಯೂಸ್

ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ (37) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ಮಾ.01) ಕೊನೆಯುಸಿರೆಳೆದಿದ್ದಾರೆ. ಕೃತಿಕಾ ಅವರು ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಏರುಪೇರು ಉಂಟಾದ್ದರಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಿದೇ ಕೃತಿಕಾ ಮೃತಪಟ್ಟಿದ್ದಾರೆ. ಅವರ ಸ್ವಗ್ರಾಮವಾದ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಉಪ್ಪಿನಂಗಡಿ: ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ-ಕಹಳೆ ನ್ಯೂಸ್

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರಿಯಡ್ಕದ ಕಿಂಡೋವು ದರ್ಖಾಸ್ ಮನೆ ನಿವಾಸಿ ಜಿನ್ನಪ್ಪ ಗೌಡರ ಪುತ್ರ ಶ್ರೀನಿವಾಸ (28) ಎಂಬುವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಕಟ್ಟಡ ನಿರ್ಮಾಣ ಕೆಲಸಕ್ಕೆ ಹೋಗುತ್ತಿದ್ದ ಶ್ರೀನಿವಾಸ, ಕೆಲ ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದು, ಫೆ. 24ರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಬೆಳಿಗ್ಗೆ ತೋಟದ ಕೆರೆಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ....
1 2 3 26
Page 1 of 26
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