Tuesday, April 1, 2025

ರಾಜ್ಯ

ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕರೊನಾಗೆ ಆಯುರ್ವೇದ ಔಷಧ ಪ್ರಯೋಗ; ಬಿಎಂಸಿಆರ್​ಐ ನೋಟಿಸ್ ವಿಚಾರಕ್ಕೆ ಡಾ.ಗಿರಿಧರ ಕಜೆ ಹೇಳಿದ್ದೇನು? – ಕಹಳೆ ನ್ಯೂಸ್

ಬೆಂಗಳೂರು: ಕರೊನಾ ರೋಗಿಗಳ ಮೇಲೆ ಆಯುರ್ವೇದ ಔಷಧ ಪ್ರಯೋಗ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನೋಟಿಸೊಂದು ಹರಿದಾಡುತ್ತಿದೆ. ಇದು ಹಲವು ಗೊಂದಲಗಳಿಗೂ ಕಾರಣವಾಗಿತ್ತು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್​ಐ) ಎಥಿಕಲ್ ಕಮಿಟಿ ಹೆಸರಲ್ಲಿರುವ ಲೆಟರ್​ ಹೆಡ್​ನಲ್ಲಿ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆಯವರಿಗೆ ನೋಟಿಸ್ ಎಂದು ಬರೆಯಲಾಗಿದೆ. ಇದರಲ್ಲಿ ಆಯುರ್ವೇದ ಔಷಧದ ಕ್ಲಿನಿಕಲ್​ ಟ್ರಯಲ್​ ಇನ್ನೂ ಜಾರಿಯಲ್ಲಿರುವಾಗಲೇ ಯಶಸ್ವಿಯಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸಿದ್ದೀರಿ ಎಂದು...
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ಕಾಸರಗೋಡು – ದ.ಕ. ಜಿಲ್ಲೆ ಗಡಿ ತೆರವಿಗೆ ದ.ಕ. ಜಿಲ್ಲಾಡಳಿತದ ಅಭ್ಯಂತರವಿಲ್ಲ ; ಕಾಸರಗೋಡು ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. – ಕಹಳೆ ನ್ಯೂಸ್

ಮಂಗಳೂರು, ಆ. 03: ಅಂತರ ರಾಜ್ಯ ಸಂಚಾರ ವಿಚಾರಕ್ಕೆ ಸಂಬಂಧಿಸಿದಂತೆ ನೂತನವಾಗಿ ಅಧಿಕಾರ ಸ್ವೀಕರಿಸಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರತಿಕ್ರಿಯೆ ನೀಡಿದ್ದು, ಸರಕಾರ ಆದೇಶ ನೀಡಿದ್ದಲ್ಲಿ ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ.   ಆಗಸ್ಟ್ 5ರಿಂದ ಅಂತರ ರಾಜ್ಯ ಸಂಚಾರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದರೆ, ಕರ್ನಾಟಕ ಹಾಗೂ ಕೇರಳ ಸರಕಾರದ ಆದೇಶದಂತೆ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು. ಕಾಸರಗೋಡಿನಿಂದ ಹೆಚ್ಚಿನ...
ಉಡುಪಿರಾಜ್ಯಸುದ್ದಿ

ಶ್ರೀಕೃಷ್ಣನ ಅನುಗ್ರಹದಿಂದ ಕೊರೊನಾ ಗೆದ್ದುಬಂದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ; ಶ್ರೀಗಳು ಫೀಟ್ ಆಂಡ್ ಫೈನ್ – ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ – ಕಹಳೆ ನ್ಯೂಸ್

