Friday, September 20, 2024

archivejds

ಸುದ್ದಿ

ಕುಮಾರ ಪರ್ವದ ಅಲೆಗೆ ಸಾಕ್ಷಿಯಾದ ಕಾಂಗ್ರೆಸ್-ಜೆಡಿಎಸ್ ಸಮಾವೇಶ – ಕಹಳೆ ನ್ಯೂಸ್

ಲೋಕಸಭಾ ಉಪ ಸಮರಕ್ಕೆ ಶಿವಮೊಗ್ಗ ರಣಕಣ ಸಿದ್ಧಗೊಂಡಿದ್ದು, ತೀರ್ಥಹಳ್ಳಿಯಲ್ಲಿ ನಿನ್ನೆ ನಡೆದ ಕಾಂಗ್ರೆಸ್-ಜೆಡಿಎಸ್ ಸಮಾವೇಶ ಕುಮಾರ ಪರ್ವದ ಅಲೆಗೆ ಸಾಕ್ಷಿಯಾಯಿತು. ತೀರ್ಥಹಳ್ಳಿಯ ಸಂಸ್ಕೃತಿ ಮಂದಿರದಲ್ಲಿ ನಡೆದ ಸಮಾವೇಶಕ್ಕೆ 5,000 ಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸಿ ಮೈತ್ರಿ ಪಕ್ಷದ ಬಲ ಪ್ರದರ್ಶನ ಮಾಡಿದರು. ಜತೆಗೆ ಕಾಂಗ್ರೆಸ್-ಜೆಡಿಎಸ್ ಮಿಶ್ರ ನಾಯಕತ್ವಕ್ಕೆ ಜೈ ಜೈ ಎನ್ನುತ್ತಿರುವುದು ಕಂಡು ಬಂತು. ಈ ಸಂದರ್ಭದಲ್ಲಿ ಸಿಎಂ ಕುಮಾರ ಸ್ವಾಮಿ ಈ ನಾಡಿನ ಜನರ ಮನದಲ್ಲಿದ್ದೇನೆ. ಸಾಲ ಮನ್ನಾ...
ರಾಜಕೀಯಸುದ್ದಿ

ದೇವೇಗೌಡ ಮತ್ತೊಮ್ಮೆ ಮಧು ಪರವಾಗಿ ಪ್ರಚಾರ – ಕಹಳೆ ನ್ಯೂಸ್

ಬೆಂಗಳೂರು: ನಿನ್ನೆ ನಗರದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ ಪ್ರಚಾರ ನಡೆಸಿದ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ಮತ್ತೊಮ್ಮೆ ಮಧು ಪರವಾಗಿ ಸಿದ್ದರಾಮಯ್ಯನವರ ಒಟ್ಟಿಗೆ ಅ.29ರಂದು ಪ್ರಚಾರ ನಡೆಸಲಿದ್ದಾರೆ. ವಿದೇಶಕ್ಕೆ ತೆರಳಿರುವ ದೇವೆಗೌಡರು ಅ. 28 ರಂದು ಮರಳಿ ಬಂದ ನಂತರ ಅ.29ರಂದು ಪ್ರಚಾರ ನಡೆಸಲು ಸಿದ್ದರಾಗಿದ್ದಾರೆ. ಹಲವು ವರ್ಷಗಳ ನಂತರ ಒಂದೇ ವೇದಿಕೆ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ದೇವೇಗೌಡರು ಶಿವಮೊಗ್ಗ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪನವರ...
ಸುದ್ದಿ

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮಾನ ಹರಾಜು ಹಾಕಿದ್ದಾರೆ: ಉಮೇಶ್ ವರ್ಮ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಸುತ್ತಿಗೆ ಪಡೆದಿರುವ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ನ ಶವದ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಸ್.ಉಮೇಶ್ ವರ್ಮ ಟೀಕಿಸಿದರು. ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮಾನವನ್ನೇ ಹರಾಜು ಹಾಕಿದ್ದಾರೆ. ಈಗ ಜೆಡಿಎಸ್ಗೆ ಶಿವಮೊಗ್ಗ ಕ್ಷೇತ್ರವನ್ನು ಬಿಟ್ಟುಕೊಡುವ ಮೂಲಕ ಜಿಲ್ಲಾ ಕಾಂಗ್ರೆಸ್ನ್ನು ಮೂರು ಭಾಗವಾಗಿ ಮಾಡಿದ್ದಾರೆ. ಈಗಿರುವ ಸ್ಥಿತಿ ನೋಡಿದರೆ ಕಾಂಗ್ರೆಸ್...
ಸುದ್ದಿ

