Saturday, April 12, 2025

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು, ಆ 09 : ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.   ಕೊರೊನಾ ದೃಢಪಟ್ಟಿರುವ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ...
ರಾಜಕೀಯರಾಷ್ಟ್ರೀಯಸುದ್ದಿ

ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ ; ಆದರೆ, ಹಿಂದೂವಾಗಿ ಮಸೀದಿ ಉದ್ಘಾಟನೆಗೆ ಹೋಗಲ್ಲ ಎಂದ ಸಿಎಂ ಯೋಗಿ ಆದಿತ್ಯನಾಥ್ – ಕಹಳೆ ನ್ಯೂಸ್

ಲಖ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ. ಆದರೆ, ಹಿಂದೂವಾಗಿ ಮಸೀದಿ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಮಸೀದಿಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲು ನನಗೆ ಆಹ್ವಾನ ನೀಡುತ್ತಾರೆ ಎಂದು ಅನಿಸುವುದಿಲ್ಲ. ಈ ವಿಚಾರದಲ್ಲಿ ನನಗೆ ಯಾವುದೇ ಗೊಂದಲವಿಲ್ಲ. ನಾನು ಮುಖ್ಯಮಂತ್ರಿಯಾಗಿ ತಾರತಮ್ಯ ಮಾಡಲಾರೆ. ಆದರೆ ಹಿಂದೂವಾಗಿ ಮಸೀದಿ...
ಕಾಸರಗೋಡುರಾಷ್ಟ್ರೀಯಸುದ್ದಿ

ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿದ ದುಬೈ – ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ ; ಸಾವು – ನೋವು – ಮಂಗಳೂರು ವಿಮಾನ ದುರಂತ ಮಾದರಿಯ ಘಟನೆ – ಕಹಳೆ ನ್ಯೂಸ್

ಕೊಚ್ಚಿ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದೆ. ಸಂಜೆ 7:45 ಕ್ಕೆ ಈ ಘಟನೆ ನಡೆದಿದ್ದು, 172 ಪ್ರಯಾಣಿಕರಿದ್ದ ವಿಮಾನ ರನ್ ವೇ ಯಿಂದ ಕಣಿವೆge ಜಾರಿದ ಕಣಿಪರಿಣಾಮ ಇಬ್ಭಾಗವಾಗಿದೆ. ಮಂಗಳೂರಿನಲ್ಲಿ ನಡೆದಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಪತನದ ಮಾದರಿಯಲ್ಲಿ ಈ ಘಟನೆ ನಡೆದಿದೆ....
ರಾಷ್ಟ್ರೀಯಸುದ್ದಿ

ನಾಳೆ ಭಾರತಕ್ಕೆ ಐತಿಹಾಸಿಕ ದಿನ ; ಅಯೋಧ್ಯೆಯಲ್ಲಿ 3 ಗಂಟೆ ಇರಲಿದ್ದಾರೆ ಮೋದಿ – ಕಹಳೆ ನ್ಯೂಸ್

ಲಖನೌ, ಆ 04: ನಾಳೆ ಭಾರತಕ್ಕೆ ಐತಿಹಾಸಿಕ ದಿನವಾಗಿದ್ದು, ಹಲವಾರು ವರ್ಷಗಳ ಕನಸು ನನಸಾಗುತ್ತಿದೆ. ನಾಳೆ ನಡೆಯುವ ರಾಮ ಮಂದಿರ ಭೂಮಿ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಅವರು 3 ಗಂಟೆಗಳ ಕಾಲ ಇರಲಿದ್ದಾರೆ ಎಂದು ತಿಳಿದುಬಂದಿದೆ.   ಇನ್ನು ಮೋದಿ ನಾಳೆ ಬೆಳಗ್ಗೆ ವಿಮಾನದಲ್ಲಿ ಆಗಮಿಸಲಿದ್ದು, ಅವರ ಜತೆಗೆ ಕೆಲವು ಹಿರಿಯ ನಾಯಕರೂ ಪಾಲ್ಗೊಳ್ಳಲಿದ್ದಾರೆ. ರಾಮ ಜನ್ಮಭೂಮಿಯ ತೀರ್ಥ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ 175 ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ಅದರಲ್ಲಿ 135...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ‘ಮನೆಯಲ್ಲಿಯೇ ರಾಮನ ಪೂಜೆ ಮಾಡಿ, ಪಟಾಕಿ ಸಿಡಿಸದಿರಿ, ಸಂಭ್ರಮಾಚರಣೆ ಬೇಡ’ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮನವಿ – ಕಹಳೆ ನ್ಯೂಸ್

