Tuesday, February 11, 2025

ಸುದ್ದಿ

ದಕ್ಷಿಣ ಕನ್ನಡಸುದ್ದಿ

ಡಾ। ಶ್ರುತಿ ಬಲ್ಲಾಳ್ ರವರಿಗೆ ಐಎಂಎ ಪುರಸ್ಕಾರ -ಕಹಳೆ ನ್ಯೂಸ್

ಆರ್ಯಭಟ ಪ್ರಶಸ್ತಿ ಪುರಸ್ಕೃತೆ, ಮಧುಮೇಹ ತಜ್ಞೆ ಡಾ। ಶ್ರುತಿ ಬಲ್ಲಾಳ್ ರವರನ್ನು ವೈದ್ಯರ ದಿನಾಚರಣೆಯಂದು ಭಾರತೀಯ ವೈದ್ಯರ ಸಂಘ ಉಡುಪಿ ಕರಾವಳಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವ ಡಾ. ಶ್ರುತಿ ಬಳ್ಳಾಲ್ ಅವರು ಬಿಗ್ ಮೆಡಿಕಲ್ ಸೆಂಟರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ತಮ್ಮ ಸಾಮಾಜಿಕ ಜವಾಬ್ದಾರಿ ಚಟುವಟಿಕೆಗಳ ಭಾಗವಾಗಿ ಮಧುಮೇಹ ತಡೆಗಟ್ಟುವಿಕೆ, ಮುಂದೂಡಿಕೆ, ಆರೈಕೆ, ಉತ್ತಮ ಜೀವನ ಶೈಲಿಯ ಬಗ್ಗೆ ಶಾಲಾ-ಕಾಲೇಜು ಮತ್ತು ಸಂಘ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಧರ್ಮಸ್ಥಳ ಜೋಡುಸ್ಥಾನದಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!- ಕಹಳೆ ನ್ಯೂಸ್

ಬೆಳ್ತಂಗಡಿ : ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ...
ಕುಂದಾಪುರಸುದ್ದಿ

ದ್ವೇಷ ಭಾವನೆ ಬಿತ್ತಿದ ರಾಹುಲ್ ಗಾಂಧಿ ವರ್ತನೆಯಿಂದ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ : ಕಿಶೋರ್ ಕುಮಾರ್ ಕುಂದಾಪುರ-ಕಹಳೆ ನ್ಯೂಸ್

ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ 'ತಮ್ಮನ್ನು ತಾವು ಹಿಂದೂಗಳು ಎಂದು ಕರೆಸಿಕೊಳ್ಳುವವರು 24 ಗಂಟೆ ದ್ವೇಷ, ಹಿಂಸೆ ಮತ್ತು ಸುಳ್ಳಿನಲ್ಲಿ ನಿರತರಾಗಿದ್ದಾರೆ' ಎನ್ನುವ ದುರುದ್ದೇಶಪೂರಿತ ಮಾತನ್ನಾಡುವ ಮೂಲಕ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಯನ್ನು ಮಗದೊಮ್ಮೆ ಬಟ್ಟಾಬಯಲುಗೊಳಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಹಿಂದೂ ವೇಷಧಾರಿಯಾಗಿ ದೇವಸ್ಥಾನಗಳನ್ನು ಸುತ್ತುವ ರಾಹುಲ್ ಗಾಂಧಿ ತನ್ನ ಅಪ್ರಬುದ್ಧ ಮಾತುಗಳಿಂದ ಕಪಟತನವನ್ನು ಪ್ರದರ್ಶಿಸಿ ಜಗತ್ತಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಕಟ್ಟೆ ಫ್ರೆಂಡ್ಸ್ ಬಲ್ನಾಡು ಇವರ ಆಶ್ರಯದಲ್ಲಿ ಜು.28ರಂದು ತೃತೀಯ ವರ್ಷದ ಕೆಸರ್‍ಡ್ ಒಂಜಿ ದಿನ-2024 ಕೆಸರುಗದ್ದೆ ಕ್ರೀಡಾಕೂಟ – ಕಹಳೆ ನ್ಯೂಸ್

ಪುತ್ತೂರು :  ಕಟ್ಟೆ ಫ್ರೆಂಡ್ಸ್ ಬಲ್ನಾಡು ಇವರ ಆಶ್ರಯದಲ್ಲಿ ಮಹಿಳೆಯರ ಹಾಗೂ ಪುರುಷರ ಸಾರ್ವಜನಿಕ ಹಿಂದೂ ಬಾಂಧವರ ತೃತೀಯ ವರ್ಷದ ಕೆಸರ್‍ಡ್ ಒಂಜಿ ದಿನ-2024 ಕೆಸರುಗದ್ದೆ ಕ್ರೀಡಾಕೂಟವು ಜು.28ರಂದು ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದ ಎದುರು ಗದ್ದೆಯಲ್ಲಿ ನಡೆಯಲಿದೆ. ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಭಟ್ ಬಬ್ಬಿಲಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸಿನಿಮಾಸುದ್ದಿ

