Friday, September 20, 2024

archiveMangaluru

ದಕ್ಷಿಣ ಕನ್ನಡಯಕ್ಷಗಾನ / ಕಲೆರಾಜ್ಯಸುದ್ದಿ

ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ – ಕಹಳೆ ನ್ಯೂಸ್

ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದ ಶ್ರೀ ಸಂಪಾಜೆ ಶೀನಪ್ಪ ರೈ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ತಬೀಜ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಶ್ರೀ ಶೀನಪ್ಪ ರೈ ಅವರಿಗೆ ಯಕ್ಷಗಾನ ಬಯಲಾಟ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿದ್ದವು....
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಕುಪ್ಪೆಪದವಿನಲ್ಲಿ ರಸ್ತೆ ಬದಿಯಲ್ಲಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ರಸ್ತೆ ಬದಿಯಲ್ಲಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿದು ಮಣ್ಣಿನೊಳಗೆ ಸಿಲುಕಿದ ವ್ಯಕ್ತಿಯನ್ನು ಸ್ಥಳೀಯರು ಹರಸಾಹಸ ಪಟ್ಟು ರಕ್ಷಿಸಿದ ಘಟನೆ ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ನೊನಾಲು ಎಂಬಲ್ಲಿ ನಡೆದಿದೆ. ಮಣ್ಣಿನಡಿ ಸಿಲುಕಿದ್ದ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿ ರಾಜೇಶ್ ಪೂಜಾರಿ (28)ಯನ್ನು ರಕ್ಷಿಸಲಾಗಿದ್ದು, ಕುಪ್ಪೆಪದವಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನೊನಾಲು-ಕುಕ್ಕಟ್ಟೆ-ಗಂಜಿಮಠ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ರಾಜೇಶ್ ಮತ್ತು...
ರಾಜಕೀಯ

ಮಂಗಳೂರಿನ ಫಾರಂ ಮಾಲ್ ನಲ್ಲಿ ಯುವತಿಯರನ್ನು ಚುಡಾಯಿಸಿ, ಪ್ರಶ್ನಿಸಿದ ಹಿಂದೂ ಯುವನ ಮೇಲೆ ಹಲ್ಲೆ ನಡೆಸಿದ ಮತಾಂಧರನ್ನು ಮಟ್ಟ ಹಾಕಲು ಸರ್ಕಾರ ಬದ್ಧವಾಗಿದೆ ; ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ – ಕಹಳೆ ನ್ಯೂಸ್

ಮಂಗಳೂರು, ಸೆ 26 : ಯುವತಿಯೋರ್ವಳನ್ನು ಚುಡಾಯಿಸುತ್ತಿದ್ದ ಗುಂಪನ್ನು ತಡೆದು ಪ್ರಶ್ನಿಸಿದ ಯುವಕನಿಗೆ ತಂಡವೊಂದು ಹಲ್ಲೆಗೈದ ಘಟನೆ ನಿಜಕ್ಕೂ ಖಂಡನೀಯ. ಈ ಸಂಬಂಧ ಈಗಾಗಲೇ ಪೊಲೀಸರು ಇಬ್ಬರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಯುವತಿಯರನ್ನು ಚುಡಾಯಿಸುವ ಹಾಗೂ ಪ್ರಶ್ನಿಸಿದಾಗ ಹಲ್ಲೆ‌ ನಡೆಸುವ ಪ್ರಕರಣಗಳನ್ನು ಸಹಿಸಲು ಬಿಜೆಪಿ ಸರ್ಕಾರದಲ್ಲಿ ಅವಕಾಶವಿಲ್ಲ. ಮತಾಂಧರನ್ನು ಮಟ್ಟ ಹಾಕಲು ಸರ್ಕಾರ ಬದ್ದವಾಗಿದೆ ಎಂದು ಆಶ್ವಾಸನೆ ನೀಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಟ್ವೀಟ್ ಹೇಳಿದ್ದಾರೆ....
ರಾಜಕೀಯಸುದ್ದಿ

ಕದ್ರಿ ಪಾರ್ಕ್ ಬಳಿ ಮತಯಾಚಿಸಿದ ಬಿಜೆಪಿ ಲೋಕಸಭಾ ಅಭ್ಯರ್ಥಿ ಸಂಸದ ನಳಿನ್ – ಕಹಳೆ ನ್ಯೂಸ್

ಮಂಗಳೂರು: ನಗರದ ಕದ್ರಿ ಪಾರ್ಕ್ ಬಳಿ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಕೃಷ್ಣ ಜೆ ಪಾಲೆಮಾರ್, ಶ್ರೀ ನಾಗರಾಜ ಶೆಟ್ಟಿ, ಮಾಜೀ ಶಾಸಕ ಯೋಗೀಶ್ ಭಟ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಮಾ.ನ.ಪಾ ಸದಸ್ಯರಾದ ಸುಧೀರ್ ಶೆಟ್ಟಿ, ಪ್ರೇಮಾನಂದ್ ಶೆಟ್ಟಿ, ರೂಪ ಬಂಗೇರ, ಪಕ್ಷದ ಮುಖಂಡರಾದ ರಾಜ್ ಗೋಪಾಲ್ ರೈ,...
ಸುದ್ದಿ

