Thursday, February 6, 2025

ಸುದ್ದಿ

ಸುದ್ದಿ

ಸಿಯಾಳ ತೆಗೆಯಲು ಹೋದಾಗ ವಿದ್ಯುತ್ ಹರಿದು ವ್ಯಕ್ತಿ ಮೃತ್ಯು – ಕಹಳೆ ನ್ಯೂಸ್

ಶಿರ್ವ : ಇಲ್ಲಿನ ನಡಿಬೆಟ್ಟು ಸಮೀಪ ವ್ಯಕ್ತಿಯೊಬ್ಬರು ಸಿಯಾಳ ಕೊಯ್ಯಲು ಹೋಗಿ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಶಿರ್ವದ ನಡಿಬೆಟ್ಟು ಸಮೀಪದ ಪನಿಯಾರ ಮನೆಯ ಕೆಲಸಗಾರ ಸುರೇಶ್ ಶೆಟ್ಟಿ (68) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮನೆಯ ಯಜಮಾನ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭದಲ್ಲಿ ತೋಟದಲ್ಲಿ ಕಬ್ಬಿಣದ ಸಲಾಕೆಯನ್ನು ಉಪಯೋಗಿಸಿ ತೆಂಗಿನ ಮರದಿಂದ ಸೀಯಾಳ ತೆಗೆಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ತೋಟದಲ್ಲಿ ಹಾದು ಹೋಗಿರುವ ಹೈ ಟೆನ್ಶನ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿ – ಕಹಳೆ ನ್ಯೂಸ್

ಬಂಟ್ವಾಳ: ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ ( 15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಡಕಬೈಲು ಸೈಂಟ್ ಡೊಮೊನಿಕ್ ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ತಿಳಿಸಿದ್ದಾರೆ. ರಾತ್ರಿ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್‌ ಬ್ಯಾಡ್ಮಿಂಟನ್‌- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ – ಕಹಳೆ ನ್ಯೂಸ್

ಅಂಬಿಕಾ ಪದವಿಪೂರ್ವ ಕಾಲೇಜು ಇದರ ಸಹಯೋಗದಲ್ಲಿ ಸುದಾನ ಸ್ಪೋರ್ಟ್ಸ್ ಕ್ಲಬ್‌ ಸಾಮೆತ್ತಡ್ಕ, ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ನೇಹಶ್ರೀ, ಪುಲಕಿತ ಹಾಗೂ ದ್ವಿತೀಯ ಪಿಯುಸಿಯ ಹರ್ಷಿತ ಭಾಗವಹಿಸಿದ್ದರು. ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನ್ವಿತ್‌ ರೈ,...
ಮಂಗಳೂರುಸುದ್ದಿ

ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!- ಕಹಳೆ ನ್ಯೂಸ್

ಮಂಗಳೂರು ಆರ್ಥಿಕ ವಲಯ ( SEZ) ನಲ್ಲಿ ಜೆಬಿಎಫ್ ಪೆಟ್ರೊಕೆಮಿಕಲ್ಸ್ ಮತ್ತು ಗೇಲ್‌ನ ವಿಲೀನದಿಂದ ಎಸ್‌ಇ‌ಝೆಡ್‌ ನ ಜಾಗ ಕಳೆದುಕೊಂಡ ಕುಟುಂಬಗಳು ಅನುಭವಿಸುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ವಿಷಯದ ಕುರಿತು ನಿರಂತರ ಬೆನ್ನಟ್ಟುತ್ತಿರುವ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. JBF...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಮಟ್ಟದ ಪ್ರತಿಭಾ ಕಾರಂಜಿ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಟ್ಟದ ಗಣಿತ – ವಿಜ್ಞಾನ ಮೇಳ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಚಿತ್ರಕಲೆ ಸ್ಪರ್ಧೆ, ಕ್ಲೇ ಮಾಡಲಿಂಗ್, ವಿಜ್ಞಾನ - ಗಣಿತ ಮಾದರಿ, ಪ್ರಯೋಗಗಳು, ರಸಪ್ರಶ್ನೆ, ಪ್ರಬಂಧ, ಛದ್ಮವೇಶ ಸ್ಪರ್ಧೆ, ಭಾಷಾ ಕಂಠಪಾಠ, ಆಶುಭಾಷಣ, ಪತ್ರವಾಚನ ಇತ್ಯಾದಿ ಸ್ಪರ್ಧೆಗಳನ್ನು ಹಿರಿಯ ಹಾಗೂ ಕಿರಿಯ ವಿಭಾಗಗಳಿಗೆ ಹಮ್ಮಿಕೊಳ್ಳಲಾಯಿತು. ಎಲ್ಲಾ ವಿದ್ಯಾರ್ಥಿಗಳು ಕನಿಷ್ಟ ಒಂದು ಸ್ಪರ್ಧೆಯಲ್ಲಾದರೂ ಭಾಗವಹಿಸಿದರು. ತೀರ್ಪುಗಾರರಾಗಿ ಶ್ರೀರಾಮ...
ಬೆಂಗಳೂರುಸುದ್ದಿ

5ನೇ ದಿನದ ಮೈಸೂರು ಚಲೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತರು- ಕಹಳೆ ನ್ಯೂಸ್

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾದಲ್ಲಿ) ಅಕ್ರಮ ನಿವೇಶನ ಹಂಚಿಕೆಗೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ನಿನ್ನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಇನ್ನು ಐದನೇ ದಿನದ ಮೈಸೂರು ಚಲೋಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂಧರ್ ಜೈನ್, ಪರಮೇಶ್ವರಿ ಭಟ್ ಬಬ್ಬಿಲಿ, ಕಿರಣ್ ಕುಮಾರ್ ರೈ, ಭರತ್ ಚನಿಲ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿನಿ ನಿಯತಿ ಭಟ್ ದ್ವಿತೀಯ – ಕಹಳೆ ನ್ಯೂಸ್

ಪುತ್ತೂರು: ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿನಿ ನಿಯತಿ ಭಟ್ ಇವರು ಆಗಸ್ಟ್ 2ರಂದು ಕುಂದಾಪುರ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಜುಲೈ 30 ರಂದು ಕಡಬದ, ಪಂಜ ಸರಸ್ವತಿ ವಿದ್ಯಾಮಂದಿರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ರಿಧಮಿಕ್ ಯೋಗಾಸನ 17 ವಯೋಮಿತಿ ಒಳಗಿನ( ಕಿಶೋರ ವರ್ಗ)ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : “ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ” : ಕಾವು ಹೇಮನಾಥ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ(ಸಿಬಿಎಸ್‌ಇ) ಪುತ್ತೂರು ಹಾಗೂ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಇದರ ಸಹಯೋಗದಲ್ಲಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಗರದ ಸಾಮೆತ್ತಡ್ಕ ಸುದಾನ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಿತು. ಶ್ರೀ ರಾಮಕೃಷ್ಣ ಪ್ರೌಢ ಶಾಲೆ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಕ್ರೀಡಾಕೂಟವು ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ ಎಂದರು. ಮುಖ್ಯ ಅತಿಥಿ ವಿದ್ಯಾಭಾರತಿ ಕರ್ನಾಟಕದ ಜಿಲ್ಲಾಧ್ಯಕ್ಷ...
1 203 204 205 206 207 2,769
Page 205 of 2769