Tuesday, April 1, 2025

ಸಂತಾಪ

ಪುತ್ತೂರುರಾಜ್ಯಸಂತಾಪಸುದ್ದಿ

ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ- ಕಹಳೆ ನ್ಯೂಸ್

ಕರಾವಳಿಯ ವಾಜಪೇಯ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷದ ಹಿರಿಯ ನೇತಾರ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. Video : " ಬಿಜೆಪಿಯ ಭೀಷ್ಮ " ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ ನಿಧನ ; ಗಣ್ಯರಿಂದ ಸಂತಾಪ ‘ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ. ರಾಮ ಭಟ್ ಜಿ ಅವರಂತಹ ದಿಗ್ಗಜರಿಗೆ ಒಂದು ವಿಶೇಷ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಬಿಜೆಪಿ ಧುರೀಣ ರಾಮ್ ಭಟ್ ನಿಧನ ; ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಅಂಗಾರ, ಶಾಸಕರಿಂದ ಅಂತಿಮ ದರ್ಶನ – ನಾಳೆ ಬೆಳಗ್ಗೆ ಪುತ್ತೂರು ವರ್ತಕರ ಸಂಘದಿಂದ ಗೌರವಾರ್ಥ ಸ್ವಯಂ ಪ್ರೇರಿತ ಬಂದ್ – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನ ಮಾಜಿ ಶಾಸಕ, ಬಿಜೆಪಿ ಭೀಷ್ಮ ರಾಮ್ ಭಟ್ ಅವರು ಇಂದು ಇಹಲೋಕ ತ್ಯಜಿಸಿದ್ದು ಸುದ್ದಿ ತಿಳಿದ ತಕ್ಷಣ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಸಚಿವ ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ ಅಂತಿಮ ದರ್ಶನ ಪಡೆದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಜನಪ್ರತಿನಿದಿಗಳು ನಾಳೆ ವರ್ತಕರ ಸಂಘದಿಂದ ಕೆಲಗಂಟೆಗಳ ಕಾಲ ಸ್ವಯಂಪ್ರೇರಿತ ಬಂದ್ ಗೆ ನಿರ್ಧರಿಸಿದ್ದು ಪಾರ್ಥೀವ ಶರೀರವನ್ನು...
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.  ಆದರೆ ಇದೀಗ...
ಸಂತಾಪ

ಗದಗ : ಹಾಲಕೇರಿ ಮಠದ ಪೀಠಾಧಿಪತಿ ಡಾ ಅಭಿನವ ಅನ್ನದಾನೇಶ್ವರ ಮಹಾಸ್ವಾಮಿಜಿ ಲಿಂಗೈಕ್ಯ – ಕಹಳೆ ನ್ಯೂಸ್

ಗದಗ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಹಾಲಕೇರಿ ಮಠದ ಪೀಠಾಧಿಪತಿ, ಶ್ರೀ ಡಾ.ಸಂಗನಬಸವ (ಅಭಿನವ ಅನ್ನದಾನೇಶ್ವರ) ಮಹಾ ಸ್ವಾಮಿಜಿ ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮಿಜಿಯನ್ನು ಬೆಂಗಳೂರು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗದಗ ಜಿಲ್ಲೆಯ ಹಾಲಕೇರಿ ಶ್ರೀ ಅನ್ನದಾನೇಶ್ವರ ಮಠದ ಅಭಿನವ ಅನ್ನದಾನೇಶ್ವರ ಪರಮಪೂಜ್ಯ ಶ್ರೀ ಡಾ.ಸಂಗನಬಸವ ಸ್ವಾಮೀಜಿಗಳು 128 ಶಾಖಾ ಮಠ, 60ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅವರು ಸಮಾಜಕ್ಕೆ ಅವಿರತ ಸೇವೆ ಸಲ್ಲಿಸಿದ್ದರು. ಇಂದು ಮುಖ್ಯಮಂತ್ರಿಗಳಾದ...
ಸಂತಾಪ