ಉಡುಪಿ, ಆ. 02 : ಕೊರೊನಾ ಸೋಂಕು ದೃಢಪಟ್ಟಿದ್ದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು 12 ದಿನಗಳ ಚಿಕಿತ್ಸೆ ಪಡೆದ ಬಳಿಕ ಆಗಸ್ಟ್ 1 ರ ಶನಿವಾರ ಇಲ್ಲಿನ ಕೆಎಂಸಿ ಮಣಿಪಾಲದಿಂದ ಬಿಡುಗಡೆ ಆಗಿದ್ದಾರೆ. ಕೊರೊನಾ ಸೋಂಕು ಲಕ್ಷಣ ಕಾರಣ ಜುಲೈ 21 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆಯಲ್ಲಿಯೂ ಅವರು ತಮ್ಮ ನಿತ್ಯ ಪೂಜೆಗಳನ್ನು ಮಾಡುತ್ತಿದ್ದರು. ತಮ್ಮ ವಾರ್ಷಿಕ ಚಾರ್ತುಮಾಸ ವ್ರತವನ್ನು ಆಸ್ಪತ್ರೆಯಲ್ಲಿಯೂ ಮಾಡುತ್ತಿದ್ದರು. ಈಗ ಅವರು...
ರಾಜ್ಯಶಿಕ್ಷಣ

ಆಗಸ್ಟ್ ಮೊದಲ ವಾರ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ ಸಾಧ್ಯತೆ-ಕಹಳೆ ನ್ಯೂಸ್

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ಯಶಸ್ವಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಇಂತಹ ಪರೀಕ್ಷೆ ಮೌಲ್ಯಮಾಪನ ಕೂಡ ಭರದಿಂದ ಸಾಗಿದೆ. ಹೀಗಾಗಿ ಎಸ್ ಎಸ್ ಎಲ್ ಸಿ ಯ ಫಲಿತಾಂಶ ಆಗಸ್ಟ್ 6 ಇಲ್ಲವೇ 8ರಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಇಂದು ರಾಜ್ಯಾಧ್ಯಂತ ತಾಂತ್ರಿಕ ಕೋರ್ಸ್ ಗಳ ಆಯ್ಕೆ ಸಂಬಂಧ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯುತ್ತಿದೆ. ಎಸ್ ಎಸ್ ಎಲ್ ಸಿ ನಂತ್ರದ ವಿವಿಧ...
ರಾಜ್ಯಸುದ್ದಿ

ತೆಂಗಿನ ಎಣ್ಣೆಯಿಂದ ಸ್ಯಾನಿಟೈಸರ್ ಸಂಶೋಧಿಸಿದ ವಿದ್ಯಾರ್ಥಿ ; ಜಗತ್ತನೇ ನಡುಗಿಸುತ್ತಿರೋ ಕೊರೊನಾ ವೈರಸ್ ತಡೆಗಟ್ಟೋಕೆ ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿದೆ ‘ಕಲ್ಪಶುದ್ಧಿ’ – ಕಹಳೆ ನ್ಯೂಸ್

ತುಮಕೂರು: ಕೊರೊನಾ ತಡೆಗೆ ಈಗ ಸ್ಯಾನಿಟೈಸರ್ ಕೂಡ ಒಂದು ಮದ್ದಾಗಿದೆ. ಹೀಗಾಗಿ ಕಲ್ಪತರು ನಾಡಿನ ವಿದ್ಯಾರ್ಥಿಯೋರ್ವ ತೆಂಗಿನ ಎಣ್ಣೆ ಬಳಸಿಕೊಂಡು ಸ್ಯಾನಿಟೈಸರ್ ಸಂಶೋಧಿಸಿದ್ದಾರೆ. ಜಗತ್ತನೇ ನಡುಗಿಸುತ್ತಿರೋ ಕೊರೊನಾ ವೈರಸ್ ತಡೆಗಟ್ಟೋಕೆ ಮತ್ತೊಂದು ರೀತಿಯ ಸ್ಯಾನಿಟೇಸರ್ ಹೊರತರೋಕೆ ವಿದ್ಯಾರ್ಥಿ ಕಾಯುತ್ತಿದ್ದಾರೆ. ತುಮಕೂರು ನಗರದ ಎಸ್‍ಐಟಿ ಕಾಲೇಜಿನ ಎಂಜಿನಿಯರಿಂಗ್ ಬಯೋಕೆಮಿಕಲ್ ವಿಭಾಗದ ವಿಧ್ಯಾರ್ಥಿ ಎಚ್.ಎನ್.ಚಿದಾನಂದ್ ಹೊಸ ಸ್ಯಾನಿಟೈಸರ್ ಸಂಶೋಧಿಸಿದ್ದು, ಆ ಮೂಲಕ ಗಮನ ಸೆಳೆದಿದ್ದಾರೆ. ಅಂದುಕೊಂಡಂತೆ ಆದರೆ ಕೆಲವೇ ದಿನಗಳಲ್ಲಿ ‘ಕಲ್ಪಶುದ್ಧಿ’ ಎಂಬ ಹೆಸರಿನ...
ಆರೋಗ್ಯರಾಜ್ಯರಾಷ್ಟ್ರೀಯಸುದ್ದಿ