2024-25ನೇ ಸಾಲಿನ ನೀನಾಸಂ ರಂಗಶಿಕ್ಷಣ ತರಬೇತಿಗೆ ಆಯ್ಕೆಯಾದ ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಮೋಹನ್- ಕಹಳೆ ನ್ಯೂಸ್

2024-25ನೇ ಸಾಲಿನ ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಮೋಹನ್ ಆಯ್ಕೆಯಾಗಿದ್ದಾರೆ. 2020ರಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಪ್ರಸ್ತುತಪಡಿಸಿದ ‘ಸಾಹೇಬ್ರು ಬಂದವೇ’ ನಾಟಕದಲ್ಲಿ ಮೋನಿಕಾ ಪಾತ್ರದಲ್ಲಿ ಅಭಿನಯಿಸಿದ್ದ ಸುಸ್ಮಿತಾ ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ಆಯ್ಕೆಯಾಗಿದ್ದಾರೆ. ಪ್ರತಿಯೊಬ್ಬ ರಂಗಭೂಮಿ ಕಲಾವಿದನ ಕನಸು ಪ್ರತಿಷ್ಠಿತ ನೀನಾಸಂಗೆ ಆಯ್ಕೆ ಆಗಬೇಕು ಎಂಬುದಾಗಿದೆ. ಆ ನಿಟ್ಟಿನಲ್ಲಿ ಅಷ್ಟೇ ಶ್ರದ್ಧೆ ಮತ್ತು...
ಸುದ್ದಿ

ಉಡುಪಿ: ಜು.6: ತುಳುಕೂಟ ಉಡುಪಿ ವತಿಯಿಂದ “ಮದರೆಂಗಿದರAಗ್”*ಉಡುಪಿ ಜಿಲ್ಲಾ ಶಾಲಾ-ಕಾಲೇಜು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತುಳು ಸಾಂಪ್ರದಾಯಿಕ ಸ್ಪರ್ಧೆ..-ಕಹಳೆ ನ್ಯೂಸ್

ಉಡುಪಿ: (ತುಳುಕೂಟ ಉಡುಪಿ(ರಿ) ವತಿಯಿಂದ ಇದೇ ಬರುವ ಜುಲೈ 6 ತಾರೀಕಿನಂದು ಮಧ್ಯಾಹ್ನ 2 ಗಂಟೆಯಿAದ ಸಂಜೆ 6 ಗಂಟೆಯವರೆಗೆ ತುಳುನಾಡ ಬದುಕಿನ ವಿಶೇಷತೆಯನ್ನು ಸಾರುವ ತುಳು ಸಾಂಪ್ರದಾಯಿಕ ಸ್ಪರ್ಧೆಗಳು ನಡೆಯಲಿವೆ.ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮೇಲ್ಭಾಗದಲ್ಲಿರುವ ಜಗನ್ನಾಥ ಸಭಾಭವನದಲ್ಲಿ ನಡೆಯಲಿರುವ ಈ ಸ್ಪರ್ಧೆಗಳಲ್ಲಿ ಉಡುಪಿ ಜಿಲ್ಲಾ ಶಾಲಾ ಕಾಲೇಜು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಕೋರಲಾಗಿದೆ. ಈ ಕಾರ್ಯಕ್ರಮವನ್ನು ಮಲ್ಪೆ ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ನಾಗರಾಜ್...
ಉಡುಪಿಸುದ್ದಿ

ಹಿರಿಯಡಕ ಸಾರ್ವಜನಿಕ ಗ್ರಂಥಾಲಯ ಕಟ್ಟಡ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್

ಉಡುಪಿ:ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯಡಕ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಉಡುಪಿ ತಾಲೂಕು ಪಂಚಾಯತ್ ಅನುದಾನದಿಂದ ರೂ.13 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ್ ಹಾಗೂ...
ಉಡುಪಿಸುದ್ದಿ

ಗಾಳಿ ಮಳೆಗೆ ಪೆರ್ಡೂರು ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ –ಕಹಳೆ ನ್ಯೂಸ್

ಉಡುಪಿ : ಗಾಳಿ ಮಳೆಗೆ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹತ್ರಬೈಲು ಗಣಪತಿ ಗೌರಿ ಅವರ ದನದ ಕೊಟ್ಟಿಗೆ ಹಾಗೂ ಬಾಡಾಲಜೆಡ್ಡು ಪವಿತ್ರ ಪೂಜಾರಿ ಅವರ ಮನೆಗೆ ಹಾನಿ ಉಂಟಾಗಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರು ಶೀಘ್ರವೇ ಗರಿಷ್ಠ ಪರಿಹಾರ ಮಂಜೂರು ಮಾಡುವಂತೆ ಸಂಭAದಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.   ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ...
1 254 255 256 257 258 2,776
Page 256 of 2776