ಮಂಗಳೂರಿನ ‘ಐಡಿಯಲ್‌ ಐಸ್‌ಕ್ರೀಂ’ ಸಂಸ್ಥಾಪಕ ಪ್ರಭಾಕರ ಕಾಮತ್‌ ನಿಧನ – ಕಹಳೆ ನ್ಯೂಸ್

ಮಂಗಳೂರು, ನ 06 : ಕರಾವಳಿಯಾದ್ಯಂತ ಹೆಸರುವಾಸಿಯಾಗಿರುವ ಐಡಿಯಲ್‌ ಐಸ್‌ಕ್ರೀಂ ಸಂಸ್ಥೆಯ ಸ್ಥಾಪಕ, ಉದ್ಯಮಿ ಎಸ್‌. ಪ್ರಭಾಕರ ಕಾಮತ್‌ (79) ನ.06 ಶನಿವಾರ ಮುಂಜಾನೆ 3.30 ಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅ.28 ರಂದುಗುರುವಾರ ರಾತ್ರಿ 8.45ರ ಸುಮಾರಿಗೆ ಪ್ರಭಾಕರ ಕಾಮತ್‌ ಅವರು ಬಿಜೈ ಕಾಪಿಕಾಡ್‌ನ‌ 1ನೇ ಅಡ್ಡರಸ್ತೆಯಲ್ಲಿ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕೆಎಸ್‌ಆರ್‌ಟಿಸಿ ಕಡೆಯಿಂದ ಬಿಜೈ ಕಾಪಿಕಾಡ್‌ ಕಡೆಗೆ ಅತಿ ವೇಗದಿಂದ ಬಂದ ಸ್ಕೂಟರ್‌ ಢಿಕ್ಕಿ...
ಪುತ್ತೂರುಸಂತಾಪ

ಇಹಲೋಕ ತ್ಯಜಿಸಿದ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ನ ಪ್ರಥಮಾಧ್ಯಕ್ಷ ಅಲಿಮಾರ ವಿಶ್ವನಾಥ ರೈ- ಕಹಳೆ ನ್ಯೂಸ್

ಪುತ್ತೂರು : 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್‍ನ ಪ್ರಥಮ ಅಧ್ಯಕ್ಷ, ಕೋಡಿಂಬಾಡಿಯ ಮಾಜಿ ಮಂಡಲ ಪಂಚಾಯತ್ ಸದಸ್ಯ ಅಲಿಮಾರ ವಿಶ್ವನಾಥ ರೈ ಅ.21ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅಲಿಮಾರ ಕರಿಯಪ್ಪ ರೈ-ಅಬ್ಬಕ್ಕೆ ದಂಪತಿಯ ಮಗ ಅಲಿಮಾರ ವಿಶ್ವನಾಥ ರೈಯವರು ಧಾರ್ಮಿಕ, ರಾಜಕೀಯ, ಸಾಮಾಜಿಕ ಮತ್ತು ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಊರಿನ ಅಭಿವೃದ್ಧಿಗೆ ಶ್ರಮಿಸಿದ್ದವರು. ಕೋಡಿಂಬಾಡಿ ಮಂಡಲ ಪಂಚಾಯತ್ ಸದಸ್ಯರಾಗಿ ರಾಜಕೀಯ ಪ್ರವೇಶ ಮಾಡಿದ್ದ ವಿಶ್ವನಾಥ ರೈ ಯವರು 34ನೇ...
ಸಂತಾಪ

ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನ – ಕಂಬನಿ ಮಿಡಿದ ಚಿತ್ರರಂಗ – ಕಹಳೆ ನ್ಯೂಸ್

ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯ ಅವರ ಪುತ್ರಿಯ ಮನೆಯಲ್ಲಿ ನಿಧನರಾಗಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿ ಇಂದು ಬೆಳಿಗ್ಗೆ ೮ ಗಂಟೆಗೆ ಅಂತ್ಯಸ0ಸ್ಕಾರ ನಡೆದಿದೆ. ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು. ಮೂಲತಃ ಇಂಗ್ಲೀಷ್ ಪ್ರೊಫೆಸರ್ ಆಗಿದ್ದ ಜಿ.ಕೆ. ಗೋವಿಂದರಾವ್ ಕನ್ನಡದ ಮೇಲೆ ಅಪಾರ ಹಿಡಿತ ಹೊಂದಿದ್ದರು. ಕನ್ನಡದಲ್ಲಿ ಹಲವು ಕೃತಿಗಳನ್ನು ರಚಿಸಿದ್ದ ಅವರು ಬಹುಮುಖ ಪ್ರತಿಭೆ. ಸಾಹಿತ್ಯದ ಜೊತೆಜೊತೆಗೆ...
ರಾಷ್ಟ್ರೀಯಸಂತಾಪಸುದ್ದಿ

ಅಧಿಕಾರಕ್ಕಿಂತ ಶ್ರೀರಾಮ ಮಂದಿರವೇ ಮುಖ್ಯ ಎಂದು ನಿರೂಪಿಸಿದ್ದ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಜೀವ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದ್ದಕ್ಕಿದ್ದಂತೆ ದೇಹ ಊದಿಕೊಂಡು, ಪ್ರಜ್ಞಾ ಹೀನರಾಗಿದ್ದ ಹಿನ್ನೆಲೆಯಲ್ಲಿ ಜುಲೈ 4ರಂದು ಕಲ್ಯಾಣ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲ್ಯಾಣ್...
1 20 21 22 23 24 26
Page 22 of 26
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