ಅನ್ ಲಾಕ್ 3.0 : ಆ. 5ರಿಂದ ರಾತ್ರಿ ಕರ್ಫ್ಯೂ ತೆರವು ; ಜಿಮ್, ಯೋಗ ಕೇಂದ್ರಕ್ಕೆ ಅನುಮತಿ – ಕಹಳೆ ನ್ಯೂಸ್

ನವದೆಹಲಿ, ಜು 30 : ಕೊರೊನಾದ ಗಣನೀಯ ಏರಿಕೆಯ ನಡುವೆ ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 5ರಿಂದ ರಾತ್ರಿ ಕರ್ಫ್ಯೂ ತೆರವುಗೊಳಿಸಿ ,ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಈ ಮಾರ್ಗಸೂಚಿ ಪ್ರಕಾರ ಶಾಲಾ- ಕಾಲೇಜು , ಕೋಚಿಂಗ್ ಸೆಂಟರ್ ಗಳು, ಮೆಟ್ರೋ , ಸಿನಿಮಾ ಮಂದಿರಗಳನ್ನು ತೆರೆಯಲು ಆಗಸ್ಟ್ 31ರ ವರೆಗೆ ಅವಕಾಶ ನೀಡಿಲ್ಲ.   ಕಂಟೈನ್​ಮೆಂಟ್​ ಜೋನ್​ಗಳಲ್ಲಿ ಆ.31ರವರೆಗೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ದ.ಕ. ಜಿಲ್ಲೆಯಲ್ಲಿ ಮತ್ತೆ 208 ಮಂದಿಯಲ್ಲಿ ಸೋಂಕು- ರಾಜ್ಯದಲ್ಲಿ 5,503 ಹೊಸ ಕೊರೊನಾ ಪ್ರಕರಣ ಪತ್ತೆ- ಕಹಳೆ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಮತ್ತೆ 208 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 5311ಕ್ಕೆ ಏರಿಕೆಯಾಗಿದೆ.ಸದ್ಯ ಜಿಲ್ಲೆಯಲ್ಲಿ 2715 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2556 ಮಂದಿ ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಬುಧವಾರವೂ ಕೂಡ 118 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂದಿದ್ದಾರೆ. 65 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 73 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 12 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದ್ದು, 58 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಓರ್ವ ಕೊರೊನಾ ರೋಗಿಗೆ 5 ಲಕ್ಷ ಬಿಲ್ ; ಖಾಸಗಿ ಆಸ್ಪತ್ರೆ ವಿರುದ್ಧ ಸುಧಾಕರ್ ಕೆಂಡಾಮಂಡಲ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ರೋಗಿಗೆ 5 ಲಕ್ಷ ರೂ. ಬಿಲ್‌ ಮಾಡಿದ ಖಾಸಗಿ ಆಸ್ಪತ್ರೆಯ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕೆಂಡಾಮಂಡಲವಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳ ಹಣ ಲೂಟಿ ಮಾಡುವ ಕೆಲಸ ನಡೆಯುತ್ತಲೇ ಇದೆ. ಕೊರೊನಾ ರೋಗವನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಆಸ್ಪತ್ರೆಗಳು ದುಡ್ಡು ಮಾಡುವ ದಂಧೆಗೆ ಇಳಿದಿವೆ. ಸರ್ಕಾರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದರ ನಿಗದಿ ಮಾಡಿದ್ದರೂ ಆಸ್ಪತ್ರೆಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಈಗ...
1 168 169 170 171 172 174
Page 170 of 174
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