ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ– ಕಹಳೆ ನ್ಯೂಸ್
ಮೂಡುಬಿದಿರೆ : ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ಅವರಿಗೆ ಹಾಗೂ ಸುರತ್ಕಲ್ ಮೇಳದ ನಿವೃತ್ತ ಕಲಾವಿದ ಪುತ್ತಿಗೆ ಕುಮಾರ ಗೌಡರವರಿಗೆ ಯಕ್ಷದೇಗುಲ ಪ್ರಶಸ್ತಿಯನ್ನು ನೀಡಲು ಶ್ರೀ ಯಕ್ಷದೇಗುಲ ಕಾಂತಾವರ ಆಯ್ಕೆ ಸಮಿತಿಯು ತೀರ್ಮಾನಿಸಿದೆ. ಯಕ್ಷದೇಗುಲ ಕಾಂತಾವರದ ವಾರ್ಷಿಕ ಆಟ ಕೂಟ ಬಯಲಾಟ ಸಹಿತ ೨೨ ನೇ ಯಕ್ಷೋಲ್ಲಾಸ ಕಾರ್ಯಕ್ರಮವು ಜುಲೈ ೨೧ರಂದು ಕಾಂತಾವರದಲ್ಲಿ ನಡೆಯಲಿದ್ದು ಈ ಸಂದರ್ಭದಲ್ಲಿ ಯಕ್ಷ ರಂಗದ ಸಿಡಿಲ ಮರಿ ಖ್ಯಾತಿ ವೆತ್ತ...