ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆ: ಆಕ್ರೋಶ ವ್ಯಕ್ತಪಡಿಸಿದ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್
ಉಡುಪಿ: ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರ ಉಡುಪಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಮನಗರ ಬಿಜೆಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದಾರೆ ಎಂಬ ಮಾಹಿತಿ ಇದೆ. ಇದು ಬಹಳ ಆತಂಕಕಾರಿ ವಿಚಾರ. ಕುಮಾರಸ್ವಾಮಿ ಮತ್ತು ಡಿಕೆಶಿಗೆ ಒಂದು ಪ್ರಶ್ನೆ ಕೇಳುತ್ತೇನೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ಎದುರಿಸುವ ಧೈರ್ಯ ಇಲ್ಲವೇ? ಅಭ್ಯರ್ಥಿಯನ್ನೇ ಸೆಳೆದಿರುವುದು ಪ್ರಜಾಪ್ರಭುತ್ವಕ್ಕೆ...