Friday, September 20, 2024

archiveSiddaganga Swamy

ಸುದ್ದಿ

ನಡೆದಾಡುವ ದೇವರು ಶಿವಕುಮಾರ ಶ್ರೀಗಳು ಇಚ್ಛಾಮರಣಿ; ಡಾ.ರವೀಂದ್ರ – ಕಹಳೆ ನ್ಯೂಸ್

ನಡೆದಾಡುವ ದೇವರು ಶಿವಕುಮಾರ ಶ್ರೀಗಳು ಇಚ್ಛಾಮರಣಿ ಎಂದು ಡಾ.ರವೀಂದ್ರ ಹೇಳಿದ್ದಾರೆ. ಶ್ರೀಗಳ ಆರೋಗ್ಯ ವೈದ್ಯ ಡಾ.ರವೀಂದ್ರ ಅವರು ಮಾತನಾಡಿ ಶ್ರೀಗಳು ಬಯಸುವವರೆಗೆ ಚಿಕಿತ್ಸೆ ನೀಡುತ್ತೇವೆ. ಅವರ ದೇಹದ ಪ್ರೊಟೀನ್ ಅಂಶದಲ್ಲಿ ಸುಧಾರಣೆ ಆಗಿದೆ ಎಂದರು. ಆದರೆ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಹಾಗಾಗಿ ಅವರಿಗೆ ಸ್ವಯಂ ಆಗಿ ಉಸಿರಾಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಸಮಯ ಬೇಕು. ಶ್ರೀಗಳಿಗೆ 112 ವರ್ಷ ವಯಸ್ಸು, ಈ ವಯಸ್ಸಿನಲ್ಲಿ 6 ಬಾರಿ ಎಂಡೋಸ್ಕೋಪಿ ಮಾಡಿಸಿಕೊಂಡಿದ್ದು, ಈಗಲೂ ಓಡಾಡುತ್ತಿದ್ದಾರೆ...
ಸುದ್ದಿ

ಶಿವಕುಮಾರ ಸ್ವಾಮೀಜಿ ಆರೋಗ್ಯವಾಗಿದ್ದಾರೆ; ಬಿಜಿಎಸ್ ಆಸ್ಪತ್ರೆಯ ವೈದ್ಯರ ತಂಡ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ನಗರದ ಬಿಜಿಎಸ್ ಆಸ್ಪತ್ರೆಯ ವೈದ್ಯರ ತಂಡದಿಂದ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಅವರಿಗೆ ಮಠದಲ್ಲಿಯೇ ಪೂರಕವಾದ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ವಾಮೀಜಿಯ ಆರೋಗ್ಯವಾಗಿದ್ದಾರೆ ಎಂದು ಬಿಜಿಎಸ್ ಆಸ್ಪತ್ರೆ ಹಿರಿಯ ವೈದ್ಯ ಡಾ. ರವೀಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಯವರಿಗೆ ಸ್ವಲ್ಪ ಕೆಮ್ಮು ಹಾಗೂ ಸೋಂಕು ಇತ್ತು. ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಮಠದಲ್ಲಿ ಆಸ್ಪತ್ರೆಯಂತೆ ಚಿಕಿತ್ಸಾ ಸೌಲಭ್ಯವನ್ನು ಮಾಡಿಕೊಳ್ಳಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ವಾಮೀಜಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತು...
ಸುದ್ದಿ

ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ – ಕಹಳೆ ನ್ಯೂಸ್

ತುಮಕೂರಿನ ಸಿದ್ದಗಂಗಾ ಮಠದ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಲವಲವಿಕೆಯಿಂದಿಲೇ ಇದ್ದಾರೆ, ಶ್ರಿಗಳಿಗೆ ಎಂಡೋಸ್ಕೋಫ್ ಪರೀಕ್ಷೆ ಮಾಡಲಾಗುತ್ತಿದೆ, ಬಳಿಕ ಶಸ್ತ್ರ ಚಿಕಿತ್ಸೆಗೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸುತ್ತೂರು ಸ್ವಾಮೀಜಿಗಳು ಹೇಳಿದ್ದಾರೆ. ಇನ್ನು ಶ್ರೀಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಸಿದ್ದಗಂಗಾ ಮಠದ ಕಿರಿಯ ಶ್ರೀಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಶ್ರೀಗಳ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ಮಾಹಿತಿ...