ಮಂಗಳೂರಿನಲ್ಲಿ ತಲೆಎತ್ತಲಿದೆ ಪ್ರಪ್ರಥಮ ವಿದ್ಯಾರ್ಥಿ ಕೇಂದ್ರಿತ ಶಾಲೆ – ಕಹಳೆ ನ್ಯೂಸ್

ಮಂಗಳೂರು; ದಿ ಭಾರತ್ ಗ್ರೂಪ್, ಮಂಗಳೂರಿನಲ್ಲಿ ಪ್ರಪ್ರಥಮ ವಿದ್ಯಾರ್ಥಿ ಕೇಂದ್ರಿತ ಶಾಲೆಯನ್ನು ಸ್ಥಾಪಿಸಲು ಕೈ ಜೋಡಿಸಿದೆ. ಶೀಘ್ರದಲ್ಲೇ ಶಾಲೆಯನ್ನು ಆರಂಭಿಸಲಿದ್ದೇವೆ ಎಂದು ಭಾರತ ಗ್ರೂಪಿನ ಆಡಳಿತ ವರ್ಗದವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿಯನ್ನು ನೀಡಿದರು. ಶಿಕ್ಷಣವೆಂದರೆ ಮಾಕ್ರ್ಸ್ ಹಾಗೂ ಗ್ರೇಡ್‍ಗಳ ಸ್ಪರ್ಧೆ ಮಾತ್ರವಲ್ಲ, ಎಂಬ ವಿಷಯವನ್ನು ಪ್ರತಿಪಾದಿಸಲು ನಿರ್ಧರಿಸಿದ್ದು. ಮಂಗಳೂರಿನ ಚಿರಪರಿಚಿತ ಹೆಸರಾಂತ ಗ್ರೂಪ್‍ನೊಂದಿಗೆ ಕೈ ಜೋಡಿಸಿದಾಗ ದಿ ಭಾರತ್ ಸಂಸ್ಥೆಯ ಉದಯಕ್ಕೆ ಕಾರಣವಾಯಿತು ಎಂದು ಕೇಂದ್ರೀಕೃತ ಶಾಲೆಯನ್ನು ಸ್ಥಾಪಿಸುವ ಕುರಿತಾದ...
ಸುದ್ದಿ

ಮಂಗಳೂರಿನಿಂದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಣಕ್ಕೆ – ಕಹಳೆ ನ್ಯೂಸ್

ಕರ್ನಾಟಕದ ಮೈತ್ರಿ ಸರ್ಕಾರ 18 ಕ್ಷೇತ್ರದಿಂದ ಕಣಕ್ಕಿಲಿಯೋ ನಾಯಕರ ಪಟ್ಟಿಯನ್ನು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಬಹುನಿರೀಕ್ಷಿತ ಕ್ಷೇತ್ರಗಳಲ್ಲಿ ಒಂದಾದ ಮಂಗಳೂರು ಲೋಕಸಭಾ ಚುನಾವಾಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಥುನ್ ರೈಯನ್ನ ಆಯ್ಕೆ ಮಾಡಲಾಗಿದೆ. ಜೊತೆಗೆ ಇಂದು ಮಿಥುನ್ ರೈ ದೇವಾಲಯ, ಮಸೀದಿ ಹಾಗೂ ಚರ್ಚ್‍ಗಳಿಗೆ ಭೇಟಿ ನೀಡಿದ್ದಾರೆ....
ಸುದ್ದಿ

ವೇಶ್ಯಾವಾಟಿಕೆ ಮಾಡುತ್ತಿದ್ದ ಮನೆಯ ಮೇಲೆ ಸಿಸಿಬಿ ಪೊಲೀಸ್ ದಾಳಿ – ಕಹಳೆ ನ್ಯೂಸ್

ಮಂಗಳೂರು: ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಅಶೋಕ ನಗರದ ಮನೆವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಪಡೆದು ದಾಳಿ ನಡೆಸಿದರು. ದಾಳಿಯಲ್ಲಿ ವೇಶ್ಯಾವಾಟಿಕೆ ಗೃಹ ನಡೆಸುವ ಮಹಿಳೆಯ ಸಹಿತ ಇಬ್ಬರನ್ನು ಬಂಧಿಸಿದ್ದಾರೆ. ಅಶೋಕ ನಗರದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಸಿಸಿಬಿ ಪೊಲೀಸರು, ದಾಳಿ ನಡೆಸಿದ್ದಾರೆ. ಈ ವೇಳೆ ಮೂರು ಮೊಬೈಲ್ ಮತ್ತು ೬,೪೦೦ ರೂ. ನಗದು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ನೊಂದ...
ಸುದ್ದಿ

ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಮಂಗಳೂರು: ನಗರದ ಯೆಯ್ಯಾಡಿ ಬಳಿ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡದಿದೆ. ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನ ಲೋಕನಾಥ್ ಎಂದು ಹೇಳಲಾಗ್ತಾ ಇದೆ. ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಎಂದು ಹೇಳಲಾಗ್ತಾ ಇದೆ. ಮೃತ ವ್ಯಕ್ತಿಯನ್ನ ಕದ್ರಿ ಠಾಣೆಯಲ್ಲಿ ಕತ್ಯವ್ಯದಲ್ಲಿದ್ದ ಪೇದೆ ಎಂದು ಗುರುತಿಸಲಾಗಿದೆ. ಸದ್ಯ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
1 2 3 5
Page 1 of 5