Friday, September 20, 2024

archiveHeart Attack

ಸುದ್ದಿ

ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು – ಕಹಳೆ ನ್ಯೂಸ್

ಚಿಕ್ಕೋಡಿ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಬಸ್‍ನಲ್ಲಿಯೇ ಮೃತಪಟ್ಟಿದ್ದಾಳೆ. ರಾಯಭಾಗ ತಾಲೂಕಿನ ಹಾರೂಗೇರಿ ಚನ್ನವೃಷಭೇಂದ್ರ ಕಾಲೇಜ್‍ನ ಮೀನಜಾ ಯಲಿಗಾರ (18) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿನಿ ಅಸ್ವಸ್ಥವಾಗಿದ್ದರಿಂದ ಪ್ರವಾಸಿ ಬಸ್ಸನ್ನು ಅಂಕೋಲಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಯ ಮಧ್ಯದಲ್ಲಿಯೇ ಮೀನಜಾ ಸಾವನ್ನಪ್ಪಿದ್ದಾಳೆ....
ಸುದ್ದಿ

ಅಮೆರಿಕಾದಲ್ಲಿ ಉದ್ಯೋಗ ಮಾಡುತ್ತಿದ್ದ ಪುತ್ತೂರಿನ ವ್ಯಕ್ತಿ ಹೃದಯಾಘಾತದಿಂದ ಸಾವು – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಸಾಮೆತ್ತಡ್ಕ ನಿವಾಸಿ ಎಮ್.ಸುಬ್ರಾಯ ಅಮ್ಮಣ್ಣಾಯ ಪ್ರಭಾವತಿ ದಂಪತಿ ಪುತ್ರ ಗುರುರಾಜ್ ಅವರು  ಅಮೇರಿಕದಲ್ಲಿ ಉದ್ಯೋಗ ಮಾಡುತ್ತಿದ್ದು ಮಂಗಳವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗುರುರಾಜ್ ಅವರು ನ್ಯೂಯಾರ್ಕ್ ಹತ್ತಿರದ ಕನೆಕ್ಟ್ ಕಟ್ ಎಂಬ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದರು. ಇವರ ಪತ್ನಿ ಅರ್ಚನಾ ವೈದ್ಯೆಯಾಗಿದ್ದಾರೆ. ಇವರಿಗೆ ಇಬ್ಬರು ಪುತ್ರರಿದ್ದಾರೆ....
ಸುದ್ದಿ

ಬೈಕ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ: ಸವಾರ ಮೃತ್ಯು – ಕಹಳೆ ನ್ಯೂಸ್

ಮಂಗಳೂರು: ಬೈಕ್ ಚಲಾಯಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಕೊಲ್ಯದಲ್ಲಿ ನಡೆದಿದೆ. ಉಳ್ಳಾಲ ಬೈಲು ನಿವಾಸಿ ದೇವದಾಸ್ ಶ್ರೀಯಾನ್ ಹೃದಯಾಘಾತಕ್ಕೆ ಬಲಿಯಾದವರು. ನಿನ್ನೆ ಸಂಜೆ ಮನೆಯಿಂದ ಕೋಟೆಕಾರಿಗೆ ತೆರಳಿ ಮನೆಗೆ ಹಿಂತಿರುಗುವಾಗ ಘಟನೆ ನಡೆದಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ದಾರಿ ಮಧ್ಯದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಕೋಟೆಕಾರ್ ಪಟ್ಟಣ ಪಂಚಾಯತಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಾಹಿಸುತ್ತಿದ್ದ ಶ್ರೀಯಾನ್, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ....