Friday, September 20, 2024

archiveKSRTC

ಬೆಂಗಳೂರುರಾಜ್ಯಸುದ್ದಿ

ಕೆಎಸ್‌ಆರ್‌ಟಿಸಿಯ 2021ರ ಏಪ್ರಿಲ್ ತಿಂಗಳ ಮಾಸಿಕ ಬಸ್ ಪಾಸ್ ಅವಧಿ ವಿಸ್ತರಣೆ – ಕಹಳೆ ನ್ಯೂಸ್

ಬೆಂಗಳೂರು: ಕೆಎಸ್‌ಆರ್‌ಟಿಸಿ 2021ರ ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿ ವಿಸ್ತರಿಸಿ ಆದೇಶ ನೀಡಿದೆ. ಏಪ್ರಿಲ್ ತಿಂಗಳಲ್ಲಿ 15 ದಿನ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು ಹಾಗೂ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ನಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ,ಪ್ರಯಾಣಿಕರು ಬಸ್ ಪಾಸ್ ಬಳಸಲು ಅವಕಾಶ ಇರಲಿಲ್ಲ. ಹೀಗಾಗಿ ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿಯನ್ನು ಜುಲೈ 8ರವರೆಗೆ ವಿಸ್ತರಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಸಾಮಾನ್ಯ ಮಾಸಿಕ...
ಸುದ್ದಿ

ಸ್ವಚ್ಚತಾ ಸುಳ್ಯಕ್ಕೆ ಮತ್ತೊಂದು ಸವಾಲು: ಕೆಎಸ್‍ಆರ್‌ಟಿ ಬಸ್ ನಿಲ್ದಾಣದಲ್ಲಿ ಕಸದ ರಾಶಿ – ಕಹಳೆ ನ್ಯೂಸ್

ಸುಳ್ಯ: ಊರೆಲ್ಲಾ ಸ್ಚಚ್ಚತೆ ಅಭಿಯಾನ, ದೇಶಕ್ಕೆ ದೇಶವೇ ಸ್ವಚ್ಚತೆ ಬಗ್ಗೆ ಗಮನ ಹರಿಸಿದರೆ, ಸುಳ್ಯ ಕೆ ಎಸ್ ಅರ್ ಟಿ ಸಿ ಬಸ್ ನಿಲ್ದಾಣದ ಸಮೀಪವೇ ಕಸದ ರಾಶಿ ಗೇಲಿ ಮಾಡಿ ನಗುವಂತಿದೆ. ನಗರ ಪಂಚಾಯತ್ ಇಲ್ಲಿ ಕಸ ಹಾಕಬಾರದು ಬೋರ್ಡ್ ಹಾಕಿದ್ದರೂ, ಬೋರ್ಡ್ ಮಾತ್ರ ಕಸದೊಟ್ಟಿಗೆ ಹಿಪ್ಪೆಯಾಗಿದೆ, ಜನ ಅಲ್ಲಿಗೇ ತಂದು ಕಸ ಹಾಕಿ ಸದ್ದಿಲ್ಲದೆ ತೆರಳುತ್ತಿದ್ದಾರೆ. ನಗರ ಪಂಚಾಯತ್ ಸೂಕ್ತ ರೀತಿಯಲ್ಲಿ ಕ್ರಮವನ್ನು ತೆಗೆದುಕೊಳ್ಳಬೇಕು ಎಂಬ ಸ್ಥಳೀಯರ...
ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಂದ ಬಂದ್ ಗೆ ಬೆಂಬಲ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇದೀಗ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಂದ ಬಂದ್ ಗೆ ಬೆಂಬಲ ಸೂಚಿಸಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಬೆಳಿಗ್ಗೆಯಿಂದ ಎಂದಿನಂತ್ತೆ ಸಂಚಾರ ಆರಂಭ ಮಾಡಿದ್ದ ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಗಳು ಇದೀಗ ದಿಢೀರನೆ ಸಂಚಾರ ಸ್ಥಗಿತಗೊಳಿಸುವ ಮೂಲಕ ತಮ್ಮ ಬೆಂಬಲ ಸೂಚಿಸಿದ್ದಾರೆ. ಇದರಿಂದ ನೂರಾರು ಬಸ್ಸುಗಳು ನಿಂತಲ್ಲೇ ನಿಂತಿರುವುದರಿಂದ ನೂರಾರು ಪ್ರವಾಸಿಗರು, ವಿದ್ಯಾರ್ಥಿಗಳು ಹಾಗೂ ದೂರದ ಊರಿಗೆ ಹೋಗುವ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಕೆಎಸ್‌ಆರ್‌ಟಿಸಿ...
ಸುದ್ದಿ