ಅ.24ರಂದು ಲಂಡನ್ ಗೆ ಪ್ರವಾಸ ಮಾಡಲಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ – ಕಹಳೆ ನ್ಯೂಸ್

ಬೆಂಗಳೂರು: ಐದು ದಿನಗಳ ಕಾಲ ಲಂಡನ್ ಪ್ರವಾಸಕ್ಕೆ ಇದೇ ತಿಂಗಳು 24ರಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ್ರು ತೆರಳಲಿದ್ದಾರೆ ಎನ್ನಲಾಗಿದೆ. ಲಂಡನ್‌ನಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ್ರು ತೆರಳುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಉಪಚುನಾವಣೆಯ ಕಾವು ಹೆಚ್ಚಾಗಿದ್ದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರುಗಳು ಭರ್ಜರಿಯಾಗಿ ಪ್ರಚಾರ ನಡೆಸುತ್ತಿದ್ದಾರೆ. ಆದ್ರೆ ದೇವೆಗೌಡರು ಈ ರೀತಿಮಾಡ್ತಾ ಇರೋದು ಮೈತ್ರಿ ಪಕ್ಷಗಳಿಗೆ ಬಲ ಕಡಿಮೆಯಾದಂತಿದೆ....
ರಾಜಕೀಯಸುದ್ದಿ

ವಿಧಾನಸಭೆ ಉಪಚುನಾವಣೆ: ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ರಾಮನಗರ: ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್​, ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪತಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿಯವರ ಜತೆ ಚುನಾವಣಾ ಕಚೇರಿಗೆ ತೆರಳಿ ಇಂದು ನಾಮಪತ್ರ ಸಲ್ಲಿಸಿದರು. ಅನಿತಾ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಸುರೇಶ್​, ಡಿ.ಕೆ.ಶಿವಕುಮಾರ್​ ಭಾಗವಹಿಸಲಿಲ್ಲ. ಕಾಂಗ್ರೆಸ್​ ನಾಯಕರ ಪರವಾಗಿ ಶಾಸಕ ಮುನಿರತ್ನ ಉಪಸ್ಥಿತರಿದ್ದರು. ಈ ಉಪಚುನಾವಣೆಯಲ್ಲಿ ಜೆಡಿಎಸ್​ನೊಂದಿಗೆ ಮೈತ್ರಿಗೆ ವಿರೋಧಿಸಿದ್ದ ಸ್ಥಳೀಯ ಮುಖಂಡರು ಅಸಾಮಾಧನಗೊಂಡಿದ್ದಾರೆ ಎನ್ನಲಾಗಿದ್ದು, ನಾಮಪತ್ರ ಸಲ್ಲಿಕೆ ವೇಳೆ ಗೈರಾಗಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಅನಿತಾಕುಮಾರಸ್ವಾಮಿ ತೆರೆದ...
ರಾಜಕೀಯಸುದ್ದಿ

ಉಪ ಚುನಾವಣೆ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ: ದಿನೇಶ್‌ ಗುಂಡೂರಾವ್‌ – ಕಹಳೆ ನ್ಯೂಸ್