ಮಂಗಳೂರು, ಆ. 04  : ''ಬುಧವಾರ ಆಗಸ್ಟ್‌ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿಯೇ ಪೂಜೆ ಮಾಡಿ, ಬೀದಿಯಲ್ಲಿ ಪೂಜೆ ಮಾಡಿ, ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವುದನ್ನು ಮಾಡಬೇಡಿ. ಅಯೋಧ್ಯೆಯಂತಹ ಸೂಕ್ಷ್ಮ ವಿಚಾರದಲ್ಲಿ ಯಾರ ಭಾವನೆಗೂ ಧಕ್ಕೆ ಉಂಟಾಗಬಾರದು'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.   ''ಎಲ್ಲಾ ಕಾರ್ಯಕರ್ತರು ಜವಾಬ್ದಾರಿಯಿಂದ ವರ್ತಿಸಬೇಕು. ಗುಂಪು ಸೇರಿ ಸಂಭ್ರಮಾಚರಣೆ ಮಾಡಬೇಡಿ, ಪ್ರತಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರಿ, ಕಾವೇರಿ ನಿವಾಸದ ಆರು ಮಂದಿ ಸಿಬ್ಬಂದಿಗಳಿಗೂ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು, ಆ 03 : ಸಿಎಂ ಬಿಎಸ್‌‌ವೈ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ, ಸಿಎಂ ಅವರ ಕಾವೇರಿ ಮತ್ತು ಕೃಷ್ಣಾ ನಿವಾಸಗಳ ಎಲ್ಲಾ ಸಿಬ್ಬಂದಿಗಳಿಗೂ ಕೊರೊನಾ ತಪಾಸಣೆ ಮಾಡಲಾಗುತ್ತಿದ್ದು, ಕಾವೇರಿ ನಿವಾಸದ ಆರು ಮಂದಿಗೆ ಕೊರೊನಾ ಸೋಂಕು ಖಚಿತವಾಗಿದೆ.   ಕೊರೊನಾ ತಪಾಸಣೆಯ ಸಂದರ್ಭ ಸಿಎಂ ಅವರ ಕಾವೇರಿ ನಿವಾಸದಲ್ಲಿದ್ದ ಬಾಣಸಿಗ ಮಹಿಳೆ ಸೇರಿ ಗನ್‌‌ ಮ್ಯಾನ್‌‌‌, ವಿಶೇಷ ಕರ್ತವ್ಯಾಧಿಕಾರಿ ಹಾಗೂ ಆರು ಮಂದಿಗೆ ಸೋಂಕು ಪತ್ತೆಯಾಗಿದೆ. ತಮಗೆ ಕೊರೊನಾ ಸೋಂಕು...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕರೊನಾಗೆ ಆಯುರ್ವೇದ ಔಷಧ ಪ್ರಯೋಗ; ಬಿಎಂಸಿಆರ್​ಐ ನೋಟಿಸ್ ವಿಚಾರಕ್ಕೆ ಡಾ.ಗಿರಿಧರ ಕಜೆ ಹೇಳಿದ್ದೇನು? – ಕಹಳೆ ನ್ಯೂಸ್

ಬೆಂಗಳೂರು: ಕರೊನಾ ರೋಗಿಗಳ ಮೇಲೆ ಆಯುರ್ವೇದ ಔಷಧ ಪ್ರಯೋಗ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನೋಟಿಸೊಂದು ಹರಿದಾಡುತ್ತಿದೆ. ಇದು ಹಲವು ಗೊಂದಲಗಳಿಗೂ ಕಾರಣವಾಗಿತ್ತು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್​ಐ) ಎಥಿಕಲ್ ಕಮಿಟಿ ಹೆಸರಲ್ಲಿರುವ ಲೆಟರ್​ ಹೆಡ್​ನಲ್ಲಿ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆಯವರಿಗೆ ನೋಟಿಸ್ ಎಂದು ಬರೆಯಲಾಗಿದೆ. ಇದರಲ್ಲಿ ಆಯುರ್ವೇದ ಔಷಧದ ಕ್ಲಿನಿಕಲ್​ ಟ್ರಯಲ್​ ಇನ್ನೂ ಜಾರಿಯಲ್ಲಿರುವಾಗಲೇ ಯಶಸ್ವಿಯಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸಿದ್ದೀರಿ ಎಂದು...
ಉಡುಪಿರಾಷ್ಟ್ರೀಯ

‘ ರಾಮ ಮಂದಿರ ಭೂಮಿ ಪೂಜೆಯನ್ನು ಹಬ್ಬವಾಗಿ ಆಚರಿಸೋಣ’ ; ಸುದ್ದಿಗೋಷ್ಠಿಯಲ್ಲಿ ಪೇಜಾವರ ಸ್ವಾಮೀಜಿ – ಕಹಳೆ ನ್ಯೂಸ್

ಉಡುಪಿ, ಆ. 02 : ''ಅಯೋಧ್ಯೆಯಲ್ಲಿರುವ ರಾಮ ಮಂದಿರವು ಇಡೀ ಹಿಂದೂ ಸಮಾಜದ ಕನಸಾಗಿದ್ದು ಆಗಸ್ಟ್ 5 ರಂದು ನಡೆಯುವ ಭವ್ಯ ದೇವಾಲಯದ ಭೂಮಿ ಪೂಜೆಯ ಸಮಾರಂಭವನ್ನು ಪ್ರತಿಯೊಬ್ಬರು ಹಬ್ಬವಾಗಿ ಆಚರಿಸಬೇಕು'' ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕರೆ ನೀಡಿದ್ದಾರೆ.       "ಭಗವಂತ ರಾಮನ ಆರಾಧನೆಯನ್ನು ನಾವು ಮುಂದುವರೆಸಬೇಕು. ಕೊರೊನಾ ಪರಿಸ್ಥಿತಿಯ ಸಂದರ್ಭದಲ್ಲಿಯೂ...
1 189 190 191 192 193 195
Page 191 of 195
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