ಕುಡಿದ ಮತ್ತಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನಿಗೆ ಥಳಿತ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಅಡ್ಡ ಹಾಕಿದ ಯುವಕನನ್ನು ಪ್ರಶ್ನೆ ಮಾಡಿದ್ದಕ್ಕೆ ನಡು ರಸ್ತೆಯಲ್ಲಿಯೇ ದೊಣ್ಣೆಯಿಂದ ಬಸ್ ನಿರ್ವಾಹಕನಿಗೆ ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೊಸಳ್ಳಿ ಗೇಟ್‌ನಲ್ಲಿ ನಡೆದಿದೆ. ಬಸ್‌ಗೆ ಅಡ್ಡಲಾಕಿ ನಿರ್ವಾಹಕನಿಗೆ ಥಳಿಸಿದ ಕುಡುಕ ಸಂತೋಷ್ ನಾಯ್ಕ ವಿರುದ್ಧ ಕೆಎಸ್‌ಆರ್‌ಟಿಸಿ ನಿರ್ವಾಹಕ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ....
ಸುದ್ದಿ

ಕನ್ನಡ ರಾಜ್ಯೋತ್ಸವದಂದು ಕನ್ನಡದ ಕಂಪು ಸಾರಿದ ಕೆಎಸ್ಆರ್ ಟಿಸಿ ಬಸ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಚಾಲಕನೊಬ್ಬ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೆಎಸ್ ಆರ್ ಟಿ ಸಿ ಬಸ್ ನ್ನು ನವ ವಧುವಿನಂತೆ ಸಿಂಗಾರಗೊಳಿಸಿ ರಾಜ್ಯದ ಆನೇಕ ಮಹನೀಯರ ಭಾವಚಿತ್ರಗಳನ್ನು ಬಸ್ಸಿಗೆ ಅಂಟಿಸಿ ನಾಡಿನ ಹಿರಿಮೆ, ಗರಿಮೆ ಸಾರುವ ಪ್ರಯತ್ನ ಮಾಡುವ ಮೂಲಕ ಕನ್ನಡದ ಕಂಪನ್ನ ಮೆರೆದಿರೋ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಡಿಪೋದಲ್ಲಿ ಚಾಲಕ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿರುವ ಅಲ್ತಾಫ್ ತನ್ನ ಬಸ್‌ನ್ನ ಸಂಪೂರ್ಣ ಕನ್ನಡಮಯವಾಗಿಸಿದ್ದಾನೆ. ಕೆಎಸ್‌ಆರ್‌ಟಿಸಿ ಬಸ್‌ಗೆ ಹೂವಿನ ಹಾರ,...
ಸುದ್ದಿ

ಕೆಎಸ್‌ಆರ್‌ರ್ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ – ಕಹಳೆ ನ್ಯೂಸ್

ಬೆಂಗಳೂರು: ಆಯುಧ ಪೂಜೆ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಎದುರಾದ ಸಾಲು ರಜೆಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭರ್ಜರಿ ಆದಾಯ ತಂದಿವೆ. ಅ.22 ರಂದು ಒಂದೇ ದಿನ 18.26 ಕೋಟಿ ಆದಾಯ ಸಂಗ್ರಹವಾಗಿದೆ. ಪ್ರಸಕ್ತ ಸಾಲಿನ ನಿಗಮದ ದಿನವೊಂದರ ಅತ್ಯಧಿಕ ಆದಾಯ ಇದಾಗಿದೆ. ಸಾಲು ರಜೆಗಳ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದನ್ನು ಮನಗುಂಡು ಕೆಎಸ್‌ಆರ್‌ರ್ಟಿಸಿಯು ಪ್ರಯಾಣಿಕರ ಅನುಕೂಲಕ್ಕಾಗಿ ಅ.17ರಿಂದ ಅ.22 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು...
ಸುದ್ದಿ

ಕೆಎಸ್ಸಾರ್ಟಿಸಿ ಬಸ್ ಬೈಕ್‌ಗೆ ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು-ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯ ಜಕ್ರಿಬೆಟ್ಟು ಎಂಬಲ್ಲಿ ಭಾನುವಾರ ಕೆಎಸ್ಸಾರ್ಟಿಸಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ ಮಂಗಳೂರು ಕುಡುಪು ನಿವಾಸಿ ಚರಣ್(18) ಹಾಗೂ ಬಂಟ್ವಾಳ ತಾಲೂಕು ವಾಮದಪದವು ಸಮೀಪದ ದಂಡೆಗೋಳಿ ನಿವಾಸಿ ಮುಹಮದ್ ನೌಶಾದ್(18) ಮೃತಪಟ್ಟವರು. ಅವರಿಬ್ಬರು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಐಟಿಐ ವಿದ್ಯಾರ್ಥಿಗಳಾಗಿದ್ದು, ಸ್ನೇಹಿತರಾದ್ದರು. ಭಾನುವಾರ ಬೆಳಗ್ಗೆ ಬಿ.ಸಿ ರೋಡ್‌ನಿಂದ ಕಾರಿಂಜ ದೇವಸ್ಥಾನ ಕಡೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಹೆದ್ದಾರಿಯಲ್ಲಿ...