ಬೆಂಗಳೂರು : ಉಪ ಚುನಾವಣೆ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ. ರಾಮನಗರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದೂ ನಿರ್ಧಾರವಾಗಿದೆ. ಇದನ್ನು ಧಿಕ್ಕರಿಸಿ ಯಾರಾದರೂ ಬಂಡಾಯವೆದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಚುನಾವಣೆಯನ್ನು ಜಂಟಿಯಾಗಿ ಎದುರಿಸಲಾಗುತ್ತಿದೆ. ಬಳ್ಳಾರಿ, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲೂ ಗೊಂದಲವಿಲ್ಲ. ಶಿವಮೊಗ್ಗದಿಂದ ಜೆಡಿಎಸ್‌ನ ಮಧು ಬಂಗಾರಪ್ಪ ಸ್ಪರ್ಧಿಸುತ್ತಾರೊ ಇಲ್ಲವೊ ಎನ್ನುವುದು ಗೊತ್ತಿಲ್ಲ. ಆದರೆ, ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಸಂಘಟನೆ ಶಕ್ತಿಯುತವಾಗಿದ್ದು ಸೂಕ್ತ ಅಭ್ಯರ್ಥಿಯನ್ನು...
ಸುದ್ದಿ

ವಿಧಾನಸಭೆ ಉಪಚುನಾವಣೆ: ಬಿ ಫಾರಂ ಗೆ ವಿಶೇಷ ಪೂಜೆ ಸಲ್ಲಿಸಿದ ಎಚ್‌ಡಿ ರೇವಣ್ಣ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್ 11: ವಿಧಾನಸಭೆ ಉಪಚುನಾವಣೆಗೆ ರಾಮನಗರದಿಂದ ನಾಮಪತ್ರ ಸಲ್ಲಿಸಲಿರುವ ಅನಿತಾ ಕುಮಾರಸ್ವಾಮಿ ಅವರ ಬಿ ಫಾರಂಗೆ ಸಚಿವ ಎಚ್‌ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗೆ ಸಜ್ಜಾಗಿರುವ ದಳಪತಿಗಳು ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ, ಬಿ ಫಾರಂ ಕೂಡ ಇದ್ಧಪಡಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ದೇವರ ಮೇಲೆ ಅಪಾರ ನಂಬಿಕೆ ಇಟ್ಟಿರುವ ಸಚಿವ ಎಚ್‌ಡಿ ರೇವಣ್ಣ ರಾಮನಗರದಿಂದ ನಾಮಪತ್ರ ಸಲ್ಲಿಸಲಿರುವ ಅನಿತಾ ಕುಮಾರಸ್ವಾಮಿ ಅವರ...
ರಾಜಕೀಯಸುದ್ದಿ

ಕುಟುಂಬದವರನ್ನೇ ಕಣಕ್ಕಿಳಿಸುವುದು ಸರಿಯಲ್ಲ: ಜೆಡಿಎಸ್ ಮುಖಂಡರು – ಕಹಳೆ ನ್ಯೂಸ್

ಬೆಂಗಳೂರು: ಅಪ್ಪ-ಮಕ್ಕಳ ಪಕ್ಷ ಎಂಬ ಅಪವಾದದಿಂದ ಹೊರಬರಲು ವಿಧಾನಸಭಾ ಚುನಾವಣೆಗೆ ಮುನ್ನ ‘ನಮ್ಮ ಕುಟುಂಬದಿಂದ ಇಬ್ಬರೇ ಸ್ಪರ್ಧಿಗಳು’ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಈಗ ಅವರಿಗೆ ಮುಳುವಾಗುತ್ತಿದೆ. ರಾಮನಗರ, ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಭರ್ಜರಿ ವಿಜಯ ಪತಾಕೆ ಹಾರಿಸಿದ್ದ ಕುಮಾರಸ್ವಾಮಿ, ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ ರಾಮನಗರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಚುನಾವಣೆ ಪ್ರಚಾರಕ್ಕೆ ತೆರಳದಿದ್ದರೂ ನನ್ನನ್ನು ಗೆಲ್ಲಿಸಿದ ಹಾಗೂ ಒಕ್ಕಲಿಗರ ಪ್ರಾಬಲ್ಯವೇ ಹೆಚ್ಚಿರುವ ಈ ಕ್ಷೇತ್ರವನ್ನು ಶತಾಯಗತಾಯ ಉಳಿಸಿಕೊಳ್ಳಲೇಬೇಕೆಂಬುದು...
1 2
Page 1 of 2